ಕೊರೋನಾ ಭೀತಿ: ಹೋಳಿ ಮಿಲನದಲ್ಲಿ ಪಾಲ್ಗೊಳ್ಳದಿರಲು ಮೋದಿ ನಿರ್ಧಾರ
Team Udayavani, Mar 4, 2020, 1:36 PM IST
ನವದೆಹಲಿ: ವಿಶ್ವಾದ್ಯಂತ ಕೋವಿಡ್ 19 ನೋವೆಲ್ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಹಾಗೂ ಭಾರತದಲ್ಲೂ ಕೆಲವು ಕಡೆಗಳಲ್ಲಿ ಈ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವುದರಿಂದ ಸಾರ್ವಜನಿಕವಾಗಿ ಗುಂಪಾಗಿ ಸೇರುವುದನ್ನು ತಪ್ಪಿಸಿಕೊಳ್ಳಲು ತಾನು ಈ ಬಾರಿ ಯಾವುದೇ ಹೋಳಿ ಮಿಲನ್ ಕಾರ್ಯಕಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
Experts across the world have advised to reduce mass gatherings to avoid the spread of COVID-19 Novel Coronavirus. Hence, this year I have decided not to participate in any Holi Milan programme.
— Narendra Modi (@narendramodi) March 4, 2020
ಕೊರೋನಾ ವೈರಸ್ ವೇಗವಾಗಿ ಹರಡುವುದನ್ನು ತಡೆಗಟ್ಟಲು ಜನರು ಆದಷ್ಟು ಗುಂಪು ಸೇರುವುದನ್ನು ತಪ್ಪಿಸುವುದು ಉತ್ತಮ ಎನ್ನುವುದು ತಜ್ಞರ ಸಲಹೆಯಾಗಿರುವುದರಿಂದ ಈ ವರ್ಷ ನಾನು ಯಾವುದೇ ಹೋಳಿ ಮಿಲನ ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಇರಲು ನಿರ್ಧರಿಸಿದ್ದೇನೆ ಎಂದು ಮೋದಿ ಅವರು ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಅದೇ ರೀತಿ ಆದಷ್ಟು ಗುಂಪು ಸೇರುವುದನ್ನು ತಪ್ಪಿಸಿಕೊಳ್ಳುವಂತೆ ಅವರು ದೇಶದ ಜನರಿಗೂ ಕರೆ ನೀಡಿದ್ದಾರೆ.
ಈ ನಡುವೆ ದೇಶದ ವಿವಿಧ ಭಾಗಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗುತ್ತಿರುವಂತೆ ಈ ವಿಚಾರದಲ್ಲಿ ಜನರು ಗಾಬರಿಗೊಳಗಾಗಬಾರದು ಎಂದು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.
Holi is a very important festival for we Indians but in the wake of Coronavirus, i have decided not to participate in any Holi Milan celebration this year.
I also appeal everyone to avoid public gatherings and take a good care of yourself & your family.
— Amit Shah (@AmitShah) March 4, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ