ಆರ್ಥಿಕತೆ ಬಲವರ್ಧನೆಗೆ ರಂಗಕ್ಕಿಳಿದ ಪ್ರಧಾನಿ ಕಚೇರಿ


Team Udayavani, Oct 14, 2019, 6:15 AM IST

sitaraman

ಹೊಸದಿಲ್ಲಿ: ದೇಶದ ಅರ್ಥ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಈಗ ಖುದ್ದು ಪ್ರಧಾನ ಮಂತ್ರಿ ಕಚೇರಿಯೇ ರಂಗಕ್ಕೆ ಇಳಿದಿದೆ. ಹೀಗಾಗಿ ಕೇಂದ್ರ ವಿತ್ತ ಸಚಿವಾಲಯದ ಹಿರಿಯ ಅಧಿಕಾರಿಗಳು ಮತ್ತು ವಿವಿಧ ರಾಜ್ಯ ಸರಕಾರಗಳೊಂದಿಗೆ ಸರಣಿ ಸಭೆಗಳನ್ನು ಪ್ರಧಾನಿ ಕಾರ್ಯಾಲಯದ ಹಿರಿಯ ಅಧಿಕಾರಿಗಳು ನಡೆಸಿದ್ದು, ಶೀಘ್ರದಲ್ಲಿಯೇ ಮತ್ತೂಂದು ಸುತ್ತಿನ ಉತ್ತೇಜನ ಕ್ರಮ ಘೋಷಣೆಯಾಗುವ ಸಾಧ್ಯತೆ ಇದೆ. ಆಡಳಿತಾತ್ಮಕ ಮತ್ತು ಆರ್ಥಿಕ ಕ್ಷೇತ್ರಕ್ಕೆ ಚೇತೋಹಾರಿ ಕ್ರಮಗಳನ್ನು ಯಾವ ರೀತಿಯಲ್ಲಿ ಪ್ರಕಟಿಸಬೇಕು ಎಂಬ ಬಗ್ಗೆ ಚಿಂತನ-ಮಂಥನ ನಡೆಸಲಾಗುತ್ತಿದೆ.

ಕೆಲವು ದಿನಗಳ ಹಿಂದಷ್ಟೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಕಾರ್ಪೊರೆಟ್‌ ತೆರಿಗೆ ಪ್ರಮಾಣದಲ್ಲಿ ಇಳಿಕೆ, ರಫ್ತು ಕ್ಷೇತ್ರಕ್ಕೆ ಉತ್ತೇಜನವಾಗುವ ಕ್ರಮಗಳ ಘೋಷಣೆಯಿಂದ ಮುಂಬಯಿ ಷೇರು ಪೇಟೆಯಲ್ಲಿ ಸಂವೇದಿ ಸೂಚ್ಯಂಕ ಪುಟಿದೆದ್ದಿತ್ತು.

ಇದರ ಹೊರತಾಗಿಯೂ ಜಿಎಸ್‌ಟಿ ಸಂಗ್ರಹಣೆಯಲ್ಲಿ 19 ತಿಂಗಳ ಕನಿಷ್ಠಕ್ಕೆ ಕುಸಿದಿರುವುದು ಆತಂಕಕ್ಕೆ ಕಾರಣ ವಾಗಿದೆ. ಹೀಗಾಗಿ ಪ್ರಧಾನಿ ಕಾರ್ಯಾಲಯವೇ ವಿತ್ತ ಖಾತೆಯ ಅಧಿಕಾರಿಗಳು ಮತ್ತು ರಾಜ್ಯ ಸರಕಾರ ಗಳ ಜತೆಗೆ ಸಮಾಲೋಚನೆಗೆ ಮುಂದಾಗಿದೆ ಎನ್ನಲಾಗಿದೆ.

ಹಿರಿಯ ಅಧಿಕಾರಿ ಹೇಳುವ ಪ್ರಕಾರ ಕೇಂದ್ರ ಬೊಕ್ಕಸಕ್ಕೆ 1.45 ಲಕ್ಷ ಕೋಟಿ ರೂ. ಖೋತಾ ಉಂಟಾಗಲಿದ್ದರೂ ಕಾರ್ಪೊರೆಟ್‌ ತೆರಿಗೆ ಪ್ರಮಾಣವನ್ನು ಶೇ.22ಕ್ಕೆ ಇಳಿಕೆ ಮಾಡಲಾಗಿದೆ. ವಿವಿಧ ವಸ್ತುಗಳಿಗೆ ಬೇಡಿಕೆ ಕುದು ರಿಸುವುದು ಮತ್ತು ಬಳಕೆಯ ಪ್ರಮಾಣವನ್ನು ಹೇಗೆ ಹೆಚ್ಚು ಮಾಡುವುದು ಎಂಬುದೇ ಸರಕಾರದ ಮುಂದಿರುವ ಸವಾಲು ಆಗಿದೆ ಎಂದಿದ್ದಾರೆ.

ಬೆಳವಣಿಗೆ ದರ ತಗ್ಗಿಸಿದ ವಿಶ್ವಬ್ಯಾಂಕ್‌
ಭಾರತದ ಅರ್ಥ ವ್ಯವಸ್ಥೆಯ ಬೆಳವಣಿಗೆ ದರವನ್ನು ನಿರೀಕ್ಷಿತ ಶೇ.7.2ರಿಂದ ಶೇ.6ಕ್ಕೆ ಇಳಿಕೆ ಮಾಡಲಾಗಿದೆ ಎಂದು ವಿಶ್ವಬ್ಯಾಂಕ್‌ ಪ್ರಕಟಿಸಿದೆ. 2021ರಲ್ಲಿ ಅದು ಶೇ.6.9, 2022ರಲ್ಲಿ ಶೇ.7.2ಕ್ಕೆ ಜಿಗಿಯಲಿದೆ ಎಂದು ತಿಳಿಸಿದೆ. ಎಪ್ರಿಲ್‌ನಲ್ಲಿ ಪ್ರಕಟಿಸಲಾಗಿದ್ದ ವರದಿಯಲ್ಲಿ ದೇಶದ ಅರ್ಥ ವ್ಯವಸ್ಥೆ ಭದ್ರವಾಗಿದೆ ಮತ್ತು ಅಭಿವೃದ್ಧಿ ದರ ಶೇ.7.5ರಷ್ಟಾಗಲಿದೆ ಎಂದು ಉಲ್ಲೇಖೀಸಿತ್ತು. ಈಗಲೂ ಭಾರತದ ಅರ್ಥ ವ್ಯವಸ್ಥೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಅರ್ಥ ವ್ಯವಸ್ಥೆ ಎಂದು ವಿಶ್ವಬ್ಯಾಂಕ್‌ನ ಮುಖ್ಯ ಆರ್ಥಿಕ ಸಲಹೆಗಾರ ಟ್ರಿಮ್ಮರ್‌ ಹೇಳಿದ್ದಾರೆ.

ಬ್ಯಾಂಕ್‌ ಸಿಇಒಗಳ ಜತೆ ಇಂದು ಸಭೆ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಸಿಇಒಗಳ ಜತೆಗೆ ಸೋಮವಾರ ಸಭೆ ನಡೆಸಲಿದ್ದಾರೆ. ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಸಣ್ಣ, ಅತೀ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ವಿತ್ತೀಯ ನೆರವು ನೀಡುವಲ್ಲಿನ ಪ್ರಗತಿ ಬಗ್ಗೆ ಸಭೆಯಲ್ಲಿ ಪರಾಮರ್ಶೆ ನಡೆಸಲಾಗುತ್ತದೆ. ಮಾರುಕಟ್ಟೆಯಿಂದ ನಿಧಿ ಸಂಗ್ರಹ, ಆಂಶಿಕ ಸಾಲ ಖಾತರಿ ಯೋಜನೆ ಅನುಷ್ಠಾನದಲ್ಲಿ ಯಾವ ರೀತಿಯಲ್ಲಿ ಪ್ರಗತಿ ಉಂಟಾಗಿದೆ ಎಂಬ ಬಗ್ಗೆ ಸಿಇಒಗಳು ವಿತ್ತ ಸಚಿವರಿಗೆ ವರದಿ ಸಲ್ಲಿಸಲಿದ್ದಾರೆ.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.