ಕಾಂಗ್ರೆಸ್ ಆಫರ್ ತಿರಸ್ಕರಿಸಿದ ಪ್ರಶಾಂತ್ ಕಿಶೋರ್; ಕೈ ಪಕ್ಷ ಸೇರಲ್ಲ ಎಂದ ತಂತ್ರಗಾರ!
Team Udayavani, Apr 26, 2022, 4:54 PM IST
ಹೊಸದಿಲ್ಲಿ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ತಮಗೆ ಕಾಂಗ್ರೆಸ್ ಪಕ್ಷ ನೀಡಿದ್ದ ಆಫರ್ ನ್ನು ತಿರಸ್ಕರಿಸಿದ್ದಾರೆ. ತಾವು ಕಾಂಗ್ರೆಸ್ ಪಕ್ಷ ಸೇರುವುದಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಈ ಬಗ್ಗೆ ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಪ್ರಶಾಂತ್ ಕಿಶೋರ್ ಅವರು ಅವರು ಈ ತಿಂಗಳ ಆರಂಭದಲ್ಲಿ ಕಾಂಗ್ರೆಸ್ ಮುಖಂಡರನ್ನು ಅದರಲ್ಲೂ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಹಲವು ಬಾರಿ ಭೇಟಿಯಾಗಿ 2024ರ ಲೋಕಸಭೆ ಚುನಾವಣೆಗೆ ನೀಲನಕ್ಷೆ ಸಿದ್ದಪಡಿಸಿ ಚರ್ಚೆ ನಡೆಸಿದ್ದರು. ಈ ಬೆಳವಣಿಗೆಗಳು ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರುತ್ತಾರೆಂಬ ಕೂಗಿಗೆ ಮತ್ತಷ್ಟು ಪುಷ್ಠಿ ನೀಡಿದ್ದವು.
ಪ್ರಶಾಂತ್ ಕಿಶೋರ್ ನೀಡಿದ್ದ ಹಲವು ಅಂಶಗಳ ಬಗ್ಗೆ ಚರ್ಚೆ ನಡೆಸಲು ಸೋನಿಯಾ ಗಾಂಧಿ ಎಂಟು ಮಂದಿ ಸದಸ್ಯರ ತಂಡವನ್ನು ರಚಿಸಿದ್ದರು.
ಇದನ್ನೂ ಓದಿ:ಪಾಕಿಸ್ತಾನ: ಕರಾಚಿ ಯೂನಿರ್ವಸಿಟಿ ಆವರಣದಲ್ಲಿ ಸ್ಫೋಟ, ನಾಲ್ವರು ಸಾವು, ಹಲವರು ಗಂಭೀರ
ಪ್ರಶಾಂತ್ ಕಿಶೋರ್ ಜೊತೆಗಿನ ಚರ್ಚೆಗಳ ಬಳಿಕ ಅಧ್ಯಕ್ಷರು ಸಶಕ್ತ ಕ್ರಿಯಾ ತಂಡ -2024ನ್ನು ರಚಿಸಿ, ನಿರ್ದಿಷ್ಟ ಜವಾಬ್ದಾರಿಯೊಂದಿಗೆ ಗುಂಪಿನ ಭಾಗವಾಗಿ ಪಕ್ಷಕ್ಕೆ ಸೇರಲು ಅವರನ್ನು ಆಹ್ವಾನಿಸಿದರು. ಆದರೆ ಪ್ರಶಾಂತ್ ಇದನ್ನು ತಿರಸ್ಕರಿಸಿದ್ದಾರೆ. ಅವರ ಸಲಹೆಗಳಿಗೆ ಧನ್ಯವಾದಗಳು ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.
Following a presentation & discussions with Sh. Prashant Kishor, Congress President has constituted a Empowered Action Group 2024 & invited him to join the party as part of the group with defined responsibility. He declined. We appreciate his efforts & suggestion given to party.
— Randeep Singh Surjewala (@rssurjewala) April 26, 2022
“ಇಎಜಿ (ಎಂಪವರ್ಡ್ ಆಕ್ಷನ್ ಗ್ರೂಪ್) ಯ ಭಾಗವಾಗಿ ಪಕ್ಷಕ್ಕೆ ಸೇರಲು ಮತ್ತು ಚುನಾವಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಕಾಂಗ್ರೆಸ್ ನ ಪ್ರಸ್ತಾಪವನ್ನು ನಾನು ನಿರಾಕರಿಸಿದೆ. ನನ್ನ ಅಭಿಪ್ರಾಯದಲ್ಲಿ, ನನಗಿಂತ ಹೆಚ್ಚಾಗಿ, ಆಳವಾಗಿ ಬೇರೂರಿರುವ ರಚನಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಪಕ್ಷಕ್ಕೆ ನಾಯಕತ್ವ ಮತ್ತು ಸಾಮೂಹಿಕ ಇಚ್ಛಾಶಕ್ತಿಯ ಅಗತ್ಯವಿದೆ” ಎಂದು ಪ್ರಶಾಂತ್ ಕಿಶೋರ್ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ