Maharashtra,ಬಿಸಿಲಾಘಾತಕ್ಕೆ ತುಂಬು ಗರ್ಭಿಣಿ ಮೃತ್ಯು
Team Udayavani, May 16, 2023, 7:40 AM IST
ಪಾಲ್ಘರ್/ ಇಟಾವಾ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಸೊನಾಲಿ ವಾಘತ್ ಎಂಬ ತುಂಬು ಗರ್ಭಿಣಿ ಬಿಸಿಲಾಘಾತಕ್ಕೆ ಬಲಿಯಾಗಿದ್ದಾರೆ.
ಜಿಲ್ಲೆಯ ಒಸಾರ್ ವೀರಾ ಗ್ರಾಮದಿಂದ ಆಸ್ಪತ್ರೆಗೆ ತೆರಳುವ ನಿಟ್ಟಿನಲ್ಲಿ ಸುಡು ಬಿಸಿಲಿನಲ್ಲಿ 3.5 ಕಿಮೀ ನಡೆದು ಅನಂ ತರ ಆಟೋದಲ್ಲಿ ಆಸ್ಪತ್ರೆಗೆ ತೆರಳಿದ್ದಾರೆ. ಆಸ್ಪತ್ರೆಯಿಂದ ಮನೆಗೆ ತೆರಳುವ ಸಂದರ್ಭದಲ್ಲೂ 3.5 ಕಿಮೀ ನಡೆದು ಮನೆ ತಲುಪಿದ್ದಾರೆ. ಶುಕ್ರವಾರ ಈ ಘಟನೆ ನಡೆದಿದ್ದು, ಸಂಜೆಯ ವೇಳೆ ಅವರು ಅಸ್ವಸ್ಥಗೊಂಡಿದ್ದಾರೆ. ಜಿಲ್ಲಾ ಸ್ಪತ್ರೆಗೆ ದಾಖಲಿಸಿದಾಗ ಅವರು ಕೊನೆ ಯುಸಿರೆಳೆದಿದ್ದಾರೆ ಎಂದು ವೈದ್ಯ ಡಾ| ಸಂಜಯ ಬೊಡಾಡೆ ಘೋಷಿಸಿದ್ದಾರೆ.
ಇಬ್ಬರ ಮೃತ್ಯು: ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಧೂಳಿನ ಬಿರುಗಾಳಿ ಬೀಸಿದ ಪ್ರಕರಣಗಳಲ್ಲಿ ಇಬ್ಬರು ಅಸುನೀಗಿದ್ದಾರೆ. ಧಾರ್ವಾರ್ ಗ್ರಾಮದಲ್ಲಿ 45 ವರ್ಷದ ಮಹಿಳೆ ಅಸುನೀಗಿದ್ದರೆ, ನಗ್ಲಾ ಲಕ್ಷ್ಮೀ ಎಂಬ ಗ್ರಾಮದಲ್ಲಿ 10 ವರ್ಷದ ಬಾಲಕ ಅಸುನೀಗಿದ್ದಾರೆ. ಇಟಾವಾ ನಗರದಲ್ಲಿ 60 ವರ್ಷದ ವೃದ್ಧೆ ಗಾಯಗೊಂಡು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿರುಗಾಳಿಯ ರಭಸಕ್ಕೆ ಜಿಲ್ಲೆಯ ಹಲವು ಭಾಗಗಳಲ್ಲಿ ಮರಗಳು ಉರುಳಿ ಬಿದ್ದಿವೆ. ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !