ತೃತೀಯ-ಚತುರ್ಥ ರಂಗದಿಂದ ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ: ಪ್ರಶಾಂತ್ ಕಿಶೋರ್
Team Udayavani, Jun 22, 2021, 1:14 PM IST
ಮುಂಬೈ: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳ ರಂಗದೊಂದಿಗೆ ಯಾವುದೇ ಒಡನಾಟವನ್ನು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ತಳ್ಳಿಹಾಕಿದ್ದಾರೆ. ಅಲ್ಲದೆ ತೃತೀಯ ಅಥವಾ ಚತುರ್ಥ ರಂಗದಿಂದ ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯ ಎಂದು ನನಗನಿಸುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಈ ಹಿಂದೆ ಪ್ರಯೋಗ ಮಾಡಲಾಗಿರುವ ತೃತೀಯ ರಂಗದ ಮಾದರಿ ಪುರಾತನವಾದುದು. ಸದ್ಯದ ರಾಜಕೀಯ ಪರಿಸ್ಥಿತಿಗೆ ಇದು ಸರಿಯಾಗಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಇದನ್ನೂ ಓದಿ:ರಾಹುಲ್ ಗಾಂಧಿ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್: ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗಿನ ಸಭೆಗಳು, 2024 ರ ಸಾರ್ವತ್ರಿಕ ಚುನಾವಣೆಗೆ ತೃತೀಯ ರಂಗ ಮತ್ತೆ ಒಟ್ಟಾಗುತ್ತಿದೆ ಎಂಬ ಊಹಾಪೋಹಗಳ ಕಾರಣದಿಂದ ಪ್ರಶಾಂತ್ ಕಿಶೋರ್ ಈ ಸ್ಪಷ್ಟನೆ ನೀಡಿದ್ದಾರೆ.
ಶರದ್ ಪವಾರ್ ಅವರನ್ನು ಪ್ರಶಾಂತ್ ಕಿಶೋರ್ ಅವರು ಎರಡು ವಾರದಲ್ಲಿ ಎರಡು ಬಾರಿ ಭೇಟಿಯಾಗಿದ್ದಾರೆ. ಈ ಸಭೆಗಳ ಕುರಿತು ಮಾತನಾಡಿದ ಅವರು, ಇಬ್ಬರೂ ರಾಜಕೀಯ ಚರ್ಚೆಗಳನ್ನು ಮಾಡಿದ್ದೇವೆ. ಬಿಜೆಪಿ ವಿರುದ್ಧದ ಹೋರಾಟದಲ್ಲಿ ಏನು ಕೆಲಸ ಮಾಡುತ್ತದೆ ಮತ್ತು ಏನು ಆಗುವುದಿಲ್ಲ ಎಂಬ ಸಾಧ್ಯತೆಗಳ ಬಗ್ಗೆ ಮಾತನಾಡಿದ್ದೇವೆ. ಸಂಭವನೀಯ ತೃತೀಯ ರಂಗ ಮಾದರಿಯ ಸದ್ಯ ಚರ್ಚೆಯ ವಿಚಾರವಾಗಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ