ಗಡಿ ವಿವಾದಕ್ಕೆ “ಮಾತುಕತೆಯೇ ಮದ್ದು’: ಪ್ರಧಾನಿ ಮೋದಿ


Team Udayavani, Aug 6, 2017, 6:25 AM IST

Modi-D.jpg

ನವದೆಹಲಿ: ಚೀನಾ ಜತೆಗಿನ ಡೋಕ್ಲಾಂ ಗಡಿ ವಿವಾದಕ್ಕೆ ಆಡಳಿತಾತ್ಮಕ ಮಾತುಕತೆ ಪರಿಹಾರವೇ ಹೊರತು, ಯುದ್ಧವಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್‌ ಅಭಿಪ್ರಾಯಪಟ್ಟಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ “ಮಾತುಕತೆ ಮಂತ್ರ’ ಜಪಿಸಿದ್ದಾರೆ.

ಎಷ್ಟೇ ದೊಡ್ಡ ಸಮಸ್ಯೆ ಇದ್ದರೂ ಮಾತುಕತೆ ಮೂಲಕ ಅದನ್ನು ಪರಿಹರಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಭಾರತ-ಚೀನಾ ನಡುವಿನ ಗಡಿ ವಿವಾದ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದಿದೆ.

ಯಾಂಗೂನ್‌ನಲ್ಲಿ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮಕ್ಕಾಗಿ ಶನಿವಾರ ವಿಡಿಯೋ ಸಂದೇಶ ನೀಡಿರುವ ಪ್ರಧಾನಿ ಮೋದಿ, “ಆಳವಾಗಿ ಬೇರೂರಿರುವ ಧಾರ್ಮಿಕ ಪೂರ್ವಗ್ರಹ ಮತ್ತು ಪ್ರತಿಷ್ಠೆಯಿಂದಾಗಿ  ಸಮುದಾಯಗಳ ನಡುವೆ ಮೂಡಿರುವ ಒಡಕು ಹಾಗೂ ದೇಶ ದೇಶಗಳ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಪರಸ್ಪರ ಮಾತುಕತೆ ಮೂಲಕ ಪರಿಹರಿಸಲು ಸಾಧ್ಯವಿದೆ,’ ಎಂದಿರುವ ಪ್ರಧಾನಿ,  “ಮಾತುಕತೆ ಮತ್ತು ಚರ್ಚೆ ಮೂಲಕ ಸಮಸ್ಯೆಗಳನ್ನು ಪರಿಹರಿಸುವುದು ಏಷ್ಯಾದ ಪರಂಪರೆಯಾಗಿದೆ. ಪರಸ್ಪರ ಸಂಪರ್ಕ ಮತ್ತು ಅವಲಂಬನೆ ಮೇಲೆ ನಿಂತಿರುವ ಆಧುನಿಕ ಜಗತ್ತನ್ನು ಕಾಡುತ್ತಿರುವ ಭಯೋತ್ಪಾದನೆ ಮತ್ತು ಹವಾಮಾನ ವೈಪರೀತ್ಯದಂತಹ ಸಮಸ್ಯೆಗಳಿಗೆ ಈ ಪರಂಪರಾಗತ ವಿಧಾನ ಪರಿಹಾರವಾಗಬಲ್ಲದು,’ ಎನ್ನುವ ಮೂಲಕ ಗಡಿ ಸಮಸ್ಯೆ ಪರಿಹಾರಕ್ಕೆ ಪರಸ್ಪರ ಚರ್ಚೆಯೇ ಮದ್ದು ಎಂದು ಪ್ರತಿಪಾದಿಸಿದ್ದಾರೆ.

ಚೀನಾದಿಂದ ಸೇನಾ ಕಾರ್ಯಾಚರಣೆ?
ಏತನ್ಮಧ್ಯೆ, ಡೋಕ್ಲಾಂ ಗಡಿಯಲ್ಲಿ ಬೀಡುಬಿಟ್ಟಿರುವ ಭಾರತೀಯ ಸೇನಾಪಡೆಗಳನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಸಣ್ಣ ಪ್ರಮಾಣದ ಸೇನಾ ಕಾರ್ಯಾಚರಣೆ ನಡೆಸಲು ಚೀನಾ ಸಿದ್ಧತೆ ನಡೆಸಿದೆ ಎಂದು ಅಲ್ಲಿನ ಮಾಧ್ಯಮವೊಂದು ವರದಿ ಮಾಡಿದೆ. “ಡೋಕ್ಲಾಂ ಗಡಿಯಲ್ಲಿ ಭಾರತ ಮತ್ತು ಚೀನಾ ನಡುವಿನ ವಿಷಮ ಪರಿಸ್ಥಿತಿಯನ್ನು ಹೀಗೇ ಮುಂದುವರಿಸಲು ಚೀನಾ ಸಿದ್ಧವಿಲ್ಲ. ಹೀಗಾಗಿ ಭಾರತೀಯ ಸೈನಿಕರನ್ನು ಹಿಮ್ಮೆಟ್ಟಿಸುವ ಉದ್ದೇಶದಿಂದ ಮುಂದಿನ ಎರಡು ವಾರದೊಳಗೆ ಸಣ್ಣ ಪ್ರಮಾಣದ ಸೇನಾ ಕಾರ್ಯಾಚರಣೆ ನಡೆಸಲಿದೆ’ ಎಂದು ಗ್ಲೋಬಲ್‌ ಟೈಮ್ಸ್‌ ವರದಿ ಮಾಡಿದೆ.

ಚೀನಾ ಡ್ರೋಣ್‌ಗೆ ಅಮೆರಿಕ ನಿಷೇಧ
ಚೀನಾ ಮೂಲದ ಎಸ್‌ಝೆಡ್‌ ಡಿಜೆಐ ಟೆಕ್ನಾಲಜಿ ಕಂಪನಿಯ ಸಾಫ್ಟ್ವೇರ್‌, ಬಿಡಿಭಾಗಗಳನ್ನು ಒಳಗೊಂಡಿರುವ ಡ್ರೋಣ್‌ಗಳು ಹಾಗೂ ಆ್ಯಪ್‌ಗ್ಳ ಬಳಕೆಯನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಅಮೆರಿಕ ಸೇನೆ ತನ್ನ ಸದಸ್ಯರಿಗೆ ಆದೇಶಿಸಿದೆ. 

“ಸಂಸ್ಥೆಯ ಉತ್ಪನ್ನಗಳು ಸುಲಭವಾಗಿ ಸೈಬರ್‌ ದಾಳಿಗೆ ತುತ್ತಾಗುತ್ತವೆ’ ಎಂದು ಯುಎಸ್‌ ಆರ್ಮಿ ಲ್ಯಾಬೊರೆಟರಿ ವರದಿ ನೀಡಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಬಳಸುತ್ತಿರುವ ಎಲ್ಲ ಡಿಜೆಐ ಡ್ರೋಣ್‌ಗಳನ್ನು ವಶಕ್ಕೆ ಪಡೆದು, ಅವುಗಳಲ್ಲಿರುವ ಬ್ಯಾಟರಿ, ಸ್ಟೋರೇಜ್‌ ಸಾಧನಗಳನ್ನು ತೆಗೆದು, ಎಲ್ಲ ಅಪ್ಲಿಕೇಷನ್‌, ಸಾಫ್ಟ್ವೇರ್‌ಗಳನ್ನು ಅನ್‌ ಇನ್‌ಸ್ಟಾಲ್‌ ಮಾಡಿ ಡ್ರೋಣ್‌ಗsಳನ್ನು ಸುರಕ್ಷಿತವಾಗಿರಿಸಬೇಕು,’ ಎಂದು ಸೇನೆ ಆದೇಶಿಸಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.