ರಸ್ತೆಯ ಕೊರತೆ: ತುಂಬು ಗರ್ಭಿಣಿಯನ್ನು ನದಿಯ ಮೂಲಕ ಬುಟ್ಟಿಯಲ್ಲಿ ಹೊತ್ತು ಸಾಗಿದ ಕುಟುಂಬಸ್ಥರು
Team Udayavani, Aug 2, 2020, 8:52 AM IST
ಛತ್ತಿಸ್ ಗಢ: ಸಮರ್ಪಕ ರಸ್ತೆ ಸಂಪರ್ಕದ ಕೊರತೆಯಿಂದ ಆ್ಯಂಬುಲೆನ್ಸ್ ಗ್ರಾಮವನ್ನು ತಲುಪಲು ಸಾಧ್ಯವಾಗದೇ ಗರ್ಭಿಣಿ ಮಹಿಳೆಯನ್ನು ನದಿಯ ಮೂಲಕ ಬುಟ್ಟಿಯಲ್ಲಿ ಹೊತ್ತುಕೊಂಡು ಸಾಗಿದ ಘಟನೆ ಸುರ್ಗುಜಾದ ಕಡ್ನಾಯಿ ಗ್ರಾಮದಲ್ಲಿ ನಡೆದಿದೆ.
ಈ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ನದಿಗಳು ತುಂಬಿ ಹರಿಯುತ್ತಿದೆ. ಇದರ ಮಧ್ಯೆಯೇ ನಾಲ್ವರು ಪುರುಷರು ತುಂಬು ಗರ್ಭಿಣಿ ಮಹಿಳೆಯನ್ನು ಬುಟ್ಟಿಯಲ್ಲಿ ಕುಳ್ಳಿರಿಸಿ ಎತ್ತಿಕೊಂಡು ಸಾಗಿದ್ದಾರೆ. ಮಾತ್ರವಲ್ಲದೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದೀಗ ಈ ವಿಡಿಯೋ ವ್ಯಾಪಕ ವೈರಲ್ ಆಗಿದ್ದು ಹಲವರು ಸ್ಥಳೀಯಾಡಳಿತ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. ಮಾತ್ರವಲ್ಲದೆ ಕುಗ್ರಾಮಗಳಿಗೆ ಮೌಲಸೌಕರ್ಯ ಒದಗಿಸಲು ಆಗ್ರಹಿಸಿದ್ದಾರೆ.
#WATCH: A pregnant woman from Kadnai village of Surguja was carried on a makeshift basket through a river, as ambulance couldn’t reach the village due to lack of proper road connectivity. The woman was later taken to the nearby govt hospital. #Chhattisgarh (1/8) pic.twitter.com/eenlZaWLOJ
— ANI (@ANI) August 1, 2020
ಕುಗ್ರಾಮದ ಜನರು ಮಳೆಗಾಲದ ಸಂದರ್ಭದಲ್ಲಿ ಇಂತಹ ಸಂಕಷ್ಟಗಳನ್ನು ಎದುರಿಸುತ್ತಾರೆ. ಆದರೇ ಜಿಲ್ಲೆಯಲ್ಲಿ ಸಮರ್ಪಕ ಆರೋಗ್ಯ ಮೂಲ ಸೌಕರ್ಯಗಳು ಇವೆ. ಜನತೆಯನ್ನು ಈ ಸಮಸ್ಯೆಗಳಿಂದ ದೂರ ಮಾಡಲು ಸಣ್ಣ ಸಣ್ಣ ಕಾರುಗಳನ್ನು ನಿಯೋಜಿಸಲು ಯೋಜನೆ ರೂಪಿಸಲಾಗುತ್ತಿದೆ. ಮಾತ್ರವಲ್ಲದೆ ಅಗತ್ಯ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಜಯ್ ಕುಮಾರ್ ಝಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು