ರೈಲಿನೊಳಗೆ ಸಿಗರೇಟ್ ಸೇದಬಾರದು ಎಂದು ಆಕ್ಷೇಪಿಸಿದ ಗರ್ಭಿಣಿ ಹತ್ಯೆ!
Team Udayavani, Nov 10, 2018, 6:05 PM IST
ಶಹಜಹಾನ್ ಪುರ್: ರೈಲಿನಲ್ಲಿ ಸಿಗರೇಟು ಸೇದಬಾರದು ಎಂದು ಸಹಪ್ರಯಾಣಿಕನ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದ ಗರ್ಭಿಣಿ ಮಹಿಳೆಯನ್ನೇ ಕತ್ತು ಹಿಸುಕಿ ಕೊಂದಿರುವ ಘಟನೆ ಉತ್ತರಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಚಿನಾಟ್ ದೇವಿ(45ವರ್ಷ) ತನ್ನ ಕುಟುಂಬ ಸದಸ್ಯರ ಜೊತೆ ಪಂಜಾಬ್-ಬಿಹಾರ್ ಜಲಿಯನ್ ವಾಲಾ ಎಕ್ಸ್ ಪ್ರೆಸ್ ರೈಲಿನ ಜನರಲ್ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಸಹ ಪ್ರಯಾಣಿಕನೊಬ್ಬ ಸಿಗರೇಟ್ ಸೇದುತ್ತಿರುವುದನ್ನು ಗಮನಿಸಿದ ದೇವಿ ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ವೇಳೆ ವಾಗ್ವಾದ ನಡೆದಿದ್ದು, ಸಿಗರೇಟ್ ಸೇದುತ್ತಿದ್ದ ಸೋನು ಯಾದವ್ ಎಂಬ ವ್ಯಕ್ತಿ ಆಕೆಯ ಕತ್ತನ್ನು ಬಲವಾಗಿ ಹಿಸುಕಿಬಿಟ್ಟಿದ್ದ. ಕೂಡಲೇ ಶಹಜಹಾನ್ ಪುರ್ ರೈಲ್ವೆ ನಿಲ್ದಾಣದಲ್ಲಿ ರೈಲನ್ನು ನಿಲುಗಡೆಗೊಳಿಸಿ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದರು. ಆದರೆ ಅಷ್ಟರಲ್ಲಿ ಆಕೆಯ ಪ್ರಾಣಪಕ್ಷಿ ಹಾರಿ ಹೋಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಎಕೆ ಪಾಂಡೆ ಮಾಹಿತಿ ನೀಡಿದ್ದಾರೆ.
ಛಾತ್ ಪೂಜೆಗಾಗಿ ಮಹಿಳೆ ಮತ್ತು ಕುಟಂಬ ಸದಸ್ಯರು ರೈಲಿನಲ್ಲಿ ಬಿಹಾರಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಆರೋಪಿ ಯಾದವ್ ನನ್ನು ಪೊಲೀಸರು ಬಂಧಿಸಿರುವುದಾಗಿ ಪಾಂಡೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್