ಕೇರಳದಲ್ಲಿ ಮತ್ತೆ ಐವರಿಗೆ ಕೊರೊನಾ ಸೋಂಕು: ದೇಶದಲ್ಲಿ ವೈರಾಣುಪೀಡಿತರ ಸಂಖ್ಯೆ 39ಕ್ಕೆ ಏರಿಕೆ
Team Udayavani, Mar 8, 2020, 12:10 PM IST
ತಿರುವನಂತಪುರಂ: ಕೇರಳದಲ್ಲಿ ಮತ್ತೆ ಐವರಿಗೆ ಕೊರೊನಾ ಸೋಂಕು ತಗುಲಿರುವ ಕುರಿತು ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಖಚಿತಪಡಿಸಿದ್ದಾರೆ. ಆ ಮೂಲಕ ದೇಶದಲ್ಲಿ ಒಟ್ಟಾರೆಯಾಗಿ 39 ಜನರಿಗೆ ವೈರಾಣು ತಗುಲಿರುವುದು ಧೃಡಪಟ್ಟಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಇತ್ತೀಚಿಗಷ್ಟೇ ಕೇರಳದ ಮೂವರು ವ್ಯಕ್ತಿಗಳು ಇಟಲಿಗೆ ತೆರಳಿ ಹಿಂದಿರುಗಿದ್ದರು. ಇವರಿಂದ ಇಬ್ಬರು ಸಂಬಂಧಿಕರಿಗೂ ಕೂಡ ಸೋಂಕು ತಗುಲಿದೆ ಎಂದು ಆರೋಗ್ಯ ಸಚಿವೆ ಶೈಲಜಾ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಇಟಲಿಗೆ ತೆರಳಿದ್ದ ವ್ಯಕ್ತಿಗಳು ತಮ್ಮ ಪ್ರಯಾಣದ ವಿವರವನ್ನು ಸಮರ್ಪಕವಾಗಿ ನೀಡಿರಲಿಲ್ಲ. ಆರೋಗ್ಯ ತಪಾಸಣೆಗೂ ನಿರಾಕರಿಸಿದ್ದರು. ಆದರೆ ಮನವೊಲಿಕೆಯ ನಂತರ ಪರೀಕ್ಷೆಗೊಳಪಡಿಸಿದಾಗ ಸೋಂಕು ಇರುವುದು ಪತ್ತೆಯಾಯಿತು ಎಂದಿದ್ದಾರೆ.
ತಿಂಗಳ ಹಿಂದಷ್ಟೇ ಕೇರಳದಲ್ಲಿ ಮೂವರು ವ್ಯಕ್ತಿಗಳಿಗೆ ಸೋಂಕು ತಗುಲಿರುವುದು ಖಚಿತಗೊಂಡಿತ್ತು.ಇದು ದೇಶದಲ್ಲಿ ದಾಖಲಾದ ಮೊದಲ 3 ಪ್ರಕರಣವಾಗಿತ್ತು. ಆ ಬಳಿಕ ಸೂಕ್ತ ಚಿಕಿತ್ಸೆಯಿಂದ ಆ ಮೂವರು ಸೋಂಕಿನಿಂದ ಪಾರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ