ರಾಷ್ಟ್ರಪತಿ ಚುನಾವಣೆ ದಲಿತ ವರ್ಸಸ್ ದಲಿತ ಅಲ್ಲ: ಮೀರಾ
Team Udayavani, Jun 28, 2017, 3:45 AM IST
ನವದೆಹಲಿ: ಪ್ರಸಕ್ತ ರಾಷ್ಟ್ರಪತಿ ಚುನಾವಣೆ ದಲಿತ ವರ್ಸಸ್ ದಲಿತ ಅಲ್ಲ. ಬದಲಿಗೆ ಸಿದ್ಧಾಂತದ ನಡುವಿನ ಸ್ಪರ್ಧೆ ಎಂದು ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಮೀರಾಕುಮಾರ್ ಹೇಳಿದ್ದಾರೆ.
“ನನ್ನ ಉದ್ದೇಶ ಜಾತಿ ವ್ಯವಸ್ಥೆ ನಿರ್ಮೂಲನೆಗೊಳಿಸಿ, ಪ್ರಜಾಸತ್ತಾತ್ಮಕ ಮೌಲ್ಯಕ್ಕೆ ರಕ್ಷಣೆ ಕೊಡುವುದಾಗಿದೆ’ ಎಂದೂ ಅವರು ಹೇಳಿದ್ದಾರೆ. ವಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ನಡೆಸಿದ ಮೊದಲ ಮಾಧ್ಯಮ ಗೋಷ್ಠಿಯಲ್ಲಿ ಅವರು ಹೀಗೆ ಹೇಳಿದ್ದಾರೆ. ನಮ್ಮ ಒಗ್ಗಟ್ಟು ಸಿದ್ಧಾಂತದ ಆಧಾರದ ಮೇಲೆ, ಪ್ರಜಾಪ್ರಭುತ್ವದ ಮೌಲ್ಯದ ಮೇಲೆ, ಸಾಮಾಜಿಕ ನ್ಯಾಯ, ಪತ್ರಿಕಾ ಸ್ವಾತಂತ್ರ್ಯ, ಪಾರದರ್ಶಕತೆ, ಬಡತನ ನಿರ್ಮೂಲನೆ, ಜಾತಿ ವ್ಯವಸ್ಥೆಯ ನಿರ್ಮೂಲನೆ, ಜೊತೆಗೆ ಉನ್ನತ ಮೌಲ್ಯಗಳ ಮೇಲೆ ನಿಂತಿದೆ. ಈ ಸಿದ್ಧಾಂತ ತಮ್ಮ ಹೃದಯಕ್ಕೆ ಹತ್ತಿರವಾಗಿದ್ದು, ಇದರ ರಕ್ಷಣೆಯ ಉದ್ದೇಶದಿಂದಲೇ ತಾವು ಸ್ಪರ್ಧೆಗೆ ಇಳಿದಿದ್ದಾಗಿ ಹೇಳಿದ್ದಾರೆ. ಇದೇ ವೇಳೆ, ಮೀರಾಕುಮಾರ್ ಅವರು ಬುಧವಾರ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಅವರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ, ಸಿಪಿಎಂ ನಾಯಕ ಯೆಚೂರಿ ಸಾಥ್ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ