ಪ್ರದ್ಯುಮ್ನ ಕೊಲೆ ಕೇಸ್: ವಯಸ್ಕನಂತೆ 17ರ ಆರೋಪಿಯ ವಿಚಾರಣೆ
Team Udayavani, Dec 20, 2017, 3:23 PM IST
ಹೊಸದಿಲ್ಲಿ : ಇಲ್ಲಿನ ರಯಾನ್ ಇಂಟರ್ನ್ಯಾಶನಲ್ ಸ್ಕೂಲ್ ನ ಎರಡನೇ ತರಗತಿಯ ವಿದ್ಯಾರ್ಥಿ ಪ್ರದ್ಯುಮ್ನ ನ ಕೊಲೆ ಆರೋಪಿಯಾಗಿರುವ 17ರ ಹರೆಯದ ಇದೇ ಶಾಲೆಯ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯನ್ನು ವಯಸ್ಕನಂತೆ ನ್ಯಾಯಾಲಯದಲ್ಲಿ ವಿಚಾರಣೆ ಮಾಡಲಾಗುವುದು.
ಗುರುಗ್ರಾಮ ನ್ಯಾಯಾಲಯ ಕಳೆದ ವಾರ ಕೊಲೆ ಆರೋಪಿ ಬಾಲಕನ ಜಾಮೀನು ಕೋರಿಕೆ ಅರ್ಜಿಯನ್ನು ತಿರಸ್ಕರಿಸಿದ್ದ ಸಂದರ್ಭದಲ್ಲಿ ಪ್ರದ್ಯುಮ್ನನ ಹೆತ್ತವರು ಆರೋಪಿಯನ್ನು ವಯಸ್ಕನಂತೆ ವಿಚಾರಣೆಗೆ ಗುರಿಪಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು.
ಇಂದು ಬುಧವಾರ ಗುರುಗ್ರಾಮದಲ್ಲಿನ ಬಾಲಾಪರಾಧ ನ್ಯಾಯ ಮಂಡಳಿಯು ಪ್ರದ್ಯುಮ್ನನ ಕೊಲೆ ಕೇಸನ್ನು ಇಲ್ಲಿನ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಿತು. ಆ ಪ್ರಕಾರ ಈ ಕೊಲೆ ಕೇಸಿನ ವಿಚಾರಣೆ ಇದೇ ಶುಕ್ರವಾರ ಆರಂಭವಾಗಲಿದೆ.
ಕೊಲೆ ಆರೋಪಿ ಬಾಲಕನನ್ನು ವಯಸ್ಕನಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಗುರಿಪಡಿಸುವ ನಿರ್ಧಾರವನ್ನು ಪ್ರದ್ಯುಮ್ನನ ತಂದೆ ವರುಣ್ ಠಾಕೂರ್ ಸ್ವಾಗತಿಸಿದ್ದಾರೆ.
ಎರಡನೇ ತರಗತಿಯ ವಿದ್ಯಾರ್ಥಿ ಪ್ರದ್ಯುಮ್ನನ ಶವ ಕುತ್ತಿಗೆ ಕೊಯ್ಯಲ್ಪಟ್ಟ ಸ್ಥಿತಿಯಲ್ಲಿ ಶಾಲೆಯ ಶೌಚಾಲಯದಲ್ಲಿ ಕಳೆದ ಸೆ.8ರಂದು ಪತ್ತೆಯಾಗಿತ್ತು.
ಶಾಲೆ ಪರೀಕ್ಷೆಗಳು ಮುಂದಕ್ಕೆ ಹೋಗಬೇಕೆನ್ನುವ ಅಪೇಕ್ಷೆಯಲ್ಲಿ ಶಾಲೆಯ 11ನೇ ತರಗತಿಯ ಶಂಕಿತ ವಿದ್ಯಾರ್ಥಿಯು ಪ್ರದ್ಯುಮ್ನನನ್ನು ಕೊಂದಿದ್ದ ಆಘಾತಕಾರಿ ವಿಷಯವು ತನಿಖೆಯಲ್ಲಿ ಬಹಿರಂಗವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ