ಪ್ರಶಾಂತ್ ಕನೋಜಿಯಾಗೆ ಜಾಮೀನು
Team Udayavani, Jun 12, 2019, 6:10 AM IST
ಹೊಸದಿಲ್ಲಿ: ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ದಿಲ್ಲಿಯ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರಿಗೆ ಸುಪ್ರೀಂ ಕೋರ್ಟ್, ಮಂಗಳವಾರ ಜಾಮೀನು ನೀಡಿದೆ.
ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಇಂದಿರಾ ಬ್ಯಾನರ್ಜಿ, ನ್ಯಾ. ಅಜಯ್ ರಸ್ತೋಗಿ ಅವರನ್ನೊಳಗೊಂಡ ನ್ಯಾಯಪೀಠ, ಪ್ರಶಾಂತ್ ಅವರ ಟ್ವೀಟ್ಗಳನ್ನು ನ್ಯಾಯಪೀಠ ಗಮನಿಸಿದ್ದು, ಅವು ಆಕ್ಷೇಪಾರ್ಹ ಎಂದೂ ತಿಳಿದುಬಂದಿದೆ. ಹಾಗಿದ್ದರೂ ಅವರನ್ನು ಬಂಧಿ ಸಿರುವ ಕ್ರಮ ಸಂವಿಧಾನವು ನಾಗರಿಕರಿಗೆ ಕಲ್ಪಿಸಿರುವ ಸ್ವಾತಂತ್ರ್ಯದ ಹಕ್ಕಿನ ಚ್ಯುತಿ ಎಂದು ನ್ಯಾಯಪೀಠ ಅಭಿಪ್ರಾಯಪಡುತ್ತದೆ. ಈ ಹಕ್ಕಿನಲ್ಲಿ ಎಂದೂ ಹೊಂದಾಣಿಕೆ ಸಾಧ್ಯವಿಲ್ಲ.
ಹಾಗಾಗಿ, ಈ ಕೂಡಲೇ ಪತ್ರಕರ್ತ ಪ್ರಶಾಂತ್ ಅವರನ್ನು ಬಿಡುಗಡೆ ಮಾಡಬೇಕು’ ಎಂದು ಸ್ಪಷ್ಟವಾಗಿ ಸೂಚಿಸಿತು.
ಯೋಗಿ ಆದಿತ್ಯನಾಥ್ ಅವರಿಗೆ ಮದುವೆ ಪ್ರಸ್ತಾವ ಕಳುಹಿಸಿರುವುದಾಗಿ ಮಹಿಳೆಯೊಬ್ಬರು ಹೇಳಿರುವ ವಿಡಿಯೋವನ್ನು ಪ್ರಶಾಂತ್ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಕ್ಕೆ ಬಂಧಿಸಲಾಗಿತ್ತು. ಪ್ರಶಾಂತ್ ಪತ್ನಿ ಜಾಗಿಶಾ ಅರೋರಾ, ಸುಪ್ರೀಂ ಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಜಾಗಿಶಾ, “ಸುಪ್ರೀಂ ಕೋರ್ಟ್ನ ನಿರ್ಧಾರ, ಸಂವಿಧಾನದ ಮೇಲಿನ ನನ್ನ ನಂಬಿಕೆಯನ್ನು ಮತ್ತಷ್ಟು ದೃಢಗೊಳಿಸಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ