ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಣಬ್‌ ಮುಖರ್ಜಿ


Team Udayavani, Aug 31, 2020, 6:15 PM IST

pranab_mohan

ಮಣಿಪಾಲ: ʼಭಾರತದ ಆತ್ಮ ನೆಲೆಸಿರುವುದೇ ಬಹುತ್ವದಲ್ಲಿ.ʼ ದ್ವೇಷ ಮತ್ತು ಅಸಹನೆಯಿಂದ ಭಾರತದ ರಾಷ್ಟ್ರೀಯತೆ ನಾಶವಾಗಬಹುದು’ ಎಂದು ಸಂಘದ ಕಾರ್ಯಕ್ರಮದಲ್ಲಿ ಈ ಸೂಚ್ಯ ಎಚ್ಚರಿಕೆ ನೀಡಿದ್ದು ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು.

ನಾಗಪುರದ ಆರ್‌ಎಸ್‌ಎಸ್‌ ಪ್ರಧಾನ ಕಚೇರಿಯಲ್ಲಿ 3ನೇ ವರ್ಷದ ವಿದ್ಯಾರ್ಥಿಗಳ ವಾರ್ಷಿಕ ಶಿಬಿರದ ಸಮಾರೋಪ ಕಾರ್ಯಕ್ರಮಕ್ಕೆ ಸಂಘ ಅವರನ್ನು ಮುಖ್ಯ ಅಥಿತಿಯಾಗಿ ಆಹ್ವಾನಿಸಲಾಗಿತ್ತು. ಇದಕ್ಕೆ ಪರ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್‌ನಲ್ಲಿ ಬೆರಳೆನಿಕೆ ಮಂದಿ ಇದಕ್ಕೆ ಆಕ್ಷೇಪ ಎತ್ತಿದ್ದರು.

ಸ್ವತಃ ಪ್ರಣಬ್‌ ಮುಖರ್ಜಿ ಅವರ ಮಗಳೇ ಈ ಕಾರ್ಯಕ್ರಮಕ್ಕೆ ತಮ್ಮ ತಂದೆಯವರನ್ನು ಆಹ್ವಾನಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಪರ-ವಿರೋಧದ ನಡುವೆ ಪ್ರಣಬ್‌ ಮುಖರ್ಜಿ ಅವರು ಕಾರ್ಯಕ್ರಮಕ್ಕೆ ಆಹ್ವಾನವನ್ನು ಗೌರವಿಸಿ ತೆರಳಿದ್ದರು. ಈ ಸಂದರ್ಭ ಅವರ ಭಾಷಣ ಕೇಳಲು ಇಡೀ ದೇಶದ ಕುತೂಹಲದಿಂದ ಕಾಯುತ್ತಿತ್ತು.

ಐದು ದಶಕಗಳ ರಾಜಕೀಯ ಜೀವನದಲ್ಲಿ ಆರೆಸ್ಸೆಸ್‌ ನಿಲುವಿಗೆ ವ್ಯತಿರಿಕ್ತವಾದ ಧೋರಣೆ ಹೊಂದಿರುವ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ, ಆರ್‌ಎಸ್‌ಎಸ್‌ನ ಸಂಸ್ಥಾಪಕ ಮತ್ತು ಮೊದಲ ಸರಸಂಘ ಚಾಲಕ ಡಾ| ಕೇಶವ ಬಲಿರಾಮ್‌ ಹೆಡಗೇವಾರ್‌ ಅವರನ್ನು ʼಭಾರತ ಮಾತೆಯ ಶ್ರೇಷ್ಠ ಪುತ್ರ’ ಎಂದು ವ್ಯಾಖ್ಯಾನಿಸಿದ್ದರು.

ʼದೇಶಪ್ರೇಮ, ರಾಷ್ಟ್ರೀಯತೆ ಮತ್ತು ಬಹುತ್ವದ ಕುರಿತು ತಮ್ಮ ಅಭಿಪ್ರಾಯ ವಿವರಿಸಿದ್ದ ಅವರು, ಆಧುನಿಕ ಭಾರತದ ತಮ್ಮ ಪರಿಕಲ್ಪನೆಯನ್ನು ಹರಿಯ ಬಿಟ್ಟಿದ್ದರು. ಭಾರತದ ಬಹುತ್ವವನ್ನು ಸಂಭ್ರಮಿಸಬೇಕು’ ರಾಷ್ಟ್ರೀಯತೆ ಎಲ್ಲವನ್ನೂ ಒಳಗೊಳ್ಳಬೇಕು. ವಿಶ್ವವೇ ಕುಟುಂಬ ಎಂಬ ಪರಿಕಲ್ಪನೆಯಂತೆ ರಾಷ್ಟ್ರೀಯತೆಯಲ್ಲಿ ವಿಶ್ವಾತ್ಮಕ ಮನೋಭಾವ ಅಡಕವಾಗಿರಬೇಕು. ರಾಷ್ಟ್ರೀಯತೆ ಒಂದು ಭಾಷೆ ಒಂದು ಧರ್ಮಕ್ಕೆ ಸೀಮಿತವಾಗಬಾರದು ಎಂದು ಆರ್‌ಎಸ್‌ಎಸ್‌ ಸಭೆಯಲ್ಲಿಯೇ ಅವರು ಹೇಳಿದ್ದರು.

ಆರಂಭದಲ್ಲಿ ಭಾರತ ಮುಕ್ತ ಸಮಾಜ ಹೊಂದಿತ್ತು. ಸಿಲ್ಕ್ ರೂಟ್‌ ಸಹಿತ ಎಲ್ಲ ಪ್ರಮುಖ ದಾರಿಗಳ ಮೂಲಕ ದೇಶಕ್ಕೆ ಸಂಪರ್ಕವಿತ್ತು. ವ್ಯಾಪಾರಿಗಳು ಮತ್ತು ಹಲವಾರು ಮಂದಿ ವಿದೇಶಿ ದಾಳಿಕೋರರು ಇಲ್ಲಿಗೆ ಆಗಮಿಸಿದ್ದರು. ಶತಮಾನಗಳ ಹಿಂದೆ ಆಗಮಿಸಿದ್ದ ವಿದೇಶಿ ಪ್ರವಾಸಿಗರು, ವಿವಿಧ ರೀತಿಯ ಆಡಳಿತ ವ್ಯವಸ್ಥೆ ಮತ್ತು ಉತ್ತಮ ಶಿಕ್ಷಣ ವ್ಯವಸ್ಥೆ ಹೊಂದಿದ್ದ ಬಗ್ಗೆ ದಾಖಲೆಗಳನ್ನು ನೀಡಿದ್ದಾರೆ ಎಂದು ಪ್ರಣಬ್‌ ಮುಖರ್ಜಿ ನೆನಪಿಸಿದ್ದರು.

ಈಗಿನ ಪರಿಸ್ಥಿತಿಯಲ್ಲಿ ಹಿಂಸೆಗೆ ವಿದಾಯ ಹೇಳಿ ಎಲ್ಲರನ್ನೂ ಒಳಗೊಳ್ಳುವಂಥ ವ್ಯವಸ್ಥೆಯತ್ತ ಹೊರಳಿಕೊಳ್ಳಬೇಕಾಗಿದೆ. ಎಲ್ಲ ರೀತಿಯ ಹಿಂಸೆ ಮತ್ತು ಭೀತಿಯ ವಾತಾವರಣದಿಂದ ನಮ್ಮ ಸಾರ್ವಜನಿಕ ವ್ಯವಸ್ಥೆಯನ್ನು ದೂರ ಇರಿಸಿಕೊಳ್ಳಬೇಕಾಗಿದೆ. ದ್ವೇಷದ ಮನೋಭಾವನೆ ರಾಷ್ಟ್ರೀಯತೆಯ ನಾಶಕ್ಕೆ ಕಾರಣವಾಗುತ್ತದೆ. ಅಸಹಿಷ್ಣುತೆ ನಮ್ಮ ರಾಷ್ಟ್ರೀಯ ಏಕತೆಗೆ ಧಕ್ಕೆ ತರುತ್ತದೆ. ಹಲವು ರಾಜವಂಶಗಳು, ಪ್ರಭಾವ ಶಾಲಿಯಾಗಿದ್ದ ರಾಜಕುಟುಂಬಗಳು ಭಾರತದ ಉತ್ತರ ಮತ್ತು ದಕ್ಷಿಣ ಭಾಗವನ್ನು ಆಳಿದ್ದವು.

ನಮ್ಮ ದೇಶದ ರಾಷ್ಟ್ರೀಯ ಏಕತೆ ವಿಚಾರ ಹಲವು ರೀತಿಯ ಸಮೀಕರಣ ಮತ್ತು ಸಮ್ಮಿಲನದ ಬಳಿಕ ರೂಪುಗೊಂಡಿದೆ. ಹಲವು ರೀತಿಯ ಸಂಸ್ಕೃತಿಗಳು ಮತ್ತು ನಂಬಿಕೆ ನಮ್ಮ ವ್ಯವಸ್ಥೆಯ ವಿಶೇಷವೇ ಆಗಿದೆ. ರಾಷ್ಟ್ರೀಯತೆಯ ಬಗ್ಗೆ ದೇಶದ ಮೊತ್ತ ಮೊದಲ ಪ್ರಧಾನಿ ಜವಾಹರ್‌ ಲಾಲ್‌ ನೆಹರೂ ಬರೆದ ʼಡಿಸ್ಕವರಿ ಆಫ್ ಇಂಡಿಯಾ‘ ಪುಸ್ತಕದಲ್ಲಿ ಉಲ್ಲೇಖವಾಗಿರುವ ಅಂಶವನ್ನು ಮುಖರ್ಜಿ ಅವರು ಉಲ್ಲೇಖೀಸುತ್ತಾ….
“ಹಿಂದೂ, ಮುಸ್ಲಿಂ, ಸಿಕ್ಖ್ ಮತ್ತು ಭಾರತದ ಇತರ ಯಾವುದೇ ಗುಂಪಿಗೆ ಸೇರ್ಪಡೆಗೊಂಡವನು ʼತಾನುʼ ಎಂಬ ಭಾವನೆಯಿಂದ ಹೊರಗೆ ಬಂದಾಗ ಮಾತ್ರ ರಾಷ್ಟ್ರೀಯತೆ ಎಂಬ ವಿಚಾರ ನಮ್ಮೆಲ್ಲರಲ್ಲಿ ಮೈಗೂಡುತ್ತದೆ’ ಎಂದು ನೆಹರೂ ಬರೆದಿದ್ದನ್ನು ನೆನಪಿಸಿ ಭಾಷಣ ಮುಂದುವರಿಸಿದ್ದರು.

ವಸುಧೈವ ಕುಟುಂಬಕಂ 
1,800 ವರ್ಷಗಳ ಕಾಲ ತಕ್ಷಶಿಲಾ, ನಲಂದಾ ಸೇರಿದಂತೆ ವಿಶ್ವಮಾನ್ಯ ವಿವಿಗಳು ಪ್ರಪಂಚದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳನ್ನು ಮತ್ತು ಸಂಶೋಧಕರನ್ನು ಆಹ್ವಾನಿಸುತ್ತಿದ್ದವು. ನಮ್ಮ ದೇಶದ ರಾಷ್ಟ್ರೀಯತೆ ಎಂಬ ವಿಚಾರ ಏಕತೆಯಿಂದ ಉಂಟಾಗಿದೆ. ಶತಮಾನಗಳಿಂದಲೂ ಕೂಡ “ವಸುಧೈವ ಕುಟುಂಬಕಂʼ ಎಂಬ ತತ್ತ್ವದಲ್ಲಿ ನಂಬಿಕೆಯನ್ನು ಇರಿಸಿಕೊಂಡು ಬಂದಿದ್ದೇವೆ.

ಕ್ರಿಸ್ತಪೂರ್ವ ಆರನೇ ಶತಮಾನದಿಂದ 600 ವರ್ಷಗಳ ಕಾಲ ಮುಸ್ಲಿಂ ಅರಸರ ಆಳ್ವಿಕೆ ದೇಶದಲ್ಲಿತ್ತು. ಬಳಿಕ ಈಸ್ಟ್‌ ಇಂಡಿಯಾ ಕಂಪೆನಿ ಆಡಳಿತದ ನೇತೃತ್ವ ವಹಿಸಿಕೊಂಡಿತು. ಮೊದಲ ಸ್ವಾತಂತ್ರ್ಯ ಸಂಗ್ರಾಮದ ಬಳಿಕ ದೇಶದ ಆಡಳಿತ ರಾಣಿಯ ನೇತೃತ್ವಕ್ಕೆ ಸಿಕ್ಕಿತ್ತು. ಹಲವಾರು ಆಡಳಿತಗಾರರು ಆಡಳಿತ ನಡೆಸಿದರೂ 5 ಸಾವಿರ ವರ್ಷಕ್ಕಿಂತಲೂ ಹೆಚ್ಚಿನ ಇತಿಹಾಸ ಇರುವ ನಮ್ಮ ನಾಗರಿಕತೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿತ್ತು ಎಂದು ಭರತ ಖಂಡದ ಐಹಿತ್ಯವನ್ನು ಸಭೆಯ ಮುಂದಿಟ್ಟಿದ್ದರು.

ಯಾರು ಪರಿಪೂರ್ಣ ಭಾರತೀಯ
ತ್ರಿಪುರಾದಿಂದ ದ್ವಾರಕೆಯವರೆಗೆ, ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ ನಮ್ಮ ದೇಶದಲ್ಲಿ ಹಲವಾರು ಧರ್ಮಗಳಿವೆ ಎಂದು ಹೇಳುವುದೇ ರೋಮಾಂಚನ. ಲೆಕ್ಕವಿಲ್ಲದಷ್ಟು ಧರ್ಮಗಳು, ಜಾತಿಗಳು ಒಂದೇ ಸಂವಿಧಾನದ ಅಡಿಯಲ್ಲಿವೆ ಎಂದು ಹೇಳಿಕೊಳ್ಳುವುದೇ ಹೆಗ್ಗಳಿಕೆ. 122 ಭಾಷೆಗಳು, 1,600 ನುಡಿಕಟ್ಟು, 7 ಪ್ರಮುಖ ಧರ್ಮಗಳು, ಮೂರು ಪ್ರಮುಖ ಜನಾಂಗಗಳು ಒಂದೇ ವ್ಯವಸ್ಥೆಯ ಅಡಿಯಲ್ಲಿ ಕೆಲಸ ಮಾಡುತ್ತಿವೆ. ಹೀಗಾಗಿಯೇ ಭಾರತೀಯ ಎಂದು ಕರೆಯಿಸಿಕೊಳ್ಳಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ವಿವಿಧ ಅಭಿಪ್ರಾಯಗಳು ಇರುತ್ತವೆ. ಅದನ್ನು ನಿರಾಕರಿಸಲಾಗದು ಎನ್ನುವ ಮೂಲಕ ಬಹುತ್ವವನ್ನು ಸಾರಿದ್ದರು.

ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ನೀಡಿದ ಭೇಟಿ ಹಾಗೂ ಅಲ್ಲಿ ಅವರು ಮಾಡಿದ ಭಾಷಣ ಭಾರತದ ಇತಿಹಾಸದ ಪುಟದಲ್ಲಿ ದಾಖಲಾಗುವಂಥದ್ದು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.