ಮೂಲಭೂತ ಹಕ್ಕಿನಲ್ಲಿ ಖಾಸಗಿ ಹಕ್ಕು:ಕರ್ನಾಟಕ


Team Udayavani, Jul 27, 2017, 6:30 AM IST

kapil.jpg

ಹೊಸದಿಲ್ಲಿ: ಖಾಸಗಿ ಹಕ್ಕನ್ನೂ ಮೂಲಭೂತ ಹಕ್ಕಿನೊಳಗೆ ಸೇರಿಸಬೇಕು ಎಂಬ ವಾದಕ್ಕೆ ಈಗ ಕರ್ನಾಟಕ ಸಹಿತ ನಾಲ್ಕು ಬಿಜೆಪಿಯೇತರ ರಾಜ್ಯಗಳು ಕೈಜೋಡಿಸಿವೆ.

ಸಂವಿಧಾನದ ಪರಿಚ್ಛೇದ 21ರಲ್ಲಿ ಖಾಸಗಿ ಹಕ್ಕನ್ನೂ ಸೇರಿಸಬೇಕು. ಈ ಮೂಲಕ ಜನರ ಖಾಸಗಿತನಕ್ಕೆ ಧಕ್ಕೆಯಾಗುವುದನ್ನು ತಪ್ಪಿಸಬೇಕು ಎಂದು ಕೆಲವು ಎನ್‌ಜಿಒಗಳು ಅರ್ಜಿ ಸಲ್ಲಿ ಸಿದ್ದು, ಇದು ಸುಪ್ರೀಂಕೋರ್ಟ್‌ನ ಒಂಬತ್ತು ನ್ಯಾಯಮೂರ್ತಿಗಳ ಸಂವಿಧಾನ ಪೀಠದಲ್ಲಿ ವಿಚಾರಣೆ ನಡೆಯು ತ್ತಿದೆ. ಈಗ ಕರ್ನಾಟಕ, ಪಶ್ಚಿಮ ಬಂಗಾಲ, ಪಂಜಾಬ್‌ ಮತ್ತು ಪುದು ಚೇರಿ ರಾಜ್ಯಗಳೂ ಖಾಸಗಿ ಹಕ್ಕಿಗೆ ಸಹಮತ ವ್ಯಕ್ತಪಡಿಸಿ ಪೂರಕ ಅರ್ಜಿ ಸಲ್ಲಿಸಿವೆ. ಈ ಬಗ್ಗೆ ಹಿರಿಯ ವಕೀಲ ಕಪಿಲ್‌ ಸಿಬಲ್‌ ಮೂಲಕ ಸುಪ್ರೀಂಗೆ ಅರ್ಜಿ ಸಲ್ಲಿಸಿವೆ. ಇದರ ನಡುವೆಯೇ, ಜನರಿಗೆ ಖಾಸಗಿ ಹಕ್ಕನ್ನು ಮೂಲಭೂತ ಹಕ್ಕಿನಲ್ಲಿ ಒಂದಾದ ಸ್ವಾತಂತ್ರ್ಯ ಹಕ್ಕಿನಲ್ಲಿ ಸೇರಿಸಿ ಕೊಡಬಹುದು. ಆದರೆ ಸಂಪೂರ್ಣವಾಗಿಯೂ ಅಲ್ಲ ಎಂದು ಕೇಂದ್ರ ಸರಕಾರ ಹೇಳಿತು.

ಮುಖ್ಯ ನ್ಯಾಯಮೂರ್ತಿ ಜೆ.ಎಸ್‌.ಖೇಹರ್‌ ನೇತೃತ್ವದ ಸಂವಿಧಾನ ಪೀಠದ ಮುಂದೆ ವಾದ ಮಂಡಿಸಿದ ಕಪಿಲ್‌ ಸಿಬಲ್‌, ಈಗಿನ ತಂತ್ರಜ್ಞಾನದ ಆಧುನಿಕತೆಯ ಕಾಲದಲ್ಲಿ ಖಾಸಗಿ ಹಕ್ಕಿನ ಕುರಿತು ಪರಾಮರ್ಶೆ ನಡೆಸುವ ಅಗತ್ಯವಿದೆ. ಅಲ್ಲದೆ ಖಾಸಗಿತನವನ್ನು ರಕ್ಷಿಸುವ ಸಲುವಾಗಿ ಮೂಲಭೂತ ಹಕ್ಕಿನಲ್ಲಿ ಸೇರಿಸಬೇಕು ಎಂದು ವಾದ ಮಂಡಿಸಿದರು.

ಸಂವಿಧಾನದಲ್ಲಿ ಬೇಕಿಲ್ಲ: ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ವಾದ ಮಂಡಿಸಿ,  ಖಾಸಗಿ ಹಕ್ಕು ಒಂದು ಸಂಪೂರ್ಣ ಹಕ್ಕಲ್ಲ. ಇದು “ಹಕ್ಕು’ ಎಂದು ಪರಿಗಣನೆಗೆ ಸಾಧ್ಯವಿದ್ದರೂ ಬದುಕುವ ಹಕ್ಕಿಗಿಂತ ಎರಡನೆಯದ್ದಾಗಿದೆ. ಆದ್ದರಿಂದ ಈ ಬಗ್ಗೆ ಗೊಂದಲಗಳು ಸಲ್ಲ. ಕೆಲವೊಂದು ವಿಶೇಷ ಸಂದರ್ಭಗಳಲ್ಲಿ ಸರಕಾರ  ಈ ವಿಚಾರದಲ್ಲಿ ಮಧ್ಯ ಪ್ರವೇಶಿಸ ಬೇಕಾಗುತ್ತದೆ ಎಂದರು.

ಆದರೆ ಪರಿಪೂರ್ಣ ಹಕ್ಕುಗಳ ವಿಚಾರದಲ್ಲಿ ಮಧ್ಯಪ್ರವೇಶಿಸಿದಾಗ ಪ್ರಜಾಪ್ರಭುತ್ವ ಸಮಾಜವೊಂದು ಅದನ್ನು ವಿರೋಧಿಸಬಹುದು ಮತ್ತು ಪರಿಪೂರ್ಣ ಹಕ್ಕನ್ನು ಎಂದಿಗೂ ತಿದ್ದಲು, ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಅಲ್ಲದೆ ಖಾಸಗಿ ಹಕ್ಕಿನ ಮೇಲಿನ ಅತಿಕ್ರಮಣವನ್ನು ನಾವು ಮೂಲಭೂತ ಹಕ್ಕಿಗೆ ಹೋಲಿಸಲು ಸಾಧ್ಯವಿಲ್ಲ. ಜೀವಿಸುವ ಮತ್ತು ಸ್ವತಂತ್ರವಾಗಿ ಜೀವಿಸುವ ಹಕ್ಕು ಇದರಿಂದ ಭಿನ್ನವಾಗಿದೆ’ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಖಾಸಗಿತನ ವಿಚಾರ ದಲ್ಲಿ ಅಮೆರಿಕದ ಕೋರ್ಟ್‌ ತೀರ್ಪನ್ನು ಇಲ್ಲಿಗೆ ಅನ್ವಯಿಸುವಂತಿಲ್ಲ. ಭಾರತದಲ್ಲಿ ಬಡತನದ ರೇಖೆಗಿಂತ ಕೆಳಗಿನವರು ಮತ್ತು ಮಧ್ಯಮ ವರ್ಗದವರು ಹೆಚ್ಚಿದ್ದಾರೆ. ಅವರ ಬೇಡಿಕೆಗಳನ್ನು ಪರಿಗಣಿಸಬೇಕಿದೆ’ ಎಂದು ಅವರು ತಿಳಿಸಿದ್ದಾರೆ.

ಸೋಮವಾರದ ವಿಚಾರಣೆ ವೇಳೆ ವಾದ ನಡೆಸಿದ್ದ ವೇಣುಗೋಪಾಲ್‌ ಅವರು, “ಒಂದು ವೇಳೆ ಖಾಸಗಿತನ ಎನ್ನುವುದು ಮೂಲಭೂತ ಹಕ್ಕೇ ಎಂದಿದ್ದಲ್ಲಿ ಅದನ್ನು ಸಂವಿಧಾನದ 21ನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸಬೇಕಿತ್ತು. ಆದರೆ ಅದನ್ನು ಉದ್ದೇಶಪೂರ್ವಕವಾಗಿ ಸೇರಿಸಲಾಗಿಲ್ಲ’ ಎಂದು ವಾದಿಸಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.