ಪೋಖರಣ್ ವಿಜ್ಞಾನಿಗಳ ನೆನೆದ ಪ್ರಧಾನಿ ನರೇಂದ್ರ ಮೋದಿ
Team Udayavani, May 12, 2020, 6:41 AM IST
ಹೊಸದಿಲ್ಲಿ: ರಾಷ್ಟ್ರೀಯ ತಂತ್ರಜ್ಞಾನ ದಿನವಾದ ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿ, 1998ರ ಪೋಖರಣ್ ಅಣ್ವಸ್ತ್ರ ಪರೀಕ್ಷೆ ಯಶಸ್ಸಿಗೆ ಕಾರಣಕರ್ತರಾದ ವಿಜ್ಞಾನಿಗಳನ್ನು ಸ್ಮರಿಸಿದರು.
ಅಲ್ಲದೆ, ‘ಇಂದು ಕೋವಿಡ್ ಸೋಂಕಿನಿಂದ ದೇಶವನ್ನು ಮುಕ್ತಗೊಳಿಸಲು ಕೂಡ ತಂತ್ರಜ್ಞಾನಗಳು ನೆರವಾಗುತ್ತಿವೆ. ವೈರಾಣುವನ್ನು ಸೋಲಿಸುವ ತಂತ್ರ ಜ್ಞಾನ ಮಾರ್ಗಗಳ ಸಂಶೋಧನೆಯಲ್ಲಿ ಮುಂಚೂಣಿಯಲ್ಲಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಆರೋಗ್ಯಕರ ಪೃಥ್ವಿ ವಾತಾವರಣವನ್ನು ನಿರ್ಮಿಸಲು ಪಣತೊಡೋಣ’ ಎಂದು ಕರೆಕೊಟ್ಟರು. ವಿಶೇಷವಾಗಿ ಪೋಖ್ರಾನ್ ಪರೀಕ್ಷೆ ವೇಳೆ ವಾಜಪೇಯಿ ಅವರು ವಹಿಸಿದ್ದ ದಿಟ್ಟ ನಾಯಕತ್ವವನ್ನು ಮೋದಿ ಶ್ಲಾಘಿಸಿದರು.
ಏನಿದು ತಂತ್ರಜ್ಞಾನ ದಿನ?: 1998ರ ಮೇ 11ರಂದು ರಾಜಸ್ಥಾನದ ಪೋಖರಣ್ನಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ವಿಜ್ಞಾನಿ ಅಬ್ದುಲ್ ಕಲಾಂ ನೇತೃತ್ವದಲ್ಲಿ ಭಾರತ ಪ್ರಬಲ ಅಣ್ವಸ್ತ್ರ ಪರೀಕ್ಷೆ ನಡೆಸಿ, ಜಗತ್ತಿನ ಶಕ್ತಿಶಾಲಿ ರಾಷ್ಟ್ರಗಳ ಸಾಲಿನಲ್ಲಿ ನಿಂತಿತ್ತು.
‘ಜೈ ಜವಾನ್, ಜೈ ಕಿಸಾನ್, ಜೈ ತಂತ್ರಜ್ಞಾನ್’ ಎನ್ನುವ ಘೋಷಣೆಯೂ ಮೊಳಗಿತ್ತು. ವಾಜಪೇಯಿ ಅವರು ಆ ದಿನವನ್ನು “ರಾಷ್ಟ್ರೀಯ ತಂತ್ರಜ್ಞಾನ ದಿವಸ್’ ಅಂತಲೇ ಆಚರಣೆಗೆ ತಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ