6ನೇ ಹಂತ: ಬಂಗಾಲದಲ್ಲಿ ಮತ್ತೆ ಹಿಂಸೆ
Team Udayavani, May 13, 2019, 6:00 AM IST
ಹೊಸದಿಲ್ಲಿ: ಪ್ರತಿ ಹಂತದಂತೆ ಆರನೇ ಹಂತದ ಚುನಾವಣೆಯಲ್ಲೂ ಪಶ್ಚಿಮ ಬಂಗಾಲದಲ್ಲಿ ಹಿಂಸೆ ಮುಂದುವರಿದಿದ್ದು, ತೃಣಮೂಲ ಕಾಂಗ್ರೆಸ್ ಬೆಂಬಲಿಗರು ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.
ಕೇಶ್ಪುರದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬಂದಿ ಮೇಲೆ ಟಿಎಂಸಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರೆ, ಬಂಕುರಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದಾರೆ. ಬಿಹಾರದಲ್ಲಿ ಗೃಹರಕ್ಷಕ ಸಿಬಂದಿಯೊಬ್ಬರ ಬಂದೂಕಿನಿಂದ ಅಚಾತುರ್ಯವಾಗಿ ಗುಂಡು ಹಾರಿದ ಪರಿಣಾಮ, ಮತಗಟ್ಟೆ ಸಿಬಂದಿ ಅಸುನೀಗಿದ ಘಟನೆ ಸಂಭವಿಸಿದೆ.
ಒಟ್ಟು 7 ಹಂತಗಳ ಪೈಕಿ 6ನೇ ಹಂತದ ಮತದಾನವು ರವಿವಾರ ಮುಕ್ತಾಯಗೊಂಡಿದ್ದು, ದಿಲ್ಲಿ ಸಹಿತ 7 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಈ ಹಂತದಲ್ಲಿ ಒಟ್ಟಾರೆ ಶೇ.63.3ರಷ್ಟು ಮತದಾನ ದಾಖಲಾಗಿದೆ.
ಪಶ್ಚಿಮ ಬಂಗಾಲದ ಬಿಜೆಪಿ ಅಭ್ಯರ್ಥಿ, ಮಾಜಿ ಐಪಿಎಸ್ ಅಧಿಕಾರಿ ಭಾರ್ತಿ ಘೋಷ್ ಮೇಲೆ ತೃಣಮೂಲ ಕಾಂಗ್ರೆಸ್ನ ಬೆಂಬಲಿಗರಿಂದ ಹಲ್ಲೆ ನಡೆದಿದೆ. ಕೇಶ್ಪುರ ಮತಗಟ್ಟೆಯಲ್ಲಿ ಚುನಾವಣ ಅಕ್ರಮ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಭಾರ್ತಿ ಘೋಷ್ ಅಲ್ಲಿಗೆ ಧಾವಿಸಿದಾಗ, ಟಿಎಂಸಿ ಕಾರ್ಯಕರ್ತರು ಏಕಾಏಕಿ ಘೋಷ್ ಅವರ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ, ಬಾಂಬ್ ಎಸೆದಿದ್ದಾರೆ. ಜತೆಗೆ ಘೋಷ್ ಮೇಲೆ ಹಲ್ಲೆಯನ್ನೂ ನಡೆಸಿ, ಅಟ್ಟಾಡಿಸಲಾಗಿದೆ. ಕೊನೆಗೆ ತಾನು ದೇವಸ್ಥಾನವೊಂದರಲ್ಲಿ ಆಶ್ರಯ ಪಡೆದಿದ್ದಾಗಿ ಘೋಷ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್