ಆಜಾದಿ ಕಾ ಅಮೃತ ಮಹೋತ್ಸವ: ಹೊಸ ನಾಣ್ಯಗಳ ಬಿಡುಗಡೆ ಮಾಡಿದ ಪ್ರಧಾನಿ
ಪ್ರಪಂಚದ ಹೆಚ್ಚಿನ ಭಾಗವು ಪರಿಹಾರಗಳಿಗಾಗಿ ಭಾರತವನ್ನು ಎದುರು ನೋಡುತ್ತಿದೆ
Team Udayavani, Jun 6, 2022, 1:31 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಶೇಷ ಸರಣಿಯ 1, 2, 5, 10 ಮತ್ತು 20 ರೂಪಾಯಿ ನಾಣ್ಯಗಳನ್ನು ಬಿಡುಗಡೆ ಮಾಡಿದರು. ಈ ವಿಶೇಷ ಸರಣಿಯ ನಾಣ್ಯಗಳು ಆಜಾದಿ ಕಾ ಅಮೃತ್ ಮಹೋತ್ಸವದ ಲೋಗೋದ ಥೀಮ್ ಅನ್ನು ಹೊಂದಿದ್ದು, ದೃಷ್ಟಿಹೀನ ವ್ಯಕ್ತಿಗಳಿಗೆ ಸುಲಭವಾಗಿ ಗುರುತಿಸಬಹುದಾಗಿದೆ.
ಹಣಕಾಸು ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಪ್ರಧಾನಮಂತ್ರಿ, ಪ್ರಪಂಚದ ಹೆಚ್ಚಿನ ಭಾಗವು ಪರಿಹಾರಗಳಿಗಾಗಿ ಭಾರತವನ್ನು ಎದುರು ನೋಡುತ್ತಿದೆ ಎಂದು ಹೇಳಿದರು.
ಆಜಾದಿ ಕಾ ಅಮೃತ್ ಮಹೋತ್ಸವಕ್ಕೆ ಮೀಸಲಾದ ಹೊಸ ನಾಣ್ಯಗಳನ್ನು ಬಿಡುಗಡೆ ಮಾಡಲಾಗಿದೆ. ಅಮೃತ ಕಾಲದ ಗುರಿಗಳನ್ನು ಜನರಿಗೆ ನಿರಂತರವಾಗಿ ನೆನಪಿಸುತ್ತವೆ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಜನರನ್ನು ಪ್ರೇರೇಪಿಸಲಿವೆ ಎಂದರು.
ಹಿಂದಿನ ಸರಕಾರ ಕೇಂದ್ರಿತ ಆಡಳಿತದಿಂದಾಗಿ ದೇಶವು ಸಾಕಷ್ಟು ನಷ್ಟ ಅನುಭವಿಸಿದೆ. ಇಂದು, 21 ನೇ ಶತಮಾನದಲ್ಲಿ ಭಾರತವು ಜನಕೇಂದ್ರಿತ ಆಡಳಿತದೊಂದಿಗೆ ಮುನ್ನಡೆದಿದೆ. ಅವರ ಸೇವೆ ಮಾಡಲು ಸಾರ್ವಜನಿಕರು ನಮ್ಮನ್ನು ಇಲ್ಲಿಗೆ ಕಳುಹಿಸಿದ್ದಾರೆ. ಅದಕ್ಕಾಗಿಯೇ ನಾವು ಸಾರ್ವಜನಿಕರನ್ನು ತಲುಪುವುದು ನಮ್ಮ ಹೆಚ್ಚಿನ ಆದ್ಯತೆಯಾಗಿದೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ನತ್ತ ಚಾಟಿ ಬೀಸಿದರು.
ದೇಶದಲ್ಲಿ ನೀತಿಗಳು ಮತ್ತು ನಿರ್ಧಾರಗಳು ಸರ್ಕಾರ ಕೇಂದ್ರಿತವಾಗಿದ್ದ ಕಾಲವೊಂದಿತ್ತು. ಇದರರ್ಥ ಯೋಜನೆ ಪ್ರಾರಂಭವಾದ ನಂತರ, ಪ್ರಯೋಜನಗಳನ್ನು ಪಡೆಯಲು ಸರ್ಕಾರವನ್ನು ತಲುಪುವುದು ಜನರ ಜವಾಬ್ದಾರಿಯಾಗಿದೆ. ಅಂತಹ ವ್ಯವಸ್ಥೆಯಲ್ಲಿ, ಸರ್ಕಾರ ಮತ್ತು ಆಡಳಿತದ ಜವಾಬ್ದಾರಿಯು ಸೋಲುತ್ತಿತ್ತು ಎಂದು ಪ್ರಧಾನಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ