ಉ.ಪ್ರ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!
Team Udayavani, Oct 25, 2021, 10:30 PM IST
ಲಕ್ನೋ:ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ. ವರೆಗಿನ ವೈದ್ಯಕೀಯ ಚಿಕಿತ್ಸೆ ಉಚಿತವಾಗಿ ನೀಡಲಾಗುತ್ತದೆ. ಹೀಗೆಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಘೋಷಿಸಿದ್ದಾರೆ.
ಕೋವಿಡ್ ಅವಧಿಯಲ್ಲಿ ಮತ್ತು ಈಗ ಜ್ವರ ಹರಡುವ ಸಮಯದಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಉತ್ತರ ಪ್ರದೇಶದ ಆರೋಗ್ಯ ವ್ಯವಸ್ಥೆಯ ಶಿಥಿಲ ಸ್ಥಿತಿಯನ್ನು ಎಲ್ಲರೂ ನೋಡಿದ್ದಾರೆ. ಉತ್ತಮ ಮತ್ತು ಅಗ್ಗದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು, ಪ್ರಣಾಳಿಕೆ ಸಮಿತಿಯ ಒಪ್ಪಿಗೆಯೊಂದಿಗೆ, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರವು ಯಾವುದೇ ರೋಗದ ಚಿಕಿತ್ಸೆಗಾಗಿ 10 ಲಕ್ಷ ರೂ.ಗಳವರೆಗೆ ನೆರವು ನೀಡಲು ನಿರ್ಧರಿಸಿದೆ,” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೊಸ ಭರವಸೆ ನೀಡಿದ್ದಾರೆ.
ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ರೈತರ ಸಾಲ ಮನ್ನಾ ಮಾಡುವ ಜತೆ ಭತ್ತ ಮತ್ತು ಗೋಧಿಯನ್ನು ಕ್ವಿಂಟಾಲ್ಗೆ 2500 ರೂ.ನಂತೆ, ಕಬ್ಬನ್ನು ಕ್ವಿಂಟಾಲ್ಗೆ 400 ರೂ.ನಂತೆ ಖರೀದಿಸಲಾಗುವುದು.
ಇದನ್ನೂ ಓದಿ:ನೀಟ್-ಪಿಜಿ ಕೌನ್ಸೆಲಿಂಗ್ ಪ್ರಕ್ರಿಯೆ ಮತ್ತಷ್ಟು ವಿಳಂಬ
20 ಲಕ್ಷ ಜನರಿಗೆ ಉದ್ಯೋಗ ನೀಡುವುದಾಗಿ ಹೇಳಿರುವ ಕಾಂಗ್ರೆಸ್, ವಿದ್ಯುತ್ ಬಿಲ್ನ್ನು ಅರ್ಧಕ್ಕೆ ಇಳಿಸುವುದಾಗಿ ಹೇಳಿದೆ. ಜತೆಗೆ ಕೋವಿಡ್ ಬಿಕ್ಕಟ್ಟಿನಿಂದ ಆರ್ಥಿಕ ತೊಂದರೆಗೆ ಸಿಲುಕಿರುವ ಕುಟುಂಬಗಳಿಗೆ 25,000 ರೂ. ನೀಡುವುದಾಗಿಯೂ ಪಕ್ಷ ಹೇಳಿದೆ.
12ನೇ ತರಗತಿ ಪಾಸ್ ಆದ ವಿದ್ಯಾರ್ಥಿನಿಯರಿಗೆ ಉಚಿತ ಮೊಬೈಲ್ ಹಾಗೂ ಪದವಿ ಪಾಸ್ ಆದ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಇ-ಸ್ಕೂಟರ್ ಕೊಡಲಾಗುವುದು ಎಂದು ಪ್ರಿಯಾಂಕಾ ಆಶ್ವಾಸನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್