ಅತ್ಯಾಚಾರ ಪ್ರಕರಣ : ಜೈಲು ಶಿಕ್ಷೆಗೊಳಗಾಗಿರುವ ಕ್ರೈಸ್ತ ಧರ್ಮಗುರು ಉಚ್ಛಾಟನೆ
Team Udayavani, Mar 1, 2020, 4:01 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಿರುವನಂತಪುರಂ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತಾಗಿ ತನ್ನ ಶೂನ್ಯ ಸಹನೆಯನ್ನು ಪ್ರದರ್ಶಿಸಿರುವ ವ್ಯಾಟಿಕನ್ ಅತ್ಯಾಚಾರ ಆರೋಪ ಸಾಬೀತುಗೊಂಡು ಇದೀಗ ಜೈಲುಶಿಕ್ಷೆಯನ್ನು ಅನುಭವಿಸುತ್ತಿರುವ ಕೇರಳದ ಧರ್ಮಗುರುವೊಬ್ಬರನ್ನು ಅವರ ಎಲ್ಲಾ ಧಾರ್ಮಿಕ ಕರ್ತವ್ಯ ಹಾಗೂ ಹಕ್ಕುಗಳಿಂದ ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಅವರು ಉಚ್ಛಾಟಿಸಿದ್ದಾರೆ. ಈ ಮಾಹಿತಿಯನ್ನು ಚರ್ಚ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಇಲ್ಲಿನ ಮನಾಂತವಾದಿ ಡಯೋಸಿಸ್ ನಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಪೋಕ್ಸೋ ನ್ಯಾಯಾಲಯದಲ್ಲಿ ಸಾಬೀತುಗೊಂಡು ಇದೀಗ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಸಿರಿಯೋ-ಮಲಬಾರ್ ಚರ್ಚ್ ಧರ್ಮಗುರು ರಾಬಿನ್ ವಡಕ್ಕುಂಶ್ಯೇರಿ ಅವರೇ ವ್ಯಾಟಿಕನ್ ನಿಂದ ಉಚ್ಛಾಟನೆಗೊಳಗಾದವರಾಗಿದ್ದಾರೆ.
2017ರಲ್ಲಿ ಈ ಪ್ರಕರಣ ಬೆಳಕಿಗೆ ಬಂದ ದಿನದಂದೇ ರಾಬಿನ್ ಅವರನ್ನು ಧರ್ಮಗುರು ಕರ್ತವ್ಯದಿಂದ ವಜಾಗೊಳಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ತಲಶ್ಯೇರಿಯ ಪೋಕ್ಸೋ ನ್ಯಾಯಾಲಯವು ಕಳೆದ ವರ್ಷವಷ್ಟೇ ರಾಬಿನ್ ವಡಕ್ಕುಂಶ್ಯೇರಿ ಅವರಿಗೆ 20 ವರ್ಷದ ಕಠಿಣ ಸೆರೆವಾಸ ಶಿಕ್ಷೆ ಹಾಗೂ ಮೂರು ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ