ಕಪ್ಪುಹಣದಿಂದಲೇ ರಾಜಕೀಯ: ರಾಜಸ್ಥಾನ ಸಿಎಂ ಗೆಹ್ಲೋಟ್
Team Udayavani, Dec 7, 2019, 10:20 PM IST
ಜೋಧ್ಪುರ್: ರಾಜಕೀಯ ನಡೆಯುವುದೇ ಕಪ್ಪುಹಣದಿಂದ ಎಂದು ಹೇಳುವ ಮೂಲಕ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಚ್ಚರಿ ಮೂಡಿಸಿದ್ದಾರೆ.
ಜೋಧ್ಪುರ ಹೈಕೋರ್ಟ್ನ ಹೊಸ ಕಟ್ಟಡ ಉದ್ಘಾಟನೆ ವೇಳೆ ಮಾತನಾಡಿದ ಅವರು, ಯಾವನೇ ಹೊಸ ನಾಯಕ ರಾಜಕೀಯ ಪ್ರವೇಶ ಮಾಡಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಅಕ್ರಮ ಮೂಲದ ಹಣದಿಂದಲೇ. ಎಲ್ಲಾ ಆಟದ ಮೂಲವೇ ರಕ್ತಸಿಕ್ತ ಹಣ. ಅದನ್ನು ನಿಯಂತ್ರಿಸಬೇಕಾಗಿದೆ ಎಂದು ಹೇಳಿದ್ದಾರೆ. ನ್ಯಾಯಾಲಯದಲ್ಲಿ ಸತ್ಯವನ್ನೇ ಹೇಳಲಾಗುತ್ತದೆ. ಭ್ರಷ್ಟಾಚಾರ ವಿಚಾರಕ್ಕೆ ಬಂದಾಗ ಹಲವಾರು ಮಂದಿ ಸ್ವಯಂ ಪ್ರೇರಿತರಾಗಿ ಸುಪ್ರೀಂಕೋರ್ಟ್ಗೆ, ಆದಾಯ ತೆರಿಗೆ ಇಲಾಖೆಗೆ, ಸಿಬಿಐಗೆ, ಜಾರಿ ನಿರ್ದೇಶನಾಲಯಕ್ಕೆ ದೂರು ನೀಡುತ್ತಾರೆ ಎಂದರು. ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬೆx, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!