ಪೊಲೀಸರು ಕುತ್ತಿಗೆ ಹಿಡಿದು ತಳ್ಳಿದರು: ಪ್ರಿಯಾಂಕಾ ಆರೋಪ


Team Udayavani, Dec 29, 2019, 12:37 AM IST

bg-31

ಹೊಸದಿಲ್ಲಿ: ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಬಂಧಿತರಾದವರನ್ನು ಭೇಟಿ ಯಾಗಲು ಮೀರತ್‌ಗೆ ತೆರಳುತ್ತಿದ್ದ ವೇಳೆ ಪೊಲೀಸರು ನನ್ನೊಂದಿಗೆ ದುರ್ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪವನ್ನು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಮಾಡಿದ್ದಾರೆ.

“ನನ್ನನ್ನು ದಾರಿ ಮಧ್ಯೆ ತಡೆಯಲಾಯಿತು. ಪೊಲೀಸರು ನನ್ನ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದು, ಹಿಂದಕ್ಕೆ ತಳ್ಳಿದರು. ಹೀಗಾಗಿ ನಾನು ಕೆಳಕ್ಕೆ ಬಿದ್ದೆ. ಕೊನೆಗೆ ನಾನು ಪಕ್ಷದ ಸದಸ್ಯರೊಬ್ಬರ ದ್ವಿಚಕ್ರ ವಾಹನದ ಮೂಲಕ ಸಂತ್ರಸ್ತರ ಮನೆ ತಲುಪಿದೆ’ ಎಂದು ಪ್ರಿಯಾಂಕಾ ಆರೋಪಿಸಿದ್ದಾರೆ.

ನಿವೃತ್ತ ಐಪಿಎಸ್‌ ಅಧಿಕಾರಿ ಎಸ್‌.ಆರ್‌. ದರಾಪುರಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತ ಸದಾಫ್ ಜಫಾರ್‌ರನ್ನು ಕಳೆದ ವಾರ ಪೊಲೀಸರು ಬಂಧಿಸಿದ್ದು, ಅವರ ಕುಟುಂಬ ಸದಸ್ಯರನ್ನು ಪ್ರಿಯಾಂಕಾ ಶನಿವಾರ ಭೇಟಿಯಾಗಿದ್ದಾರೆ.

ಮುಂದುವರಿದ ಪ್ರತಿಭಟನೆ: ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆಗಳು ಶನಿವಾರವೂ ಮುಂದು ವರಿದಿದ್ದು, ತಮಿಳುನಾಡು, ಕೇರಳ ಸಹಿತ ಹಲವೆಡೆ ರ್ಯಾಲಿಗಳು ನಡೆದಿವೆ. ಕೇರಳದಲ್ಲಿ ಕಾಂಗ್ರೆಸ್‌ ವತಿಯಿಂದ “ಮಹಾ ರ್ಯಾಲಿ’ ನಡೆಸಿ, ರಾಜಭವನ ದತ್ತ ಪಾದಯಾತ್ರೆ ನಡೆಸಲಾಯಿತು.

ಎಸ್‌ಪಿ ವಿವಾದ: ಉ.ಪ್ರ.ದ ಮೀರತ್‌ನ ಎಸ್‌ಪಿ ಯೊಬ್ಬರು, ಪ್ರತಿಭಟನಕಾರರಿಗೆ “ಪಾಕಿಸ್ಥಾನಕ್ಕೆ ಹೋಗಿ’ ಎಂದಿರುವ ವೀಡಿಯೋ ಬಹಿರಂಗವಾ ಗಿದ್ದು, ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಯು ಸರಕಾರಿ ಸಂಸ್ಥೆಗಳಲ್ಲೂ ಕೋಮುವಾದದ ವಿಷ ಬಿತ್ತುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಎಸ್‌ಪಿ ಅಖೀಲೇಶ್‌ ನಾರಾಯಣ್‌ ಸಿಂಗ್‌, “ಪ್ರತಿಭಟನಾಕಾರರು ಪಾಕ್‌ ಪರ ಘೋಷಣೆ ಕೂಗಿದ್ದಕ್ಕೆ ನಾನು ಆ ರೀತಿ ಹೇಳಿದ್ದೆ’ ಎಂದಿದ್ದಾರೆ. ಇದೇ ವೇಳೆ, ರಾಜ್ಯದಲ್ಲಿ ಪೊಲೀಸರು ಹಾರಿಸಿದ ಗುಂಡಿಗೆ ಸತ್ತಿದ್ದು ಒಬ್ಬನೇ ಒಬ್ಬ ಪ್ರತಿಭಟನಕಾರ ಮಾತ್ರ. ಪ್ರತಿಭಟನಕಾರರನ್ನು ಕೆಲವರು ತಮ್ಮದೇ ಅಕ್ರಮ ಶಸ್ತ್ರಾಸ್ತ್ರಗಳ ಮೂಲಕ ಗುಂಡು ಹಾರಿಸಿದ ಪರಿಣಾಮ, ಉಳಿದವರು ಮೃತಪಟ್ಟಿರಬಹುದು ಎಂದು ಡಿಜಿಪಿ ಓಂ ಪ್ರಕಾಶ್‌ ಸಿಂಗ್‌ ಹೇಳಿದ್ದಾರೆ.

ವಿನೂತನ ಪ್ರತಿಭಟನೆ: ಕೇರಳದ ವಿದ್ಯಾರ್ಥಿಗಳ ಗುಂಪೊಂದು ವಿನೂತನ ರೀತಿಯಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ನಡೆಸಿದ್ದು, ಕೊಳಂಚೇರಿಯ ಮಾಥೋಮಾ ಚರ್ಚ್‌ನಲ್ಲಿ ಕ್ರಿಸ್‌ಮಸ್‌ ಹಿನ್ನೆಲೆ ಯಲ್ಲಿ ನಡೆದ ಪ್ರಾರ್ಥನೆ ವೇಳೆ ಈ ಮಕ್ಕಳು ತಲೆಗೆ ಮುಸ್ಲಿಮರು ಧರಿಸುವ ಟೋಪಿ ಹಾಗೂ ಶಾಲು ಧರಿಸಿಕೊಂಡು ಕ್ರಿಸ್ಮಸ್‌ ಕೆರೋಲ್‌ ಹಾಡಿದ್ದಾರೆ. ಈ ಫೋಟೋಗಳು ವೈರಲ್‌ ಆಗಿವೆ.

ರಾಹುಲ್‌ ಕಿಡಿ: ಅಸ್ಸಾಂನ ಗುವಾಹಾಟಿಯಲ್ಲಿ ಸಾರ್ವ ಜನಿಕ ರ್ಯಾಲಿ ನಡೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪೌರತ್ವ ಕಾಯ್ದೆಯನ್ನು ವಿರೋಧಿ ಸಿದ್ದಲ್ಲದೆ, ಅಸ್ಸಾಂನ ಅಸ್ಮಿತೆ ಮತ್ತು ಸಂಸ್ಕೃತಿ ಮೇಲೆ ದಾಳಿ ನಡೆಸಲು ಕಾಂಗ್ರೆಸ್‌ ಬಿಡುವುದಿಲ್ಲ. ಬಿಜೆಪಿಯ ಜನವಿರೋಧಿ ನೀತಿಯಿಂದ ರಾಜ್ಯ ಹಿಂಸಾಚಾರದತ್ತ ಮುಖ ಮಾಡುವಂತಾಗಿದೆ ಎಂದಿದ್ದಾರೆ.

ಗಲಭೆಕೋರರಿಗೆ ಶಾಕ್‌!
ಪ್ರತಿಭಟನಾಕಾರರ ಮೇಲೆ ಪೊಲೀಸರು ಕೈಗೊಂಡ ಕ್ರಮಗಳ ಕುರಿತು ಶನಿವಾರ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಪ್ರತಿಕ್ರಿಯಿಸಿದ್ದು, “ನಾವು ಕೈಗೊಂಡ ಕ್ರಮಗಳಿಂದಾಗಿ ಪ್ರತಿಯೊಬ್ಬ ಪ್ರತಿಭಟನಕಾರನೂ ಶಾಕ್‌ಗೆ ಒಳಗಾಗಿದ್ದು, ಎಲ್ಲರೂ ಮೌನಕ್ಕೆ ಶರಣಾಗಿದ್ದಾರೆ’ ಎಂದಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಸಿಎಂ ಯೋಗಿ ಕಾರ್ಯಾಲಯ, “ಪ್ರತಿ ಗಲಭೆಕೋರನಿಗೂ ಆಘಾತವಾಗಿದೆ. ಸರಕಾರದ ಕಠಿನ ಕ್ರಮ ನೋಡಿ ಎಲ್ಲರೂ ಗಪ್‌ಚುಪ್‌ ಆಗಿದ್ದಾರೆ. ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವವರೇ ಅದರ ನಷ್ಟ ಭರಿಸಬೇಕು ಎಂದು ಆದೇಶಿಸಲಾಗಿದೆ. ಹಿಂಸೆಯಲ್ಲಿ ತೊಡಗುವ ಪ್ರತಿಯೊಬ್ಬ ಪ್ರತಿಭಟನಕಾರನೂ ಈಗ ಕಣ್ಣೀರು ಹಾಕುತ್ತಿದ್ದಾನೆ. ಏಕೆಂದರೆ, ಉತ್ತರ ಪ್ರದೇಶದಲ್ಲಿ ಇರುವುದು ಯೋಗಿ ಸರಕಾರ’ ಎಂದು ಬರೆದುಕೊಂಡಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.