2020ರ ಮೊದಲ ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?


Team Udayavani, Jan 26, 2020, 9:24 PM IST

Narendra-Modi-5-730

ನವದೆಹಲಿ: ಈ ವರ್ಷದ ತಮ್ಮ ಮೊದಲ ಮನ್ ಕಿ ಬಾತ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಲವಾರು ಪ್ರಚಲಿತ ವಿಚಾರಗಳಿಗೆ ಒತ್ತು ನೀಡಿ ಮಾತನಾಡಿದ್ದಾರೆ. ಇದು ಮೋದಿ ಅವರ 61ನೇ ಮನ್ ಕಿ ಬಾತ್ ಕಾರ್ಯಕ್ರಮವಾಗಿದೆ. ಇವತ್ತು ಮೋದಿ ಅವರು ಪ್ರಮುಖವಾಗಿ ಮೊನ್ನೆ ತಾನೆ ಅಸ್ಸಾಂನಲ್ಲಿ ಮುಕ್ತಾಯಗೊಂಡ ಖೇಲೋ ಇಂಡಿಯಾ ಕುರಿತಾಗಿ ಮತ್ತು ಜಲ ಸಂರಕ್ಷಣೆಗೆ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತಾಗಿ ವಿಸ್ತೃತವಾಗಿ ಮಾತನಾಡಿದರು.

‘ನಿಮಗೆಲ್ಲರಿಗೂ ಗಣರಾಜ್ಯೋತ್ಸವ ದಿನದ ಶುಭಕಾಮನೆಗಳು’ ಎಂದು ತಮ್ಮ ಮಾತನ್ನು ಪ್ರಾರಂಭಿಸಿದ ಪ್ರಧಾನಿಯವರು, ಇಂದಿನ ಮನ್ ಕಿ ಬಾತ್ ನಲ್ಲಿ ನಮ್ಮ ದೇಶವಾಸಿಗಳು ಮಾಡಿರುವ ಸಾಧನೆಯ ಕುರಿತಾಗಿ ನಿಮ್ಮಲ್ಲಿ ಹೇಳಿಕೊಳ್ಳಲಿದ್ದೇನೆ ಮತ್ತಿದು ನಾವೆಲ್ಲರೂ ಸಂಭ್ರಮಿಸಬೇಕಾದ ವಿಚಾರವಾಗಿದೆ ಎಂದು ಹೇಳಿ ಮಾತನ್ನು ಪ್ರಾರಂಭಿಸಿದರು.

ಇನ್ನು ಜಲಸಂರಕ್ಷಣೆ ಅಭಿಯಾನದ ಕುರಿತಾಗಿ ಮೊದಲಿಗೆ ಪ್ರಸ್ತಾಪಿಸಿದ ಮೋದಿ ಅವರು, ಕಳೆದ ಮಳೆಗಾಲದ ಸಂದರ್ಭದಲ್ಲಿ ನಾವು ಪ್ರಾರಂಭಿಸಿ ಜಲ ಸಂರಕ್ಷಣಾ ಅಭಿಯಾನ ಜನ ಭಾಗೀದಾರಿಕೆಯ ಮೂಲಕ ಇವತ್ತು ಸಾಕಷ್ಟು ಫಲಪ್ರದವಾಗಿ ಬೆಳೆದು ನಿಂತಿದೆ ಇದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಹೇಳಿದರು. ಈ ಅಭಿಯಾನದಡಿಯಲ್ಲಿ ಅಸಂಖ್ಯ ಕೆರೆಗಳು ಮತ್ತು ಕೊಳಗಳನ್ನು ನವೀಕರಿಸಲಾಗಿದೆ ಮತ್ತು ಕಟ್ಟಲಾಗಿದೆ ಎಂದು ಪ್ರಧಾನಿ ಅವರು ಹೇಳಿದರು.

ಜಲಸಂರಕ್ಷಣೆ ಅಭಿಯಾನದಲ್ಲಿ ಜನ ಭಾಗೀದಾರಿಕೆಯ ಕುರಿತಾಗಿ ಮೋದಿ ಅವರು ಉತ್ತರಾಖಂಡದ ಸುನಿಯಾಕೋಟ್ ಎಂಬ ಗ್ರಾಮದ ಉದಾಹರಣೆಯನ್ನು ನೀಡಿದರು. ಇನ್ನು ತಮಿಳುನಾಡಿನಲ್ಲಿ ಬೋರ್ ವೆಲ್ ಗೆ ಮಳೆನೀರು ಮರುಪೂರಣದ ಆವಿಷ್ಕಾರಿ ಯೊಚನೆ ಫಲನೀಡಿರುವ ಪ್ರಸ್ತಾಪವನ್ನೂ ಸಹ ಮೋದಿ ಅವರು ಇದೇ ಸಂದರ್ಭದಲ್ಲಿ ಮಾಡಿದರು.

ಬಳಿಕ ‘ಖೇಲೋ ಇಂಡಿಯಾ’ ಮೂರನೇ ಆವೃತ್ತಿ ಕುರಿತಾಗಿ ಪ್ರಧಾನಿಯವರು ತಮ್ಮ ಮಾತಿನಲ್ಲಿ ಪ್ರಸ್ತಾಪಿಸಿದರು. ಈ ವಿನೂತನ ಪ್ರಯತ್ನ ವರ್ಷದಿಂದ ವರ್ಷಕ್ಕೆ ಉತ್ತಮ ಬೆಂಬಲವನ್ನು ಪಡೆದುಕೊಳ್ಳುತ್ತಿದೆ ಮತ್ತು ದೇಶದಲ್ಲಿ ಕ್ರೀಡೆಯ ಕಡೆಗೆ ಯುವಜನತೆಯ ಒಲವು ಹೆಚ್ಚುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಪ್ರಧಾನಿಯವರು ಅಭಿಪ್ರಾಯಪಟ್ಟರು.

ಡೇವಿಡ್ ಬೆಕ್ ಹ್ಯಾಂ ಹೆಸರನ್ನು ಕೇಳಿದರೆ ನಿಮಗೆ ಇಂಗ್ಲೆಂಡಿನ ಖ್ಯಾತ ಫುಟ್ಬಾಲ್ ಆಟಗಾರನ ನೆನಪಾಗುತ್ತದೆ. ಆದರೆ ಆಶ್ಚರ್ಯದ ವಿಷಯವೆಂದರೆ ಮೊನ್ನೆ ನಡೆದ ಖೇಲೋ ಇಂಡಿಯಾದಲ್ಲೂ ಒನ್ನ ಡೇವಿಡ್ ಬೆಕ್ ಹ್ಯಾಂ ಭಾಗವಹಿಸಿದ್ದ ಮತ್ತು 200 ಮೀಟರ್ ಓಟದಲ್ಲಿ ಚಿನ್ನದ ಪದಗ ಗೆದ್ದಿದ್ದ ಎಂದು ಪ್ರಧಾನಿ ಮೋದಿ ಅವರು ಒಂದು ಉದಾಹರಣೆ ನೀಡಿದರು.

2020ರ ತನ್ನ ಮೊದಲ ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಅವರು ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಡೆಸುವ ಕುರಿತಾದ ಮೊದಲ ಪ್ರಕಟನೆಯನ್ನು ಮಾಡಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.