ಕೋವಿಡ್ 19: ನವೆಂಬರ್ ವರೆಗೂ ಉಚಿತ ಅಕ್ಕಿ, ಬೇಳೆ ವಿತರಣೆ; ಪ್ರಧಾನಿ ಘೋಷಣೆ
ಈ ಎರಡು ಉಚಿತ ಯೋಜನೆಗೆ ಒಟ್ಟು 90 ಸಾವಿರ ಕೋಟಿ ರೂಪಾಯಿ ವ್ಯಯವಾಗಲಿದೆ ಎಂದು ತಿಳಿಸಿದರು.
Team Udayavani, Jun 30, 2020, 5:08 PM IST
ನವದೆಹಲಿ:ಕೋವಿಡ್ 19 ವೈರಸ್ ಹರಡುತ್ತಿರುವ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು “ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ವರೆಗೆ ವಿಸ್ತರಿಸುವುದಾಗಿ ಮಂಗಳವಾರ ಘೋಷಿಸಿದ್ದು, ಇದರಿಂದ ಪ್ರತಿ ತಿಂಗಳು ಸುಮಾರು 80 ಕೋಟಿಗೂ ಅಧಿಕ ಮಂದಿ ಐದು ಕೆಜಿ ಗೋಧಿ ಅಥವಾ ಅಕ್ಕಿ ಉಚಿತವಾಗಿ ಪಡೆಯಲಿದ್ದಾರೆ ಎಂದು ಹೇಳಿದರು.
ಕೊರೊನಾ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಪ್ರತಿಯೊಂದು ಕುಟುಂಬಕ್ಕೂ ನವೆಂಬರ್ ವರೆಗೆ ಉಚಿತವಾಗಿ ಒಂದು ಕೆಜಿ ಬೇಳೆಕಾಳು ನೀಡಲಾಗುವುದು. ಈ ಎರಡು ಉಚಿತ ಯೋಜನೆಗೆ ಒಟ್ಟು 90 ಸಾವಿರ ಕೋಟಿ ರೂಪಾಯಿ ವ್ಯಯವಾಗಲಿದೆ ಎಂದು ತಿಳಿಸಿದರು.
16ನಿಮಿಷಗಳ ಕಾಲ ಮಾತನಾಡಿದ ಅವರು, ಒಂದು ರಾಷ್ಟ್ರ ಒಂದು ರೇಷನ್ ಕಾರ್ಡ್ ಮಾದರಿಯಂತೆ, ದೇಶದ ಯಾವುದೇ ರಾಜ್ಯದಲ್ಲಿರುವ ವಲಸಿಗರಿಗೆ ಅವರ ರಾಜ್ಯದಲ್ಲಿಯೇ ಉಚಿತ ಪಡಿತರ ವಿತರಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ