ಸಂಸ್ಕೃತದಲ್ಲಿ ಪ್ರಾರ್ಥನೆ ವಿವಾದ: ಸಂವಿಧಾನ ಪೀಠಕ್ಕೆ ಪ್ರಕರಣ ವರ್ಗ
Team Udayavani, Jan 29, 2019, 12:30 AM IST
ಹೊಸದಿಲ್ಲಿ: ಕೇಂದ್ರೀಯ ವಿದ್ಯಾಲಯಗಳಲ್ಲಿ ಸಂಸ್ಕೃತ ಮತ್ತು ಹಿಂದಿಯಲ್ಲಿ ಪ್ರಾರ್ಥನೆ ನಡೆಸುವುದನ್ನು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ಸಂವಿ ಧಾನ ಪೀಠಕ್ಕೆ ವರ್ಗಾಯಿಸಿದೆ. ಈ ಅಭ್ಯಾಸವು ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರುವುದರಿಂದ, ಇದನ್ನು ಹೆಚ್ಚಿನ ಸದಸ್ಯರನ್ನು ಹೊಂದಿರುವ ಸಂವಿಧಾನ ಪೀಠಕ್ಕೆ ವರ್ಗಾಯಿಸಲು ನ್ಯಾ| ಆರ್.ಎಫ್. ನಾರಿಮನ್ ನೇತೃತ್ವದ ದ್ವಿಸದಸ್ಯ ಪೀಠ ನಿರ್ಧರಿಸಿದೆ.
ಕೇಂದ್ರೀಯ ವಿದ್ಯಾಲಯದಲ್ಲಿ ಪ್ರತಿ ದಿನ ಬೆಳಗ್ಗೆ ಅಸತೋ ಮಾ ಸದ್ಗಮಯ ಎಂಬ ಶ್ಲೋಕವನ್ನು ಮಕ್ಕಳಿಂದ ಹೇಳಿಸ ಲಾಗುತ್ತದೆ. ಇದು ಹಿಂದೂ ಧರ್ಮವನ್ನು ಶಾಲೆಯಲ್ಲಿ ಪ್ರಚುರಪಡಿಸುತ್ತದೆ ಎಂದು ವಕೀಲ ವಿನಾಯಕ್ ಷಾ ದೂರು ಸಲ್ಲಿಸಿದ್ದರು. ಸೋಮವಾರ ವಿಚಾರಣೆ ವೇಳೆ ಅಸತೋ ಮಾ ಸದ್ಗಮಯ ಎಂಬುದನ್ನು ಉಪನಿಷತ್ತಿನಿಂದಲೇ ಪಡೆದಿದ್ದಲ್ಲವೇ ಎಂದು ನ್ಯಾ| ನಾರಿಮನ್ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಟಾರ್ನಿ ಜನರಲ್ ತುಷಾರ್ ಮೆಹ್ತಾ, ಹೌದು. ಇದೇ ರೀತಿ ಪ್ರತಿ ಜಡ್ಜ್ಗಳ ಹಿಂಬದಿ ಬರೆದಿರುವ ಯತೋ ಧರ್ಮಸ್ ತತೋ ಜಯ ಎಂಬ ವಾಕ್ಯ ವನ್ನೂ ಭಗವದ್ಗೀತೆಯಿಂದಲೇ ಎರವಲು ಪಡೆಯಲಾಗಿದೆ ಎಂದರು. ಪ್ರಾರ್ಥನೆ ಸಂಸ್ಕೃತದಲ್ಲಿದೆ ಎಂದ ಮಾತ್ರಕ್ಕೆ ಅದನ್ನು ಧಾರ್ಮಿಕ ಎನ್ನಲಾಗದು. ಕ್ರಿಶ್ಚಿಯನ್ ಶಾಲೆಗಳಲ್ಲಿ ಹಾನೆಸ್ಟಿ ಈಸ್ ದಿ ಬೆಸ್ಟ್ ಪಾಲಿಸಿ ಎಂಬ ಪ್ರಾರ್ಥನೆಯನ್ನು ಹೇಳಿಸಲಾಗುತ್ತದೆ. ಅದೂ ಧಾರ್ಮಿಕ ಹೇಳಿಕೆ ಎಂದಾಗುತ್ತದೆಯೇ ಎಂದು ಮೆಹ್ತಾ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ