ಹಿಂದಿ ಭಾಷಿಗರಿಗೆ ರಾಷ್ಟ್ರಪತಿ ಕೋವಿಂದ್‌ “ಕನ್ನಡ’ ಪಾಠ


Team Udayavani, Sep 15, 2017, 6:40 AM IST

ramanath.jpg

ಹೊಸದಿಲ್ಲಿ: ಕನ್ನಡ ಸಹಿತ ಹಿಂದಿಯೇತರ ಪ್ರಾದೇಶಿಕ ಭಾಷೆಗಳಿಗೆ ಗೌರವ ಕೊಟ್ಟು, ನೀವು ಗೌರವ ಪಡೆಯುವುದನ್ನು ಕಲಿಯಿರಿ ಎಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಹಿಂದಿ ಭಾಷಿಗರಿಗೆ ಪಾಠ ಮಾಡಿದ್ದಾರೆ.

ದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವಾಲಯ ಆಯೋಜಿಸಿದ್ದ “ಹಿಂದಿ ದಿವಸ್‌’ನಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಮೆಟ್ರೋದಲ್ಲಿ  ಹಿಂದಿ ವಿರೋಧಿಸಿ ನಡೆದ ಪ್ರತಿಭಟನೆಯನ್ನು ಉಲ್ಲೇಖೀಸಿದರು. ಹಿಂದಿಯೇತರ ಭಾಷೆಗಳಿಗೆ ಗೌರವ ಕೊಟ್ಟು , ಈ ಭಾಷೆಗಳಿಗೂ ಉನ್ನತ ಸ್ಥಾನ ನೀಡಿ ಅವರ ತಜ್ಞರಿಗೂ ಮಾತನಾಡಲು ಅವಕಾಶ ನೀಡಿದರೆ ತನ್ನಿಂತಾನೇ ಅವರೂ ಹಿಂದಿಗೆ ಗೌರವ ಕೊಡುತ್ತಾರೆ. ಇದನ್ನು ಬಿಟ್ಟು ಕೇವಲ ಹಿಂದಿಯ ಉತ್ತೇಜನಕ್ಕೆ ಹೊರಟರೆ ಬಲವಂತವಾಗಿ ಹೇರಲಾಗುತ್ತಿದೆ ಎಂದು ಭಾವಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಪ್ರಾದೇಶಿಕ ಭಾಷೆಗಳಿಗೆ ಹಿಂದಿ ಭಾಷಿ ಗರು ಗೌರವ ಕೊಟ್ಟಿದ್ದರೆ, ಬೆಂಗಳೂರಿನ ಮೆಟ್ರೋದಲ್ಲಿ ಹಿಂದಿ ಬಳಕೆಗೆ ವಿರೋಧ, ತಮಿಳುನಾಡಿನಲ್ಲಿ ಹಿಂದಿ ವಿರೋಧಿ ಪ್ರತಿಭಟನೆ ಗಳು ಆಗುತ್ತಿರಲೇ ಇಲ್ಲ. ಆದರೆ ಇಂದು ಪ್ರಾದೇಶಿಕ ಭಾಷೆಗಳನ್ನು ಮಾತನಾಡುವವರು, ಹಿಂದಿ ಭಾಷಿಕರು ತಮ್ಮ ಬಗ್ಗೆ ಪರಿಗಣನೆ ಮಾಡುತ್ತಿಲ್ಲ ಎಂದೇ ಭಾವಿಸುತ್ತಿದ್ದಾರೆ. ನಾವು ಅವರಿಗೆ ಅವಕಾಶ ನೀಡುವುದನ್ನು ಕಲಿಯಬೇಕು. ಆ ಭಾಷೆಗಳನ್ನೂ ಮಾತಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಅವರದೇ ಭಾಷೆಯಲ್ಲಿ ಆಧರಿಸಿ: “ತಮಿಳರು ಎದುರಾದರೆ “ವಣಕ್ಕಂ’, ಸಿಕ್ಖ್ ಜನ ಎದುರಾದಾಗ “ಸತ್‌ ಶ್ರೀ ಅಕಾಲ್‌’, ಮುಸ್ಲಿಮರು ಭೇಟಿಯಾದಾಗ “ಆದಾಬ್‌’, ತೆಲುಗು ಭಾಷಿಕರು ಸಿಕ್ಕಿದಾಗ “ಗುರು’ ಎಂದು ಸಂಬೋಧಿಸುವ ಮೂಲಕ ಅವರನ್ನು ಗೌರವಿಸಬೇಕು’ ಎಂದು ಕೋವಿಂದ್‌ ಸಲಹೆ ನೀಡಿದರು. 

“ದೇಶದಲ್ಲಿ  ನ್ಯಾಯವಾದಿಗಳು ಹಾಗೂ ವೈದ್ಯರ ಭಾಷೆ ಯಾರಿಗೂ ಅರ್ಥವಾಗುವುದಿಲ್ಲ. ಇತ್ತೀಚೆಗೆ ನ್ಯಾಯಾಲಯಗಳಲ್ಲಿ ಹಿಂದಿ ಜತೆ ಇತರ ಸ್ಥಳೀಯ ಭಾಷೆಗಳ ಬಳಕೆ ಹೆಚ್ಚಾಗಿರುವುದು ಆಶಾದಾಯಕ ಬೆಳವಣಿಗೆ. ಅದೇ ರೀತಿ ವೈದ್ಯರು ಕೂಡ ಪ್ರಿಸ್ಕ್ರಿಪ್ಶನ್‌ ಕೊಡುವಾಗ ದೇವನಾಗರಿ ಹಾಗೂ ಇತರ ಸ್ಥಳೀಯ ಭಾಷೆಗಳನ್ನೇ ಬಳಸುವುದು ಸೂಕ್ತ’ ಎಂದು ಕೋವಿಂದ್‌ ಕರೆ ನೀಡಿದರು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.