ಎಲ್ಲಾ ಮೂರು ರೈತ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ
Team Udayavani, Sep 27, 2020, 7:29 PM IST
ಹೊಸದಿಲ್ಲಿ: ದೇಶದ ರೈತರನ್ನು ಸ್ವಾವಲಂಬಿಗಳನ್ನಾಗಿ ಮತ್ತು ಅವರ ಬೆಲೆಗಳನ್ನು ದಲ್ಲಾಳಿ ಮುಕ್ತ ಮಾಡುವ ಉದ್ದೇಶದಿಂದ ಕೇಂದ್ರ ಸರಕಾರ ಜಾರಿಗೆ ತರುತ್ತಿರುವ ಮೂರು ಪ್ರಮುಖ ರೈತ ಮಸೂದೆಗಳಿಗೆ ರಾಷ್ಟ್ರಪತಿಯವರು ಇಂದು ತಮ್ಮ ಅಂಕಿತವನ್ನು ಹಾಕಿದ್ದಾರೆ.
ಈ ಮೂರೂ ವಿವಾದಾತ್ಮಕ ಮಸೂದೆಗಳು ಸಂಸತ್ತಿನಲ್ಲಿ ಇತ್ತೀಚೆಗಷ್ಟೇ ಅನುಮೋದನೆಯನ್ನು ಪಡೆದುಕೊಂಡಿದ್ದವು. ದೇಶದ ರೈತರ ಹಿತಕ್ಕೆ ಮಾರಕವಾಗಿರುವ ಹಾಗೂ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವ ದುರುದ್ದೇಶದಿಂದ ಕೂಡಿರುವ ಈ ರೈತ ವಿರೋಧಿ ಮಸೂದೆಗಳನ್ನು ಸಂಸತ್ತಿನ ನಿಯಮಾವಳಿಗಳನ್ನು ‘ಗಾಳಿಗೆ ತೂರಿ’ ‘ಅಸಂವಿಧಾನಿಕವಾಗಿ’ ಮಂಜೂರು ಮಾಡಿಕೊಂಡಿರುವುದರಿಂದ ಈ ಮಸೂದೆಗಳಿಗೆ ಸಹಿ ಹಾಕಬಾರದು ಎಂದು 12ಕ್ಕೂ ಹೆಚ್ಚು ವಿರೋಧ ಪಕ್ಷಗಳು ರಾಷ್ಟ್ರಪತಿಯವರಿಗೆ ಮನವಿಯನ್ನು ಸಲ್ಲಿಸಿದ್ದವು.
ಈ ಮೂಲಕ, ರೈತ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಹಾಗೂ ಸೌಲಭ್ಯ) ಮಸೂದೆ, 2020, ರೈತರ (ಸಶಕ್ತೀಕರಣ ಹಾಗೂ ರಕ್ಷಣೆ) ಬೆಲೆ ಖಚಿತತೆ ಒಪ್ಪಂದ ಹಾಗೂ ರೈತ ಸೇವಾ ಮಸೂದೆ, 2020 ಹಾಗೂ ಅತ್ಯಗತ್ಯ ವಸ್ತುಗಳ (ತಿದ್ದುಪಡಿ) ಮಸೂದೆ, 2020 ಈ ಮೂರು ಮಸೂದೆಗಳಿಗೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಇಂದು ತಮ್ಮ ಅಂಕಿತವನ್ನು ಹಾಕಿದ್ದಾರೆ.
ರಾಷ್ಟ್ರಪತಿಯವರ ಅಂಕಿತದ ಬೆನ್ನಲ್ಲೇ ಕೇಂದ್ರ ಸರಕಾರವು ಈ ಮೂರೂ ಮಸೂದೆಗಳನ್ನು ಗಜೆಟ್ ನೋಟಿಫಿಕೇಶನ್ ಮಾಡಿದ್ದು ಶೀಘ್ರದಲ್ಲೇ ಇವುಗಳು ಕಾಯ್ದೆ ರೂಪದಲ್ಲಿ ಜಾರಿಗೆ ಬರಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ