ಜನಧನದಿಂದ ಬಡತನ ನೀಗಲು ಯತ್ನ: ಯೋಜನೆ ಆರು ವರ್ಷ ಪೂರೈಸಿದ್ದಕ್ಕೆ ಮೋದಿ ಹರ್ಷ
Team Udayavani, Aug 29, 2020, 6:13 AM IST
ಹೊಸದಿಲ್ಲಿ: ಕೇಂದ್ರ ಸರಕಾರ ಜಾರಿಗೊಳಿಸಿದ ‘ಜನ ಧನ’ ಯೋಜನೆ ಬಡತನ ನಿವಾರಣೆಯ ಪ್ರಯತ್ನ.
ಅದೊಂದು ದೂರಗಾಮಿ ಬದಲಾವಣೆ ತರುವಂಥದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿಯವರು ಘೋಷಣೆ ಮಾಡಿರುವ ಯೋಜನೆಗೆ ಆರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಟ್ವೀಟ್ ಮಾಡಿದ್ದಾರೆ.
‘ಶುಕ್ರವಾರಕ್ಕೆ ಜನಧನ ಯೋಜನೆ ಜಾರಿಯಾಗಿ ಆರು ವರ್ಷಗಳು ಪೂರ್ತಿಯಾದವು.
ಬ್ಯಾಂಕಿಂಗ್ ವ್ಯವಸ್ಥೆ ಹೊಂದಿಲ್ಲದವರಿಗೆ ಅದನ್ನು ನೀಡುವ ಉದ್ದೇಶದಿಂದ ಯೋಜನೆ ಜಾರಿಗೊಳಿಸಲಾಗಿತ್ತು.
ಇದರಿಂದಾಗಿ ಧನ್ಮಾತ್ಮಕವಾದ ಬದಲಾಣೆಗಳು ಉಂಟಾಗಿವೆ. ಕೋಟ್ಯಂತರ ಮಂದಿಗೆ ಅನುಕೂಲವಾಗುವುದರ ಜತೆಗೆ ಬಡತನ ನಿರ್ಮೂಲನೆಯ ನಿಟ್ಟಿನಲ್ಲಿಯೂ ಉತ್ತಮ ಹೆಜ್ಜೆಯನ್ನಿಟ್ಟಂತಾಗಿದೆ’ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
17.90 ಕೋಟಿ ಖಾತೆ: 2015ರ ಆಗಸ್ಟ್ನಲ್ಲಿ ದೇಶಾದ್ಯಂತ 17.90 ಕೋಟಿ ಖಾತೆಗಳು ಇದ್ದವು. ಹಾಲಿ ತಿಂಗಳಲ್ಲಿ ಖಾತೆಗಳ ಜಂಖ್ಯೆ 40.35 ಕೋಟಿಗಳಿಗೆ ಏರಿದೆ ಎಂದು ಪ್ರಧಾನಿ ಹರ್ಷ ವ್ಯಕ್ತಪಡಿಸಿದ್ದಾರೆ.
‘ಪ್ರಧಾನಮಂತ್ರಿ ಜನ ಧನ ಯೋಜನೆಯಿಂದಾಗಿ ಹಲವು ಕುಟುಂಬಗಳ ಆರ್ಥಿಕ ಭವಿಷ್ಯ ಸುಭದ್ರವಾಗಿದೆ. ಶೇ.63ರಷ್ಟು ಜನ ಫಲಾನುಭವಿಗಳು ಗ್ರಾಮೀಣ ಪ್ರದೇಶದವರು. ಶೇ.55ರಷ್ಟು ಮಂದಿ ಮಹಿಳೆಯರೇ ಆಗಿದ್ದಾರೆ. ನಗರ ಪ್ರದೇಶಗಳಲ್ಲಿ ಶೇ.36.4ರಷ್ಟು ಮಂದಿ ಪ್ರಯೋಜನ ಪಡೆದುಕೊಂಡಿದ್ದಾರೆ” ಎಂದು ಪ್ರಧಾನಿಯವರು ಬರೆದುಕೊಂಡಿದ್ದಾರೆ.
Thanks to the Pradhan Mantri Jan Dhan Yojana, the future of several families has become secure. A high proportion of beneficiaries are from rural areas and are women. I also applaud all those who have worked tirelessly to make PM-JDY a success. #6YearsOfJanDhanYojana pic.twitter.com/XqvCxop7AS
— Narendra Modi (@narendramodi) August 28, 2020
ಪ್ರಯೋಜನವೇನು?
– ಮೈಕ್ರೋ ಪಿಂಚಣಿ, ವಿಮೆ
– 2 ಲಕ್ಷ ರೂ.ವರೆಗೆ ಅಪಘಾತ ವಿಮೆ
– ಡೆಬಿಟ್ ಕಾರ್ಡ್
– ಶೂನ್ಯ ಠೇವಣಿ ಇರುವ ಉಳಿತಾಯ ಖಾತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ