ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
ಯಾರಾದರೂ ಧ್ವನಿ ಎತ್ತಿದರೂ, ಆ ಧ್ವನಿಯನ್ನು ಹತ್ತಿಕ್ಕಲಾಗುತ್ತದೆ
Team Udayavani, May 4, 2024, 5:48 PM IST
ಬನಸ್ಕಾಂತ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ‘ಶೆಹಜಾದಾ’ ಎಂದು ಟೀಕೆ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ.
ಬನಸ್ಕಾಂತದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ 4000 ಕಿಲೋಮೀಟರ್ ನಡೆಯುತ್ತಿದ್ದರೆ, ಪ್ರಧಾನಿ ಮೋದಿ ಅವರು ಅರಮನೆಯಲ್ಲಿ ಕುಳಿತಿದ್ದಾರೆ. ಅವರು ರೈತರ ಕಷ್ಟವನ್ನು ಅರ್ಥ ಮಾಡಿಕೊಳ್ಳುವುದಿಲ್ಲ ಎಂದು ಆರೋಪಿಸಿದ್ದಾರೆ.
ಪಿಎಂ ಮೋದಿ ನನ್ನ ಸಹೋದರನನ್ನು ‘ಶೆಹಜಾದಾ’ ಎನ್ನುತ್ತಿದ್ದಾರೆ. ಆದರೆ ನನ್ನ ಸಹೋದರ (ರಾಹುಲ್ ಗಾಂಧಿ) 4,000 ಕಿ.ಮೀ ನಡೆದಿದ್ದಾರೆ, ಜನರನ್ನು ತಲುಪಿ ಅವರ ಕಷ್ಟಗಳನ್ನು ಕೇಳಿದ್ದಾರೆ. ಆದರೆ ಮತ್ತೊಂದೆಡೆ ಸಾಮ್ರಾಟ ನರೇಂದ್ರ ಮೋದಿ ಅರಮನೆಯಲ್ಲಿ ಬದುಕುತ್ತಿದ್ದಾರೆ. ಅವರಿಗೆ ಸಂಕಷ್ಟದಲ್ಲಿರುವ ರೈತರ ಮತ್ತು ಮಹಿಳೆಯರ ಕಷ್ಟಗಳು ಹೇಗೆ ಅರ್ಥವಾಗಬೇಕು? ನರೇಂದ್ರ ಮೋದಿ ಅವರು ಅಧಿಕಾರದಿಂದ ಸುತ್ತುವರಿದಿದ್ದಾರೆ. ಅವರ ಸುತ್ತಲಿನ ಜನರು ಅವರಿಗೆ ಭಯಪಡುತ್ತಾರೆ. ಯಾರೂ ಅವರಿಗೆ ಏನನ್ನೂ ಹೇಳುವುದಿಲ್ಲ. ಯಾರಾದರೂ ಧ್ವನಿ ಎತ್ತಿದರೂ, ಆ ಧ್ವನಿಯನ್ನು ಹತ್ತಿಕ್ಕಲಾಗುತ್ತದೆ”ಎಂದು ಪ್ರಿಯಾಂಕಾ ಹೇಳಿದರು.
ಪ್ರಧಾನಿ ಮೋದಿ ಅವರು ತನ್ನ ಇತ್ತೀಚಿನ ಭಾಷಣಗಳಲ್ಲಿ ರಾಹುಲ್ ಗಾಂಧಿಯವರನ್ನು ಶೆಹಜಾದ್ (ರಾಜಕುಮಾರ) ಎಂದು ಉಲ್ಲೇಖಿಸುತ್ತಿದ್ದಾರೆ.
“ಇಂದಿನ ಪ್ರಧಾನಿಯವರ ಕಾರ್ಯಶೈಲಿ ನೋಡಿ. ಗುಜರಾತ್ ಪ್ರಧಾನಿ ಮೋದಿಗೆ ಗೌರವ ನೀಡಿತು ಮತ್ತು ಅಧಿಕಾರ ನೀಡಿತು, ಆದರೆ ಅವರನ್ನು ದೊಡ್ಡ ಜನರೊಂದಿಗೆ ಮಾತ್ರ ನೋಡಲಾಗುತ್ತದೆ. ಪ್ರಧಾನಿ ಮೋದಿ ರೈತರನ್ನು ಭೇಟಿ ಮಾಡಿರುವುದನ್ನು ನೀವು ನೋಡಿದ್ದೀರಾ? ಕರಾಳ ಕಾನೂನನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನೂರಾರು ರೈತರು ಹುತಾತ್ಮರಾಗಿದ್ದರೂ ಅವರನ್ನು ಭೇಟಿ ಮಾಡಲು ಪ್ರಧಾನಿ ಹೋಗುತ್ತಿಲ್ಲ. ಚುನಾವಣೆಗಳು ಬಂದ ತಕ್ಷಣ ಅವರಿಗೆ ಮತ ಸಿಗುವುದಿಲ್ಲ ಎಂದು ಭಾವಿಸಿದರೆ, ಪ್ರಧಾನಿ ಮೋದಿ ಕಾನೂನನ್ನು ಬದಲಾಯಿಸುತ್ತಾರೆ”ಎಂದು ಪ್ರಿಯಾಂಕಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು
Nehru ಕಾಲದಲ್ಲಿ ಕಬಳಿಸಿದ್ದ ಹಳ್ಳಿಯಲ್ಲಿ ಚೀನ ಗ್ರಾಮ: ಸಚಿವ ಜೈಶಂಕರ್ ತಿರುಗೇಟು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ
Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ