ಅಪನಗದೀಕರಣ ಬಳಿಕ ಹೆಚ್ಚಿತು ಮೋದಿ ಮೌಲ್ಯ 


Team Udayavani, Jan 27, 2017, 10:13 AM IST

modi-radio.jpg

ನವದೆಹಲಿ: ಈಗಲೂ ಪ್ರಧಾನಿ ನರೇಂದ್ರ ಮೋದಿ ಅವರೇ ಜನರಿಗೆ ಅಚ್ಚುಮೆಚ್ಚು! ಅಪನಗದೀಕರಣದ ನಂತರ ಇಂಡಿಯಾ ಟುಡೆ- ಕಾರ್ವಿ ಇನ್‌ಸೈಟ್ಸ್‌ ಸೇರಿ ದೇಶಾದ್ಯಂತ ಸಮೀಕ್ಷೆ ನಡೆಸಿದ್ದು, ಈಗಲೂ ಪ್ರಧಾನಿ ನರೇಂದ್ರ ಮೋದಿ ಪರವೇ ಅತಿ ಹೆಚ್ಚಿನ ಮತ ಬಿದ್ದಿವೆ. 2019 ಅಲ್ಲ, ಈಗ ಲೋಕಸಭೆ ಚುನಾವಣೆ ನಡೆದರೂ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವೇ ಗೆಲ್ಲಲಿದೆ. ಇದಷ್ಟೇ ಅಲ್ಲ, ಹಿಂದಿಗಿಂತಲೂ ಹೆಚ್ಚಿನ ಸೀಟು ಗಳಿಸಿಕೊಳ್ಳಲಿದೆ ಎಂದು ಈ ಸಮೀಕ್ಷೆ ಭವಿಷ್ಯ ನುಡಿದಿದೆ. 

ಸಮೀಕ್ಷೆಯ ಒಳನೋಟ

ಈಗ ಚುನಾವಣೆ ನಡೆದರೆ ಎನ್‌ಡಿಎಗೆ 360 ಸೀಟು. ಕಳೆದ ಆಗಸ್ಟ್‌ನಲ್ಲಿ ನಡೆಸಿದ್ದ ಸಮೀಕ್ಷೆಯ ಫ‌ಲಿತಾಂಶಕ್ಕಿಂತ ಈ ಬಾರಿ ಇನ್ನೂ 56 ಸೀಟು ಹೆಚ್ಚು. ಬಿಜೆಪಿಗೇ 305 ಸೀಟುಗಳಲ್ಲಿ ಗೆಲುವು

ಮೋದಿ ಜನಪ್ರಿಯತೆಯ ಪ್ರಮಾಣವೂ ಹೆಚ್ಚಳ. ಇವರೇ ಪ್ರಧಾನಿಯಾಗಿ ಇರಲಿ ಎಂದವರು ಶೇ.65. ಕಳೆದ ಆಗಸ್ಟ್‌ಗೆ ಹೋಲಿಕೆ ಮಾಡಿದರೆ ಶೇ.15 ರಷ್ಟು ಏರಿಕೆ

ಅಪನಗದೀಕರಣದಿಂದ ಕಪ್ಪುಹಣ ನಿಯಂತ್ರಣಕ್ಕೆ ಬರುತ್ತೆ ಎಂದವರು ಶೇ.45. ಆರ್ಥಿಕತೆಗೆ ಸಹಾಯವಾಗುತ್ತೆ ಎಂದವರು ಶೇ.35. ಸರಿ ಎಂದವರು ಶೇ.80 ರಷ್ಟು ಮಂದಿ. ಯೋಜಿತವಾಗಿ ಮಾಡಬಹುದಿತ್ತು ಎಂದವರು ಶೇ.55. ನೋವಾಗಿದೆ ಎಂದವರು ಶೇ.51 ರಷ್ಟು ಮಂದಿ.

ಇದುವರೆಗಿನ ಪ್ರಧಾನಿಗಳಿಗೆ ಹೋಲಿಕೆ ಮಾಡಿ ದರೆ ಮೋದಿಯೇ ಬೆಸ್ಟ್‌ ಅಂತೆ. ಇವರನ್ನು ಬಿಟ್ಟರೆ ಇಂದಿರಾ, ಅಟಲ್‌ ಒಳ್ಳೇ ಪ್ರಧಾನಿಗಳು.

ರಾಹುಲ್‌ ಜನಪ್ರಿಯತೆಯಲ್ಲಿ ಕೊಂಚ ಹೆಚ್ಚಳ. ಕಾಂಗ್ರೆಸ್‌ ಉಪಾಧ್ಯಕ್ಷರಾಗಿ ರಾಹುಲ್‌ ಕೆಲಸ ಚೆನ್ನಾಗಿದೆ ಅಥವಾ ಉತ್ತಮವಾಗಿದೆ ಎಂದವರು ಶೇ.39 ರಷ್ಟು ಮಂದಿ. ಮೋದಿಗೆ ಪರ್ಯಾಯ ನಾಯಕರಾಗಿ ಬೆಳೆಯುವ ಶಕ್ತಿ ರಾಹುಲ್‌ಗೆ ಮಾತ್ರ ಇದೆಯಂತೆ. ಹೀಗಂತ ಹೇಳಿದ್ದು ಶೇ.28 ರಷ್ಟು ಮಂದಿ.

ಎನ್‌ಡಿಎ ಮುಂದೆ ಅಧಿಕಾರಕ್ಕೆ ಬರಬೇಕು ಎಂದವರೇ ಹೆಚ್ಚು. ಯುಪಿಎ ಜನಪ್ರಿಯತೆ ಶೇ.25 ರಷ್ಟು ಕುಸಿತ. ಆದರೆ ಮಹಾಘಟಬಂಧನ್‌ ರೀತಿಯಲ್ಲಿ ಒಗ್ಗೂಡಿದರೆ ಯಶಸ್ಸು ಸಂಭವ ಎಂದವರು ಶೇ.58 ಮಂದಿ.

ಮಹಾಘಟಬಂಧನ್‌ ಮುನ್ನಡೆಸಲು ಅರವಿಂದ್‌ ಕೇಜ್ರಿವಾಲ್‌ ಅವರೇ ಉತ್ತಮ ಅಂತೆ. ಹೀಗಂತ ಹೇಳಿದವರು ಶೇ.11 ಮಂದಿ. ಇವರನ್ನು ಬಿಟ್ಟರೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ಗೆ ಬಿದ್ದದ್ದು ಶೇ. 10 ಮತ. 

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.