“ಜಲ ಜೀವನ್’ನಿಂದ ದೇಶದ ಸಕಲ ಅಭಿವೃದ್ಧಿಗೆ ಉತ್ತೇಜನ : ಪ್ರಧಾನಿ ಮೋದಿ
Team Udayavani, Apr 10, 2022, 8:15 AM IST
ನವದೆಹಲಿ: “ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ “ಜಲಜೀವನ ಮಿಷನ್’ ಯೋಜನೆಯು ದೇಶದ ಸಕಲ ಅಭಿವೃದ್ಧಿಗೆ ಉತ್ತೇಜಕವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಟ್ವಿಟರ್ನಲ್ಲಿ ಹೇಳಿದ್ದಾರೆ.
“2019ರಲ್ಲಿ ಜಲ ಜೀವನ ಯೋಜನೆ ಆರಂಭವಾಗುವುದಕ್ಕೂ ಮೊದಲು ದೇಶದಲ್ಲಿ ಕೇವಲ ಶೇ.16.75 ಅಂದರೆ 3.23 ಮನೆಗಳಿಗೆ ನೀರಿನ ಪೂರೈಕೆ ಯಾಗುತ್ತಿತ್ತು. ಯೋಜನೆ ಆರಂಭವಾದ ಎರಡೇ ವರ್ಷಗಳಲ್ಲಿ ಆ ಪ್ರಮಾಣ ಶೇ. 48.62ಕ್ಕೆ ಏರಿಕೆಯಾಗಿದೆ. 107 ಜಿಲ್ಲೆಗಳ 1.5 ಲಕ್ಷ ಗ್ರಾಮಗಳಿಗೆ ಸಹಾಯವಾಗಿದೆ ಎಂದು ಹೇಳಿದ್ದಾರೆ.
“ಈವರೆಗೆ, 17.39 ಲಕ್ಷ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಗ್ರಾಮಗಳಲ್ಲಿ ಕುಡಿಯುವ ನೀರಿನ ನಿರ್ವಹಣೆಗಾಗಿ ಯೇ 4.82 ಲಕ್ಷ ಜಲ ಸಮಿತಿ ರಚಿಸ ಲಾಗಿದೆ. ನೀರಿನ ಗುಣಮಟ್ಟ ಪರೀಕ್ಷೆ ಗಾಗಿ 9.69 ಲಕ್ಷ ಮಹಿಳೆಯರಿಗೆ ತರ ಬೇತಿ ನೀಡಲಾಗಿದೆ. 4 ಲಕ್ಷಕ್ಕೂ ಅಧಿಕ ಗ್ರಾಮಗಳಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ” ಎಂದಿದ್ದಾರೆ.
ಇದನ್ನೂ ಓದಿ : ಅಮಿತ್ ಶಾ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ: ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ