ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಮಹತ್ವದ ಸಭೆ ಕರೆದ ಮಮತಾ ಬ್ಯಾನರ್ಜಿ

ಸಾಂವಿಧಾನಿಕ ಚೌಕಟ್ಟಿನಲ್ಲಿ ಒಂದಾಗಲು ಮನವಿ

Team Udayavani, Jun 11, 2022, 6:47 PM IST

mamata

ನವದೆಹಲಿ: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಪ್ರತಿಪಕ್ಷಗಳ ಒಗ್ಗಟ್ಟಿಗೆ ಕರೆ ನೀಡಿದ್ದು, ಶನಿವಾರ 22 ಮಂದಿ ಪ್ರಮುಖ ವಿಪಕ್ಷ ನಾಯಕರಿಗೆ ಪಾತ್ರ ಬರೆದು ಜೂನ್ 15 ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗಿಯಾಗಿ ಸಾಂವಿಧಾನಿಕ ಚೌಕಟ್ಟಿನಲ್ಲಿ ಒಂದಾಗಲು ಮನವಿ ಮಾಡಿದ್ದಾರೆ.

ದೆಹಲಿ ಸಿಎಂ, ಆಪ್ ನಾಯಕ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಕೇರಳದ ಪಿಣರಾಯಿ ವಿಜಯನ್, ಒಡಿಶಾ ಸಿಎಂ ನವೀನ್ ಪಟ್ನಾಯಕ್, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್, ತಮಿಳುನಾಡಿನ ಎಂಕೆ ಸ್ಟಾಲಿನ್, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಪಂಜಾಬ್ ಸಿಎಂ ಭಗವಂತ್ ಮಾನ್ ಮತ್ತು ಇತರ ವಿಪಕ್ಷಗಳ ನಾಯಕರಿಗೆ ಬಿಜೆಪಿ ವಿರುದ್ಧ ಸಂಘಟಿತವಾಗಲು ಕರೆ ನೀಡಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಮತಾ ಬ್ಯಾನರ್ಜಿ ಮತ್ತು ಡಿಎಂಕೆ, ಸಿಪಿಐ, ಸಿಪಿಐ-ಎಂ ಮತ್ತು ಎಎಪಿ ನಾಯಕರೊಂದಿಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯನ್ನು ಘೋಷಿಸಲು ಸಮಾಲೋಚನೆ ನಡೆಸಿದ ನಂತರ ಈ ಬೆಳವಣಿಗೆಯಾಗಿದ್ದು, ಪಿಟಿಐ ಮೂಲಗಳ ಪ್ರಕಾರ, ಖರ್ಗೆ ಅವರು ಬ್ಯಾನರ್ಜಿ ಅವರಿಗೆ ಕರೆ ಮಾಡಿ,ಉನ್ನತ ಹುದ್ದೆಗೆ ಒಮ್ಮತದ ಅಭ್ಯರ್ಥಿಯನ್ನು ಪ್ರತಿಪಕ್ಷಗಳು ಹಾಕಬೇಕು ಎಂದು ಹೇಳಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳುವ ಹಿನ್ನೆಲೆಯಲ್ಲಿ, ಭಾರತದ ಮುಂದಿನ ರಾಷ್ಟ್ರಪತಿ ಆಯ್ಕೆಗೆ ಜುಲೈ 18 ರಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ.

ಮುಂದಿನ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಸಂಸದರು ಮತ್ತು ಶಾಸಕರನ್ನು ಒಳಗೊಂಡ 4,809 ಮತದಾರರು ಮತ ಚಲಾಯಿಸಲಿದ್ದಾರೆ. ಲೋಕಸಭೆ, ರಾಜ್ಯಸಭೆ ಮತ್ತು ಹಲವಾರು ರಾಜ್ಯ ವಿಧಾನಸಭೆಗಳಲ್ಲಿ ಬಿಜೆಪಿ ಬಲವನ್ನು ಪರಿಗಣಿಸಿದರೆ ಬಿಜೆಪಿಯ ಅಭ್ಯರ್ಥಿಯು ಆರಾಮದಾಯಕ ಗೆಲುವು ಸಾಧಿಸುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.