ಸುಪ್ರೀಂಕೋರ್ಟ್ ನೂತನ ಸಿಜೆಐ ಎನ್ ವಿ ರಮಣ ನೇಮಕಕ್ಕೆ ರಾಷ್ಟ್ರಪತಿ ಅಂಕಿತ
ರಮಣ ಅವರು ನೂತನ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿ ತಿಳಿಸಿದೆ.
Team Udayavani, Apr 6, 2021, 11:36 AM IST
ನವದೆಹಲಿ: ಭಾರತದ ಸರ್ವೋಚ್ಛ ನ್ಯಾಯಾಲಯದ 48ನೇ ಮುಖ್ಯನ್ಯಾಯಮೂರ್ತಿ(ಸಿಜೆಐ)ಯಾಗಿ ಎನ್ ವಿ ರಮಣ ಅವರ ನೇಮಕಕ್ಕಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಮಂಗಳವಾರ(ಏಪ್ರಿಲ್ 6ರಂದು) ಅಂಕಿತ ಹಾಕಿದ್ದಾರೆ.
ಸುಪ್ರೀಂಕೋರ್ಟ್ ನ ಹಾಲಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎಸ್ ಎ ಬೋಬ್ಡೆ ಅವರು ಏಪ್ರಿಲ್ 23ರಂದು ಸೇವೆಯಿಂದ ನಿವೃತ್ತಿಯಾಗಲಿದ್ದು, ಏಪ್ರಿಲ್ 24ರಂದು ಜಸ್ಟೀಸ್ ಎನ್ ವಿ ರಮಣ ಅವರು ನೂತನ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಜಸ್ಟೀಸ್ ಎನ್ ವಿ ರಮಣ ಅವರ ಹೆಸರನ್ನು ಮುಂದಿನ ನೂತನ ಸಿಜೆಐ ಆಗಿ ನೇಮಕಗೊಳ್ಳಲು ಹಾಲಿ ಸಿಜೆಐ ಎಸ್.ಎ.ಬೋಬ್ಡೆ ಅವರು ಸಂಪ್ರದಾಯದಂತೆ ಶಿಫಾರಸು ಮಾಡಿದ್ದರು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಆಂಧ್ರಪ್ರದೇಶದ ನೂಥಲಾಪಾಟಿ ವೆಂಕಟ ರಮಣ ಅವರನ್ನು ಸುಪ್ರೀಂಕೋರ್ಟ್ ನ ನೂತನ ಸಿಜೆಐ ಆಗಿ ನೇಮಕ ಮಾಡಲು ಹಸಿರು ನಿಶಾನೆ ತೋರಿಸಿದ್ದಾರೆ.
ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೊನ್ನಾವರಂ ಎಂಬ ಗ್ರಾಮದಲ್ಲಿ 1957ರ ಆಗಸ್ಟ್ 27ರಂದು ಎನ್.ವಿ.ರಮಣ ಜನಿಸಿದ್ದರು. 1975ರಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವಿದ್ಯಾರ್ಥಿ ನಾಯಕನಾಗಿದ್ದ ರಮಣ ಅವರು ನಾಗರಿಕ ಹಕ್ಕುಗಳ ಬಗ್ಗೆ ಹೋರಾಟ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!