ಉಗ್ರರ ಸಂಹಾರಕ್ಕೆ ಪಣ


Team Udayavani, Feb 25, 2019, 12:30 AM IST

untitled-3.jpg

ಹೊಸದಿಲ್ಲಿ: “ಭಯೋತ್ಪಾದಕತೆಯನ್ನು ಬೇರು ಸಹಿತ ಕಿತ್ತುಹಾಕಲು ನಮ್ಮ ಯೋಧರು ಪಣತೊಟ್ಟಿದ್ದಾರೆ. ದೇಶದ ಜನರೆಲ್ಲರೂ ಜಾತಿವಾದ, ಕೋಮುವಾದ, ಪ್ರಾದೇಶಿಕತೆ ಮತ್ತಿತರ ಭಿನ್ನಾಭಿಪ್ರಾಯಗಳ ಗೋಡೆ ಕೆಡವಿ, ದೇಶ ಎದು ರಿಸುತ್ತಿರುವ ಭಯೋತ್ಪಾದನೆಯ ನಿರ್ಮೂಲನೆಗೆ ಶಪಥ ಮಾಡಬೇಕು. ಆಗ ಮಾತ್ರ ಉಗ್ರವಾದ‌ದ ವಿರುದ್ಧದ ನಮ್ಮ ಹೆಜ್ಜೆ ಹೆಚ್ಚು ದೃಢ ಹಾಗೂ ನಿರ್ಣಾಯಕವಾಗಲು ಸಾಧ್ಯ.’-ಹೀಗೆಂದು ದೇಶವಾಸಿಗಳಿಗೆ ಕರೆ ನೀಡಿದ್ದು ಪ್ರಧಾನಿ ನರೇಂದ್ರ ಮೋದಿ. 

ತಮ್ಮ 53ನೇ ಆವೃತ್ತಿಯ “ಮನ್‌ ಕಿ ಬಾತ್‌’ ರೇಡಿಯೋ ಕಾರ್ಯಕ್ರಮದಲ್ಲಿ ಪುಲ್ವಾಮಾ ದಾಳಿಯ ಕುರಿತು ಪ್ರಸ್ತಾವಿಸಲು ಮರೆಯದ ಪ್ರಧಾನಿ ಮೋದಿ, 40 ಸಿಆರ್‌ಪಿಎಫ್ ಯೋಧರ ಬಲಿದಾನವು, ಭಯೋತ್ಪಾದನೆಯ ನಿರ್ಮೂಲನೆ ಆಗುವವರೆಗೂ ವಿರಮಿಸದಂತೆ ನಮಗೆ ಶಕ್ತಿ ನೀಡಿದೆ ಎಂದು ಹೇಳಿದ್ದಾರೆ.

ಯುದ್ಧ ಸ್ಮಾರಕ ಲೋಕಾರ್ಪಣೆ
ಸ್ವಾತಂತ್ರಾéನಂತರ ದೇಶಕ್ಕಾಗಿ ಪ್ರಾಣತೆತ್ತಿರುವ ಯೋಧರಿಗಾಗಿ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ನಿರ್ಮಿಸ ಲಾಗಿದ್ದು, ಸೋಮವಾರ ಅದನ್ನು ಉದ್ಘಾಟಿಸುವುದಾಗಿಯೂ ಪ್ರಧಾನಿ ಮೋದಿ ತಿಳಿಸಿದ್ದಾರೆ. 

“ಭಾರತದಲ್ಲಿ ಒಂದೇ ಒಂದು ಯುದ್ಧ ಸ್ಮಾರಕ ಇಲ್ಲ ಎಂದು ತಿಳಿದು ನನಗೆ ಆಶ್ಚರ್ಯವಾಯಿತು. ನಮ್ಮ ಯೋಧರ ಶೌರ್ಯ ಮತ್ತು ಕೊಡುಗೆಗಳನ್ನು ನೆನಪಿಸಿಕೊಳ್ಳಲು ಇಂಥದ್ದೊಂದು ಸ್ಮಾರಕದ ಅಗತ್ಯವಿತ್ತು. ಹಾಗಾಗಿ ಸ್ಮಾರಕ ನಿರ್ಮಿ ಸಿದೆವು’ ಎಂದಿದ್ದಾರೆ. ಪವಿತ್ರ ಯಾತ್ರಾಸ್ಥಳಕ್ಕೆ ಹೋಗುವಂತೆ ಜನ ಈ ಸ್ಮಾರಕಕ್ಕೆ ಭೇಟಿ ನೀಡಬೇಕು ಎಂದರು.

ಇದೇ ಸಂದರ್ಭ ಹಕ್ಕು ಚಲಾವಣೆಯು ಪ್ರತಿ ಯೊಬ್ಬರ ಪವಿತ್ರ ಕರ್ತವ್ಯ ಎಂದ ಪ್ರಧಾನಿ, ಚುನಾವಣೆಗಳನ್ನು ಸಮರ್ಥವಾಗಿ ನಡೆಸಿರುವಂಥ ಚುನಾವಣ ಆಯೋಗವನ್ನೂ ಶ್ಲಾಘಿಸಿದ್ದಾರೆ.

ಮೇ ಕೊನೆಯಲ್ಲಿ  ಬಾತ್‌
ಚುನಾವಣೆ ಸಮೀಪಿಸುತ್ತಿರುವ ಕಾರಣ, ಮುಂದಿನ 2 ತಿಂಗಳು ನಾವು ಪ್ರಚಾರದಲ್ಲಿ ಬ್ಯುಸಿಯಾಗಿರುತ್ತೇವೆ. ನಾನು ಕೂಡ ಅಭ್ಯರ್ಥಿಯಾಗಿದ್ದೇನೆ. ಆರೋಗ್ಯಕರ ಪ್ರಜಾ ಪ್ರಭುತ್ವ ವನ್ನು ಗೌರವಿಸುತ್ತಾ, ಮುಂದಿನ ಮನ್‌ ಕಿ ಬಾತ್‌ ಅನ್ನು ಮೇ ತಿಂಗಳ ಕೊನೆಯ ರವಿವಾರ ನಡೆಸುತ್ತೇನೆ ಎಂದು ಮೋದಿ ಹೇಳಿದ್ದಾರೆ. 

ಅಲ್ಲದೆ, “ಮಾರ್ಚ್‌, ಎಪ್ರಿಲ್‌ ಮತ್ತು ಮೇ ತಿಂಗಳ ನನ್ನ ಮನದ ಮಾತುಗಳನ್ನು ಅಂದೇ ಹೇಳುತ್ತೇನೆ. ಇನ್ನೂ ಹಲವು ವರ್ಷಗಳ ಕಾಲ ನನ್ನ ಯೋಚನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ’ ಎಂದು ಹೇಳುವ ಮೂಲಕ ಮುಂದಿನ ಚುನಾವಣೆಯಲ್ಲೂ ಗೆಲುವು ನಮ್ಮದೇ ಎಂಬ ಆಶಾ ಭಾವನೆ ಯನ್ನೂ ವ್ಯಕ್ತಪಡಿಸಿದ್ದಾರೆ.

ಮೊದಲ ಕಂತಿನ 2,000 ರೂ.
ಗೋರಖ್‌ಪುರ: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ, ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ರವಿವಾರ ಉದ್ಘಾಟಿಸಿದ್ದಾರೆ. ಈ ಯೋಜನೆ ಅಡಿಯಲ್ಲಿ ವರ್ಷಕ್ಕೆ ರೈತರಿಗೆ ವಾರ್ಷಿಕ 6 ಸಾವಿರ ರೂ. ಒದಗಿಸಲಾಗುವುದು. ಮೊದಲ ಕಂತು ತಲಾ 2,000 ರೂ.ಗಳನ್ನು ಎಲೆಕ್ಟ್ರಾನಿಕ್‌ ರೂಪದಲ್ಲಿ 1.01 ಕೋಟಿ ರೈತರಿಗೆ ರವಿವಾರ ವರ್ಗಾಯಿಸಲಾಗಿದೆ. ಉಳಿದ ರೈತರಿಗೂ ಶೀಘ್ರದಲ್ಲೇ ಹಣ ಬ್ಯಾಂಕ್‌ ಖಾತೆಯಲ್ಲಿ ಸಿಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೋದಿ, ಸಾಲ ಮನ್ನಾ ಮಾಡುವುದು ಸುಲಭ. ಆದರೆ ಇದು ರೈತರಿಗೆ ಮಾಡುವ ಮೋಸ ಎಂದು ಕುಟುಕಿದರು.

ಟಾಪ್ ನ್ಯೂಸ್

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.