ಗಂಗೆಯ ಪುನರುಜ್ಜೀವನಕ್ಕೆ ಆದ್ಯತೆ:ಪ್ರಧಾನಿ ನೇತೃತ್ವದಲ್ಲಿ ಗಂಗಾ ಮಂಡಳಿಯ ಮೊದಲ ಸಭೆ
Team Udayavani, Dec 14, 2019, 11:31 PM IST
ಕಾನ್ಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಷ್ಟ್ರೀಯ ಗಂಗಾ ಮಂಡಳಿಯ ಮೊದಲ ಸಭೆ ಉತ್ತರಪ್ರದೇಶದ ಕಾನ್ಪುರದಲ್ಲಿ ಶನಿವಾರ ನಡೆದಿದೆ. ಗಂಗಾ ನದಿಯ ಪುನರುಜ್ಜೀವನವು ಸಹಕಾರ ಒಕ್ಕೂಟ ವ್ಯವಸ್ಥೆಯ ಉಜ್ವಲ ಉದಾಹರಣೆಯಾಗಿ ಹೊರಹೊಮ್ಮಬೇಕು ಎಂಬ ಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ನಮಾಮಿ ಗಂಗಾ ಯೋಜನೆಯಡಿ ಮಾಡಲಾಗುತ್ತಿರುವ ಕೆಲಸ ಕಾರ್ಯಗಳ ಪ್ರಗತಿ ಪರಿಶೀಲನೆಯನ್ನೂ ಪ್ರಧಾನಿ ಮೋದಿ ನಡೆಸಿದ್ದಾರೆ. ಗಂಗೆಯ ಪುನರುಜ್ಜೀವನವು ದೇಶಕ್ಕೆ ದೀರ್ಘಕಾಲಿಕ ಸವಾಲಾಗಿದ್ದು, 2014ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಈ ನಿಟ್ಟಿನಲ್ಲಿ ಸಾಕಷ್ಟು ಕೆಲಸ ಮಾಡಲಾಗಿದೆ. ಗಂಗೆಯು ಹರಿಯುವಂಥ 5 ರಾಜ್ಯಗಳಿಗೆ 2015ರಿಂದ 2020ರವರೆಗೂ 20 ಸಾವಿರ ಕೋಟಿ ರೂ. ಒದಗಿಸಲಾಗಿದೆ ಎಂದಿದ್ದಾರೆ.
140 ನಿಮಿಷ ಸಭೆ: ಆರಂಭದಲ್ಲಿ 100 ನಿಮಿಷಗಳ ಕಾಲ ಈ ಸಭೆ ನಡೆಸಲು ತೀರ್ಮಾನಿಸಲಾಗಿತ್ತಾದರೂ, ಮತ್ತೆ 40 ನಿಮಿಷಗಳ ಕಾಲ ಅದು ಮುಂದುವರಿಯಿತು. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್, ಬಿಹಾರ ಡಿಸಿಎಂ ಸುಶೀಲ್ ಮೋದಿ, ಕೇಂದ್ರ ಸಚಿವರು, ನೀತಿ ಆಯೋಗದ ಉಪಾಧ್ಯಕ್ಷ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಿಎಂಗಳು ಹಾಗೂ ಇತರೆ ಗಣ್ಯರೊಂದಿಗೆ ಪ್ರಧಾನಿ ಮೋದಿ ಅವರು ಗಂಗಾ ಬ್ಯಾರೇಜ್ ಸಮೀಪದ ಅಟಲ್ ಘಾಟ್ಗೂ ಭೇಟಿ ನೀಡಿ, ಅಲ್ಲಿ ನಡೆದ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಜತೆಗೆ, ಅರ್ಧ ಗಂಟೆ ಕಾಲ ಸ್ಟೀಮರ್ನಲ್ಲೂ ಸಂಚರಿಸಿದರು.
ಯೋಧರೊಂದಿಗೆ ಸಂವಾದ: ಇದೇ ವೇಳೆ, ಕಾನ್ಪುರದಲ್ಲಿ ಭಾರತೀಯ ವಾಯುಪಡೆಯ ಯೋಧರೊಂದಿಗೂ ಮೋದಿ ಸ್ವಲ್ಪ ಹೊತ್ತು ಸಂವಾದ ನಡೆಸಿದರು. ನಿಮ್ಮ ಸೇವೆಯ ಬಗ್ಗೆ ಭಾರತ ಹೆಮ್ಮೆಪಡುತ್ತಿದೆ ಎಂದೂ ಹೇಳಿದರು.
ಎಡವಿಬಿದ್ದ ಮೋದಿ!
ಡಬಲ್ ಡೆಕರ್ ಮೋಟಾರ್ಬೋಟ್ನಲ್ಲಿ ವಿಹಾರ ನಡೆಸಿ ವಾಪಸಾದ ಮೋದಿ ಅವರು ಮೆಟ್ಟಿಲುಗಳನ್ನು ಹತ್ತುವ ವೇಳೆ ಎಡವಿ ಬಿದ್ದ ಘಟನೆ ನಡೆದಿದೆ. ಕೂಡಲೇ ಅವರನ್ನು ಎಸ್ಪಿಜಿ ಭದ್ರತಾ ಸಿಬ್ಬಂದಿ ಮೇಲಕ್ಕೆತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್