ಆಯುಷ್ಮಾನ್ ಭಾರತ್ ಯೋಜನೆಗೆ ರಾಷ್ಟ್ರಪತಿ ಕೋವಿಂದ್ ಪ್ರಶಂಸೆ
Team Udayavani, Dec 22, 2018, 5:30 PM IST
ಕರೀಂನಗರ, ತೆಲಂಗಾಣ : ಬಿಜೆಪಿ ನೇತೃತ್ವದ ಎನ್ಡಿಎ ಸರಕಾರದ ಮುಂಚೂಣಿಯ ಹಾಗೂ ಮಹತ್ವಾಕಾಂಕ್ಷೆಯ ‘ಆಯುಷ್ಮಾನ್ ಭಾರತ್’ ಅರೋಗ್ಯ ವಿಮೆ ಕಾರ್ಯಕ್ರಮವನ್ನು ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಪ್ರಶಂಸಿಸಿದ್ದಾರೆ.
ಹಣ ಇಲ್ಲದ ಕಾರಣಕ್ಕೆ ಆರೋಗ್ಯ ಸೇವೆಯಿಂದ ಯಾರೊಬ್ಬರೂ ವಂಚಿತರಾಗಬಾರದು ಎಂಬ ಉದ್ದೇಶದೊಂದಿಗೆ ರೂಪಿಸಲಾಗಿರುವ ಈ ಯೋಜನೆಯಿಂದ ಎಲ್ಲ ವರ್ಗದ ಜನರಿಗೆ ಪ್ರಯೋಜನವಾಗಲಿದೆ ಎಂದವರು ಹೇಳಿದರು.
ದೇಶದ ಜನರಿಗೆ ಇನ್ನೂ ಉತ್ತಮ ಆರೋಗ್ಯ ಸೇವೆಯನ್ನು ಕೊಡುವ ಸಲುವಾಗಿ ಸಾರ್ವಜನಿಕ, ಮುನಿಸಿಪಲ್ ಮತ್ತು ಚ್ಯಾರಿಟೇಬಲ್ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಮತ್ತು ಶುಶ್ರೂಷಾ ಕೇಂದ್ರಗಳನ್ನು ಬಲಪಡಿಸುವ ಅಗತ್ಯವಿದೆ ಎಂದು ರಾಷ್ಟ್ರಪತಿ ಹೇಳಿದರು.