ಸಿಜೆಐ ಅವಹೇಳನ ಪ್ರಕರಣ: ಪ್ರಶಾಂತ್ ಭೂಷಣ್ ದೋಷಿ
Team Udayavani, Aug 15, 2020, 4:32 AM IST
ಹೊಸದಿಲ್ಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾ| ಎಸ್. ಎ. ಬೋಬ್ದೆ ಮತ್ತು ಸುಪ್ರೀಂ ಕೋರ್ಟ್ ವಿರುದ್ಧ ನಿಂದನಾತ್ಮಕ ಟ್ವೀಟ್ ಮಾಡಿದ್ದ ವಕೀಲ ಪ್ರಶಾಂತ್ ಭೂಷಣ್ರನ್ನು ಸರ್ವೋಚ್ಚ ನ್ಯಾಯಾಲಯವು “ದೋಷಿ’ ಎಂದು ಘೋಷಿಸಿದೆ. ಈ ಸಂಬಂಧ ಆ. 20ರಂದು ಶಿಕ್ಷೆ ಪ್ರಕಟಿಸಲಿದೆ. ಪ್ರಶಾಂತ್ ಭೂಷಣ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ಸುಪ್ರೀಂಕೋರ್ಟ್, ತೀರ್ಪಿನಲ್ಲಿ ಅವರು ಮಾಡಿದ್ದ ಪ್ರಮುಖ 2 ಟ್ವೀಟ್ಗಳನ್ನು ನ್ಯಾಯಾಂಗ ನಿಂದನೆ ವ್ಯಾಪ್ತಿಗೊಳಪಡಿಸಿದೆ. ಈ ಕುರಿತು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ.ಆರ್. ಗವಾಯಿ ಮತ್ತು ಕೃಷ್ಣ ಮುರಾರಿ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ, ಪ್ರಶಾಂತ್ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದೆ.
ಜೈಲು ಶಿಕ್ಷೆ ಸಾಧ್ಯತೆ: ಪ್ರಶಾಂತ್ ಅವರಿಗೆ 6 ತಿಂಗಳ ಜೈಲು ಶಿಕ್ಷೆ ಅಥವಾ ಜೈಲು ವಾಸ ಮತ್ತು ದಂಡ ಎರಡೂ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.
ಮುಳುವಾದ 2 ಟ್ವೀಟ್: “ಸುಪ್ರೀಂನ ಹಿಂದಿನ 6 ಸಿಜೆಐಗಳು ಕಳೆದ 6 ವರ್ಷಗಳಲ್ಲಿ ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರದೆ ಪ್ರಜಾಪ್ರಭುತ್ವವನ್ನು ನಾಶ ಮಾಡಿದ್ದಾರೆ’, “ಸಿಜೆಐ ಎಸ್.ಎ. ಬೋಬ್ದೆ ಕಲಾಪಕ್ಕೆ ಗೈರು ಹಾಜರಾಗಿ ಐಷಾರಾಮಿ ಬೈಕ್ನಲ್ಲಿ ಹೆಲ್ಮೆಟ್ ಧರಿಸದೆ ಜಾಲಿ ರೈಡ್ ಮಾಡುತ್ತಿದ್ದಾರೆ’ ಎಂದು ಪ್ರಶಾಂತ್ ಟ್ವೀಟ್ನಲ್ಲಿ ನಿಂದಿ ಸಿದ್ದರು. ವಾಸ್ತವವಾಗಿ, ಸ್ಟಾಂಡ್ ಹಾಕಿದ್ದ ಬೈಕ್ ಮೇಲೆ ನ್ಯಾ| ಬೋಬ್ದೆ ಕುಳಿತು ಫೋಟೋ ತೆಗೆಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ