ಕಾಂಗ್ರೆಸ್‌ ಸೇರದಿರುವ ನಿರ್ಧಾರ ಸಮರ್ಥನೀಯ: ಪ್ರಶಾಂತ್‌ ಕಿಶೋರ್‌

ಪ್ರತಿಪಕ್ಷವಾಗಿರಲು ಇದ್ದ ಅವಕಾಶ ಕಾಂಗ್ರೆಸ್‌ ಸದ್ಬಳಕೆ ಮಾಡಿಲ್ಲ

Team Udayavani, Dec 11, 2021, 6:20 AM IST

ಕಾಂಗ್ರೆಸ್‌ ಸೇರದಿರುವ ನಿರ್ಧಾರ ಸಮರ್ಥನೀಯ: ಪ್ರಶಾಂತ್‌ ಕಿಶೋರ್‌

ನವದೆಹಲಿ: ಕೆಲವು ಕಾರಣಗಳಿಂದಲೇ ಕಾಂಗ್ರೆಸ್‌ ಸೇರದೇ ಇರಲು ನಿರ್ಧರಿಸಿದ್ದಾಗಿ ಚುನಾವಣಾ ವ್ಯೂಹರಚನೆಕಾರ ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ.

ಅಂಥ ನಿರ್ಧಾರ ಕೈಗೊಂಡಿದ್ದರೆ, ಆ ಪಕ್ಷಕ್ಕೆ ಮತ್ತು ತಮಗೆ ವೈಯಕ್ತಿಕವಾಗಿ ನಷ್ಟ ಉಂಟಾಗುತ್ತಿತ್ತು. ಅದನ್ನು ತಪ್ಪಿಸುವ ನಿಟ್ಟಿನಲ್ಲಿಯೇ ಈ ಪಕ್ಷ ಸೇರ್ಪಡೆ ನಿರ್ಧಾರವನ್ನು ಚರ್ಚಿಸಿ ಸಹಮತದಿಂದ ನಿರ್ಧರಿಸಲಾಗಿತ್ತು ಎಂದು ಹೇಳಿದ್ದಾರೆ. “ಇಂಡಿಯಾ ಟುಡೇ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ಈ ಅಂಶ ಪ್ರಸ್ತಾಪಿಸಿದ್ದಾರೆ.

ಉತ್ತಮ ಪ್ರತಿಪಕ್ಷವಾಗಿ ಕಾರ್ಯವೆಸಗಲು ಕಾಂಗ್ರೆಸ್‌ಗೆ ಉತ್ತಮ ಅವಕಾಶ ಇದ್ದರೂ, ಅದನ್ನು ಪಕ್ಷ ಸರಿಯಾದ ಬಳಕೆ ಮಾಡಲಿಲ್ಲ ಎಂದು ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ. ಹೊಂದಿರುವ ಸ್ಥಿತಿಯನ್ನು ಗಮನಿಸಿಯೇ ಈ ಬಗ್ಗೆ ಟ್ವೀಟ್‌ ಮಾಡಿದ್ದೇನೆಯೇ ಹೊರತು, ಯಾರನ್ನೂ ವೈಯಕ್ತಿಕವಾಗಿ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಹತ್ತು ವರ್ಷಗಳ ಚುನಾವಣೆಯನ್ನು ಗಮನಿಸುವುದಾದರೆ, ಹೆಚ್ಚಿನ ಚುನಾವಣೆಗಳಲ್ಲಿ ಸೋತಿದೆ. 2012ರಲ್ಲಿ ಕರ್ನಾಟಕದ ವಿಧಾನಸಭೆ ಚುನಾವಣೆ ಹೊರತುಪಡಿಸಿ ಉಳಿದ ಶೇ.90ರಲ್ಲಿ ಅವರು ಸೋತಿದ್ದಾರೆ ಎಂದರು.

ಉತ್ತಮವಾಗಿ ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿ ಆ ಪಕ್ಷ ಪ್ರಭಾರ ಅಧ್ಯಕ್ಷರನ್ನು ಹೊಂದಿರಲು ಸಾಧ್ಯವೇ ಇಲ್ಲ. ಹೀಗಾಗಿ, ಅವರು ಪೂರ್ಣ ಪ್ರಮಾಣದ ಅಧ್ಯಕ್ಷರನ್ನು ಹೊಂದಬೇಕಾಗಿದೆ ಎಂದರು. 1984ರ ಚುನಾವಣೆಯಲ್ಲಿ 404 ಕ್ಷೇತ್ರಗಳಲ್ಲಿ ಗೆದ್ದ ಬಳಿಕ ಕಾಂಗ್ರೆಸ್‌ ಏಕಾಂಗಿಯಾಗಿ ಚುನಾವಣೆಯಲ್ಲಿ ಜಯ ಸಾಧಿಸಿದ್ದೇ ಇಲ್ಲ ಎಂದು ಪ್ರತಿಪಾದಿಸಿದ್ದಾರೆ ಪ್ರಶಾಂತ್‌ ಕಿಶೋರ್‌.

ಇದನ್ನೂ ಓದಿ:ಕತ್ರಿನಾ-ವಿಕ್ಕಿ ಮದುವೆ ಕೇಕ್‌ ತಯಾರಿಕೆಗೆ ಬರೋಬ್ಬರಿ 48 ಗಂಟೆ ಬೇಕಾಗಿತ್ತಂತೆ!

ಕಾಂಗ್ರೆಸ್‌ ವರಿಷ್ಠರು ತಮ್ಮನ್ನು ಸಂಪರ್ಕಿಸಿದ್ದ ಕಾರಣಕ್ಕಾಗಿಯೇ ಆ ಪಕ್ಷಕ್ಕಾಗಿ ಗೆಲ್ಲುವ ಸೂತ್ರ ರಚಿಸಿದ್ದೆ. ಅದನ್ನು ಒಪ್ಪಿಕೊಳ್ಳುವುದು ಬಿಡುವುದು ಪಕ್ಷದ ನಾಯಕರಿಗೆ ಸೇರಿದ್ದು ಎಂದರು. ಎರಡು ವರ್ಷಗಳಿಂದ ಕಾಂಗ್ರೆಸ್‌ ನಾಯಕರ ಜತೆಗೆ ಮಾತುಕತೆ ನಡೆಸಲಾಗುತ್ತಿದೆ. ಪಶ್ಚಿಮ ಬಂಗಾಳ ಚುನಾವಣೆ ಬಳಿಕ ಅದು ಇನ್ನೂ ಸ್ಪಷ್ಟವಾಗಿ ನಡೆಯುತ್ತಿದೆ ಎಂದರು.

ಯುಪಿಎ ಅಸ್ತಿತ್ವದಲ್ಲಿಯೇ ಇಲ್ಲ ಎಂಬ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದ ಬಗ್ಗೆ ಉತರಿಸಿದ ಪ್ರಶಾಂತ್‌ ಕಿಶೋರ್‌ “ಈ ಬಗ್ಗೆ ಅವರೇ ಹೆಚ್ಚಿನ ಮಾಹಿತಿ ನೀಡಬೇಕಾಗಿದೆ’ ಎಂದರು. 2004ರಲ್ಲಿ ಯುಪಿಎಯಲ್ಲಿ ಇದ್ದವರೆಲ್ಲ ಮೈತ್ರಿಕೂಟ ತ್ಯಜಿಸಿದ್ದಾರೆ. ಒಕ್ಕೂಟ ರಚನೆ ವೇಳೆ ಇಲ್ಲದೇ ಇದ್ದವರು ಸೇರ್ಪಡೆಯಾಗಿದ್ದಾರೆ. ಹೀಗಾಗಿ, 2004ರಿಂದ 2019ರ ನಡುವೆ ಇದ್ದ ಯುಪಿಎ ಈಗ ಇಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.