ವೇದಿಕೆಯಲ್ಲಿ ಹಾಡುತ್ತಿರುವಾಗಲೇ ಕೊನೆಯುಸಿರೆಳೆದ ಒಡಿಶಾ ಖ್ಯಾತ ಗಾಯಕ ಮಹಾಪಾತ್ರ
ಮುರಳಿ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ.
Team Udayavani, Oct 4, 2022, 1:46 PM IST
ಭುವನೇಶ್ವರ್: ದುರ್ಗಾ ಪೂಜೆಯ ಕಾರ್ಯಕ್ರಮದ ವೇದಿಕೆಯಲ್ಲಿ ಹಾಡುತ್ತಿರುವಾಗಲೇ ಕುಸಿದು ಬಿದ್ದು ಜನಪ್ರಿಯ ಒಡಿಶಾ ಗಾಯಕ ಮುರಳಿ ಮಹಾಪಾತ್ರ ಅವರು ಸಾವನ್ನಪ್ಪಿರುವ ಘಟನೆ ಕೋರಾಪುಟ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಚಿಂತಾಜನಕ; ಐಸಿಯುನಲ್ಲಿ ಚಿಕಿತ್ಸೆ
ಕಾರ್ಯಕ್ರಮದಲ್ಲಿ ಕೆಲವು ಹಾಡುಗಳನ್ನು ಹಾಡಿದ್ದ ಮುರಳಿ ಮಹಾಪಾತ್ರ ಅವರು ದಿಢೀರನೆ ವೇದಿಕೆ ಮೇಲಿದ್ದ ಕುರ್ಚಿಯ ಮೇಲೆ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು.
ಮುರಳಿ ಮಹಾಪಾತ್ರ (59ವರ್ಷ) ಅವರು ಹೃದಯಾಘಾತದಿಂದ ವೇದಿಕೆಯಲ್ಲೇ ಸಾವನ್ನಪ್ಪಿರುವುದಾಗಿ ಅವರ ಸಹೋದರ ವಿಭೂತಿ ಪ್ರಸಾದ್ ಮಹಾಪಾತ್ರ ತಿಳಿಸಿದ್ದರು. ಮುರಳಿ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ.
ದಿವಂಗತ ಒಡಿಯಾ ಗಾಯಕ, ಗೀತರಚನೆಕಾರ ಮತ್ತು ಸಂಯೋಜಕ ಜೇಪೋರ್ ಅಕ್ಷಯ ಮೊಹಾಂತಿ ಅವರ ಸಂಗೀತದ ಶೈಲಿಯನ್ನು ಮುರಳಿ ಅವರು ಅನುಕರಿಸುತ್ತಿದ್ದುದರಿಂದ “ಜೇಪೋರ್ ನ ಅಕ್ಷಯ್ ಮೊಹಾಂತಿ” ಎಂದು ಕರೆಯಲಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ