ಮಹಾಮೈತ್ರಿಕೂಟದ ವಿರುದ್ಧ ಪ್ರಧಾನಿ ಮೋದಿ ವಾಗ್ಧಾಳಿ


Team Udayavani, Mar 1, 2019, 12:30 AM IST

modi-l-800.jpg

ಹೊಸದಿಲ್ಲಿ: ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕೈಗೊಂಡ “ಮೇರಾ ಬೂತ್‌ ಸಬ್‌ಸೇ ಮಜಬೂತ್‌’ ಕಾರ್ಯಕ್ರಮವು ವಿಶ್ವದಾಖಲೆ ನಿರ್ಮಿಸಿದೆ. 

ಏಕಕಾಲಕ್ಕೆ 15 ಸಾವಿರ ಸ್ಥಳಗಳಲ್ಲಿರುವ ಸುಮಾರು ಒಂದು ಕೋಟಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಅವರು ವಿಡಿಯೋ ಕಾನ್ಫರೆನ್ಸ್‌ ನಡೆಸಿದ್ದು, ಇದು ವಿಶ್ವದಲ್ಲೇ ಅತಿದೊಡ್ಡ ವಿಡಿಯೋ ಸಂವಾದ ಎಂದು ಪಕ್ಷ ಹೇಳಿಕೊಂಡಿದೆ.

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. ಈ ವೇಳೆ ವಿಪಕ್ಷಗಳ ಮಹಾಘಟಬಂಧನದ ವಿರುದ್ಧ ವಾಗ್ಧಾಳಿ ನಡೆಸಿದ ಪ್ರಧಾನಿ ಮೋದಿ, “ಈ ಮಹಾ ಕಲಬೆರಕೆಯು ದೇಶವನ್ನು ತುರ್ತು ನಿಗಾ ಘಟಕಕ್ಕೆ ಕಳುಹಿಸಲಿದೆ’ ಎಂದಿದ್ದಾರೆ. 2014ರ ಚುನಾವಣೆಯು ದೇಶದ ಜನರ ಅಗತ್ಯತೆಗಳನ್ನು ಈಡೇರಿಸುವಂಥ ಚುನಾವಣೆಯಾಗಿದ್ದರೆ, 2019ರದ್ದು ಜನರ ಬಯಕೆಗಳನ್ನು ಈಡೇರಿಸುವ ಚುನಾವಣೆಯಾಗಿದೆ ಎಂದೂ ಹೇಳಿದ್ದಾರೆ.

ಗಿಮಿಕ್‌ ಅಲ್ಲ, ಸಂಸ್ಕಾರ: ಪ್ರಯಾಗ್‌ರಾಜ್‌ನಲ್ಲಿ ನೈರ್ಮಲ್ಯ ಕಾರ್ಮಿಕರ ಪಾದಗಳನ್ನು ತೊಳೆದಿದ್ದು ರಾಜಕೀಯ ಗಿಮಿಕ್‌ ಅಲ್ಲ, ಅದು ನನ್ನ ಸಂಸ್ಕಾರ ಎಂದು ಮೋದಿ ಹೇಳಿದ್ದಾರೆ. ನಾನು ಗುಜರಾತ್‌ ಸಿಎಂ ಆಗಿ ಆಯ್ಕೆಯಾದಾಗ, ನನ್ನ ಅಧಿಕೃತ ನಿವಾಸಕ್ಕೆ ಪ್ರವೇಶಿಸುವ ವೇಳೆ ನಾಲ್ಕನೇ ದರ್ಜೆಯ ನೌಕರರೊಬ್ಬರನ್ನು ಕರೆತರಲು ಹೇಳಿದೆ. ಅವರು ಒಬ್ಬ ದಲಿತನನ್ನು ಕರೆತಂದರು. ಆತನ ಪುತ್ರಿಯ ತಲೆಯ ಮೇಲೆ ಕಳಶವಿಟ್ಟು ನಿವಾಸವನ್ನು ಪ್ರವೇಶಿಸಿದೆ. ಅದು ನನ್ನ ಸಂಸ್ಕಾರ ಎಂದು ನುಡಿದಿದ್ದಾರೆ.

ಕರ್ನಾಟಕ ಪ್ರಸ್ತಾವಿಸಿದ ಮೋದಿ
ತಮಿಳುನಾಡಿನಲ್ಲಿ ಎನ್‌ಡಿಎ ಮೈತ್ರಿಕೂಟ ಉತ್ತಮ ಸಾಧನೆ ಮಾಡಲಿದೆ ಎಂದು ಹೇಳಿದ ಪ್ರಧಾನಿ, “ಬಿಜೆಪಿ ದಕ್ಷಿಣದ ರಾಜ್ಯಗಳಲ್ಲಿ ಗೆಲ್ಲುವುದಿಲ್ಲ ಎಂದು ಮಾಧ್ಯಮಗಳು ವರದಿ ಮಾಡುತ್ತವೆ. ಆದರೆ, 2008ರಲ್ಲಿ ಕರ್ನಾಟಕದ ಚುನಾವಣೆಯಲ್ಲಿ ಅದನ್ನು ನಾವು ಸುಳ್ಳು ಮಾಡಿ ತೋರಿಸಿದ್ದೇವೆ. ನಮ್ಮ ಸರಕಾರವು ಅಭಿವೃದ್ಧಿಗಾಗಿ ಕೆಲಸ ಮಾಡಿದೆ. ಪ್ರಗತಿ ಯನ್ನು ಬಯಸುವಂಥ ದಕ್ಷಿಣ ರಾಜ್ಯಗಳ ಜನರೂ ಇದನ್ನು ಒಪ್ಪುತ್ತಾರೆ’ ಎಂದು ಹೇಳಿದ್ದಾರೆ.

ಇಂಥ ಸಂದರ್ಭದಲ್ಲಿ ಇದು ಬೇಕಿತ್ತಾ?: ವಿಪಕ್ಷಗಳ ಪ್ರಶ್ನೆ
ಇಡೀ ದೇಶವೇ  ವಿಂಗ್‌ ಕಮಾಂಡರ್‌ ಅಭಿನಂದನ್‌ ಸುರಕ್ಷತೆಗಾಗಿ ಪ್ರಾರ್ಥಿಸುತ್ತಿದ್ದರೆ, ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್‌ ದಾಖಲೆ ಮಾಡುವಲ್ಲಿ ನಿರತವಾಗಿದ್ದಾರೆ. ಇಂಥದ್ದೊಂದು ಪ್ರಕ್ಷುಬ್ಧ ಸನ್ನಿವೇಶದಲ್ಲಿ ಈ ರೀತಿಯ ಕಾರ್ಯಕ್ರಮ ಮಾಡಬೇಕಿತ್ತೇ ಎಂದು ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳು ಪ್ರಶ್ನಿಸಿವೆ. 

ಮೋದಿ ಅವರು ಆದ್ಯತೆಗಳನ್ನೇ ಮರೆತಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಮರು ಆಯ್ಕೆಯ ಬಗ್ಗೆಯೇ ತಲೆಕೆಡಿಸಿಕೊಂಡಿದ್ದಾರೆ. ಕಾಂಗ್ರೆಸ್‌ ಇಂದು ನಡೆಯಬೇಕಿದ್ದ ಕಾರ್ಯಕಾರಿ ಸಮಿತಿ ಸಭೆ ಮತ್ತು ಎಲ್ಲ ರ್ಯಾಲಿಗಳನ್ನೂ ರದ್ದು ಮಾಡಿದೆ. ಆದರೆ, ಮೋದಿ ವಿಡಿಯೋ ಕಾನ್ಫರೆನ್ಸ್‌ ದಾಖಲೆ ಮಾಡುವ ತರಾತುರಿಯಲ್ಲಿದ್ದಾರೆ ಎಂದು ಕಾಂಗ್ರೆಸ್‌ ಕಿಡಿಕಾರಿದೆ. 

ಇದೇ ವೇಳೆ, ಭಾರತ-ಪಾಕಿಸ್ಥಾನದ ನಡುವೆ ಉದ್ವಿಗ್ನ ವಾತಾವರಣವಿರುವಾಗ ಪ್ರಧಾನಿ ಮೋದಿ ಇಂಥ ಕಾರ್ಯಕ್ರಮ ನಡೆಸುತ್ತಿರುವುದು ರಾಷ್ಟ್ರೀಯ ಭಾವನೆಗಳಿಗೆ ಬಗೆದ ದ್ರೋಹ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಆರೋಪಿಸಿದ್ದಾರೆ. ಪ್ರಧಾನಿ ಕಾರ್ಯಕ್ರಮದ ವಿರುದ್ದ ಆಮ್‌ ಆದ್ಮಿ ಪಕ್ಷ ಸೇರಿದಂತೆ ವಿಪಕ್ಷಗಳ ವಿವಿಧ ನಾಯಕರು ದಾಖಲೆಯ ವಿಡಿಯೋ ಕಾರ್ಯಕ್ರಮದ ವಿರುದ್ಧ ಪ್ರಬಲವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.