ಒಡಿಶಾಗೆ ಫೋನಿ ಹೊಡೆತ

ಇಂದು ಪಶ್ಚಿಮ ಬಂಗಾಳಕ್ಕೆ, ಸಂಜೆ ವೇಳೆಗೆ ಬಾಂಗ್ಲಾದೇಶಕ್ಕೆ ಪ್ರವೇಶ

Team Udayavani, May 4, 2019, 6:00 AM IST

19

ಹೊಸದಿಲ್ಲಿ: ನಿರೀಕ್ಷೆಯಂತೆಯೇ ಬಂಗಾಲ ಕೊಲ್ಲಿಯಲ್ಲಿ ಕೇಂದ್ರೀಕೃತವಾಗಿದ್ದ “ಫೋನಿ’ ಚಂಡ ಮಾರುತ ಶುಕ್ರವಾರ ಬೆಳಗ್ಗೆ ಪುರಿ ಕರಾವಳಿ ಮೂಲಕ ಒಡಿಶಾ ಪ್ರವೇಶಿಸಿದ್ದು, ರಾಜ್ಯಾದ್ಯಂತ ಭಾರೀ ಹಾನಿ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ 11 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದ್ದರಿಂದಾಗಿ ಹೆಚ್ಚಿನ ಸಾವು ನೋವು ಸಂಭವಿಸಿಲ್ಲ. ರಾಜ್ಯದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಹೇಳಿದೆ. ಅಲ್ಲದೆ ವಿವಿಧ ಕಡೆಗಳಲ್ಲಿ 160 ಮಂದಿ ಗಾಯಗೊಂಡಿದ್ದಾರೆ.

ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ ಪುರಿ ಕರಾವಳಿಗೆ ಫೋನಿ ಚಂಡಮಾರುತ ಅಪ್ಪಳಿಸಿತು. ಸಮುದ್ರದಲ್ಲಿ ಭಾರೀ ತೀವ್ರತೆಯಿಂದ ಕೂಡಿದ್ದ ಚಂಡಮಾರುತದ ವೇಗ ಅಲ್ಪ ಕಡಿಮೆಯಾದರೂ ಪುರಿ ಪ್ರವೇಶಿಸುವಾಗ ಗಂಟೆಗೆ ಸುಮಾರು 200 ಕಿ.ಮೀ. ವೇಗದಲ್ಲಿತ್ತು. ಒಟ್ಟು ಒಡಿಶಾದ 14 ಜಿಲ್ಲೆಗಳಲ್ಲಿ ಫೋನಿಯಿಂದ ಹಾನಿ ಯಾಗಿದೆ. ಸಾವಿರಾರು ಬೃಹತ್‌ ಗಾತ್ರದ ಮರಗಳು ನೆಲ ಕ್ಕುರುಳಿವೆ. ಅಲ್ಲಲ್ಲಿ ವಿದ್ಯುತ್‌ ಕಂಬಗಳು, ಮೊಬೈಲ್‌ ಟವರ್‌ಗಳು ನೆಲಕ್ಕೆ ಉರುಳಿದ್ದರೆ, ಹಲವಾರು ಮನೆಗಳು ಕುಸಿದಿವೆ.

ಗಾಳಿಯ ರಭಸಕ್ಕೆ ಭುವನೇಶ್ವರದ ಏಮ್ಸ್‌ನ ಮೇಲ್ಛಾವಣಿಯೇ ಹಾರಿಹೋಗಿದೆ. ಆದರೆ ಆಸ್ಪತ್ರೆಯೊಳಗಿನ ಯಾವುದೇ ರೋಗಿಗಳಿಗೆ ಹಾನಿಯಾಗಿಲ್ಲ ಎಂದು ಒಡಿಶಾ ಸರಕಾರ ಸ್ಪಷ್ಟಪಡಿಸಿದೆ. ಇಡೀ ರಾಜ್ಯಾದ್ಯಂತ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಎನ್‌ಡಿಆರ್‌ಎಫ್ ಹೇಳಿದೆ. 160 ಮಂದಿ ಗಾಯಗೊಂಡಿದ್ದಾರೆ ಎಂದೂ ತಿಳಿಸಿದೆ.

ಒಡಿಶಾದ ನಾಲ್ಕು ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿಯಾಗಿದೆ. ಕಟಕ್‌, ಖೋರ್ಡಾ, ಭುವನೇಶ್ವರ ಮತ್ತು ಪುರಿ ಜಿಲ್ಲೆಗಳಲ್ಲಿ ಫೋನಿಯ ತೀವ್ರತೆ ಹೆಚ್ಚಾಗಿದೆ. ಪರಿಹಾರ ಕಾರ್ಯಾಚರಣೆಗೆ ರೈಲ್ವೇ ಇಲಾಖೆ, ಭಾರತೀಯ ವಾಯು ಸೇನೆ, ನೌಕಾಪಡೆಗಳೂ ಕೈಜೋಡಿಸಿವೆ. ಶನಿವಾರ ಬೆಳಗ್ಗೆ ವೇಳೆಗೆ ಫೋನಿ ಚಂಡಮಾರುತ ಪಶ್ಚಿಮ ಬಂಗಾಲ ಪ್ರವೇಶಿಸಲಿದೆ. ಇದರಿಂದಾಗಿ ಪಶ್ಚಿಮ ಬಂಗಾಲದ ಸುತ್ತಲಿನ ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ.

11.54 ಲಕ್ಷ ಮಂದಿ ಸ್ಥಳಾಂತರ: ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾದ 18 ಜಿಲ್ಲೆಗಳ 11.50 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಇವರಿಗೆ 6,564 ನಿರಾಶ್ರಿತ ಶಿಬಿರಗಳಲ್ಲಿ ವಾಸ್ತವ್ಯ ಕಲ್ಪಿಸಲಾಗಿದೆ. ಉಚಿತವಾಗಿ ಆಹಾರ ವ್ಯವಸ್ಥೆ ಮಾಡಲಾಗಿದೆ.

ಆಂಧ್ರದಲ್ಲೂ ಅಬ್ಬರ: ಆಂಧ್ರ ಪ್ರದೇಶದಲ್ಲೂ ಫೋನಿಯ ಹಾನಿ ಹೆಚ್ಚಾಗಿದೆ. 2,000 ವಿದ್ಯುತ್‌ ಕಂಬಗಳು, 117 ಸಬ್‌ ಸ್ಟೇಷನ್‌ಗಳಿಗೆ ಹಾನಿಯಾಗಿದೆ. ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ. ಶ್ರೀಕಾಕುಲಂನಲ್ಲಿ ಸುಮಾರು 20 ಸಾವಿರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಇಲ್ಲಿ 126 ನಿರಾಶ್ರಿತ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಒಟ್ಟು 733 ಗ್ರಾಮಗಳಿಗೆ ಹಾನಿಯಾಗಿದೆ. ಸದ್ಯ ಅಲ್ಲಿ ನೀತಿ ಸಂಹಿತೆ ಸಡಿಲ ಮಾಡಲಾಗಿದೆ. ಪೂರ್ವ ಗೋದಾವರಿ, ವಿಶಾಖಪಟ್ಟಣ, ವಿಜಯನಗರ ಮತ್ತು ಶ್ರೀಕಾಕುಲಂ ಜಿಲ್ಲೆಗಳಲ್ಲಿ ನೀತಿ ಸಂಹಿತೆ ಸಡಿಲ ಮಾಡಲಾಗಿದೆ.

5 ಲಕ್ಷ ಜನರ ಸ್ಥಳಾಂತರ: ಇಂದು ಸಂಜೆ ವೇಳೆಗೆ ಫೋನಿ ಚಂಡಮಾರುತ ಬಾಂಗ್ಲಾದೇಶ ಪ್ರವೇಶಿಸಲಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸುಮಾರು 5 ಲಕ್ಷ ಜನರನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರ ಮಾಡಲಾಗಿದೆ.
45 ಸಾವಿರ ಜನರ ಸ್ಥಳಾಂತರ: ಅತ್ತ ಪಶ್ಚಿಮ ಬಂಗಾಲದಲ್ಲೂ ಸುಮಾರು 45 ಸಾವಿರ ಜನರನ್ನು ಸ್ಥಳಾಂತರರಿಸಲಾಗಿದೆ. ನಾಡಿಯಾ, ಮಿಡ್ನಾಪುರ, ಸೌತ್‌ 24 ಪರಗಣ, ಹೌರಾ, ನಾರ್ತ್‌ 24 ಪರಗಣಗಳಲ್ಲಿ ಸ್ಥಾಪಿಸಲಾಗಿರುವ ನಿರಾಶ್ರಿತ ಶಿಬಿರಗಳಲ್ಲಿ ಇವರಿಗೆ ಆಶ್ರಯ ಕಲ್ಪಿಸಲಾಗಿದೆ. ಶುಕ್ರವಾರವೇ ಬಂಗಾಲದಲ್ಲಿ ಭಾರೀ ಮಳೆಯಾಗಿದೆ.

ಭುವನೇಶ್ವರ, ಕೋಲ್ಕತಾ ಏರ್‌ಪೋರ್ಟ್‌ ಬಂದ್‌
ಚಂಡಮಾರುತ ಹಿನ್ನೆಲೆಯಲ್ಲಿ ಗುರುವಾರ ಮಧ್ಯ ರಾತ್ರಿ ಯಿಂದಲೇ ಭುವನೇಶ್ವರ ಮತ್ತು ಕೋಲ್ಕತಾ ವಿಮಾನ ನಿಲ್ದಾಣಗಳನ್ನು ಸ್ಥಗಿತಗೊಳಿಸಲಾಗಿದೆ. ಭುವನೇಶ್ವರ ವಿಮಾನ ನಿಲ್ದಾಣಕ್ಕೆ ವ್ಯಾಪಕ ಹಾನಿ ಯಾ ಗಿದೆ. ಪರಿಸ್ಥಿತಿ ನೋಡಿ ಕೊಂಡು ವಿಮಾನಗಳ ಕಾರ್ಯಾಚರಣೆ ಆರಂಭಿ ಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.

1,000 ಕೋಟಿ ರೂ. ಬಿಡುಗಡೆ
ಫೋನಿ ಅಬ್ಬರದಿಂದ ಹಾನಿಯಾಗಿರುವ ಜನತೆಗೆ ಪ್ರಧಾನಿ ಮೋದಿ ಸಾಂತ್ವನ ಹೇಳಿ ದ್ದಾರೆ. ನಿಮ್ಮ ಜತೆಗೆ ನಾವಿದ್ದೇವೆ ಎಂದೂ ಭರವಸೆ ನೀಡಿದ್ದಾರೆ. ಚಂಡಮಾರುತ ಆಗಮಿಸುವ ಮೊದಲೇ ಪರಿಹಾರ ಕಾರ್ಯಾ ಚರಣೆ  ಗಾಗಿ 1,000 ಕೋಟಿ ರೂ. ಬಿಡುಗಡೆ ಮಾಡ ಲಾಗಿದೆ ಎಂದೂ ತಿಳಿಸಿದ್ದಾರೆ. ಜತೆಗೆ ಒಡಿಶಾ, ಆಂಧ್ರ, ಪಶ್ಚಿಮ ಬಂಗಾಲ, ತಮಿಳುನಾಡು, ಪುದುಚೇರಿ ಸರಕಾರಗಳ ಜತೆ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.

200 ಕಿ.ಮೀ. ಫೋನಿ ಮಾರುತದ ಅಬ್ಬರ
160ಮಂದಿಗೆ ಗಾಯ
11.54 ಲಕ್ಷ ಒಡಿಶಾದಲ್ಲೇ ಸ್ಥಳಾಂತರಗೊಂಡವರು
20,000 ಆಂಧ್ರದಲ್ಲಿನ ನಿರಾಶ್ರಿತರ ಶಿಬಿರದಲ್ಲಿರುವವರು
08 ಒಡಿಶಾದಲ್ಲಿ ಮೃತರ ಸಂಖ್ಯೆ
14 ಒಡಿಶಾದಲ್ಲಿನ ಜಿಲ್ಲೆಗಳಿಗೆ ಹಾನಿ
6,564 ಸ್ಥಾಪಿಸಲಾಗಿರುವ ನಿರಾಶ್ರಿತ ಶಿಬಿರಗಳು
45,000 ಪಶ್ಚಿಮ ಬಂಗಾಲದಲ್ಲಿ ಸ್ಥಳಾಂತರ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.