ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ
Team Udayavani, Oct 20, 2021, 7:22 PM IST
ಆಗ್ರಾ: ಉತ್ತರ ಪ್ರದೇಶದ ಆಗ್ರಾದ ಮಲ್ಕಾನಾ ಪೊಲೀಸ್ ಠಾಣೆಯೊಂದರಿಂದ, 25 ಲಕ್ಷ ರೂ. ಹಣ ಮತ್ತು ಪಿಸ್ತೂಲುಗಳನ್ನು ಕಳವು ಮಾಡಿರುವ ಆರೋಪಕ್ಕೆ ಗುರಿಯಾಗಿದ್ದ ಅರುಣ್ ಕುಮಾರ್ (30) ಎಂಬ ಸಫಾಯಿ ಕರ್ಮಚಾರಿಯೊಬ್ಬ, ಪೊಲೀಸ್ ವಿಚಾರಣೆ ವೇಳೆ ಸಾವನ್ನಪ್ಪಿದ್ದಾನೆ. ಇದು ವಿವಾದಕ್ಕೆ ಕಾರಣವಾಗಿದೆ. ಈತ ವಾಲ್ಮೀಕಿ ಸಮುದಾಯಕ್ಕೆ ಸೇರಿದವನಾಗಿದ್ದರಿಂದ ಇದು ರಾಜಕೀಯ ರಂಗುಪಡೆದಿದೆ.
ಏನಾಗಿತ್ತು?:
ಜಗದೀಶ್ಪುರ ಪೊಲೀಸ್ ಠಾಣೆನ ಕೊಠಡಿಯಲ್ಲಿ ಇರಿಸಲಾಗಿದ್ದ 25 ಲಕ್ಷ ರೂ. ಹಣ ಹಾಗೂ ಪಿಸ್ತೂಲುಗಳನ್ನು ಅಪಹರಿಸಿರುವುದಾಗಿ ಅರುಣ್ ಕುಮಾರ್ ಮೇಲೆ ಗುಮಾನಿಗೊಂಡಿದ್ದ ಪೊಲೀಸರು ಗುರುವಾರ ಆತನ ಮನೆಗೆ ಆಗಮಿಸಿ, ಆತನ ವಿಚಾರಣೆಗೆ ಮುಂದಾಗಿದ್ದರು. ಪೊಲೀಸರನ್ನು ನೋಡಿದ ಕೂಡಲೇ ಅರುಣ್ ಗಾಬರಿಗೊಂಡಿದ್ದ. ಪೊಲೀಸರು ಆತನ ವಿಚಾರಣೆ ಆರಂಭಿಸುತ್ತಿದ್ದಂತೆ ಅಸ್ವಸ್ಥನಾದ ಆತನನ್ನು ಪೊಲೀಸರೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾದರೆ ಆತ ಮೃತಪಟ್ಟನೆಂದು ಮೂಲಗಳು ತಿಳಿಸಿವೆ.
ಪೊಲೀಸರ ಅಮಾನತು:
ಅರುಣ್ ಸಾವಿನ ಸುದ್ದಿ ವಿವಾದಕ್ಕೆ ತಿರುಗುತ್ತಿದ್ದಂತೆ, ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇವರಲ್ಲಿ ಆರು ಪೊಲೀಸ್ ಸಿಬ್ಬಂದಿ, ಓರ್ವ ಸ್ಟೇಷನ್ ಹೌಸ್ ಮಾಸ್ಟರ್ ಸೇರಿದ್ದಾರೆ.
ಇದನ್ನೂ ಓದಿ:ಪಂಚಭಾಷಾ ಹಿರಿಯ ನಟಿ ಲಕ್ಷ್ಮೀ ಕೊಲ್ಲೂರು ಕ್ಷೇತ್ರ ಭೇಟಿ
ಸಾಂತ್ವನ ಹೇಳಲು ತೆರಳುತ್ತಿದ್ದ ಪ್ರಿಯಾಂಕಾರಿಗೆ ತಡೆ
ಸುದ್ದಿ ತಿಳಿದ ತಕ್ಷಣವೇ ಅಖಾಡಕ್ಕಿಳಿದಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ, ಅರುಣ್ ಕುಮಾರ್ ಅವರ ಕುಟುಂಬವನ್ನು ಭೇಟಿ ಮಾಡಲು ತೆರಳಿದ್ದರು. ಆದರೆ, ಅವರನ್ನು ಲಕ್ನೋ ಆಗ್ರಾ ಹೆದ್ದಾರಿಯಲ್ಲಿ ಪೊಲೀಸರು ತಡೆದಿದ್ದಾರೆ. ಇದು ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಇದನ್ನು ಟ್ವಿಟರ್ನಲ್ಲಿ ಖಂಡಿಸಿರುವ ಪ್ರಿಯಾಂಕಾ ವಾದ್ರಾ, “ಅರುಣ್ ವಾಲ್ಮೀಕಿಯು ಪೊಲೀಸರ ವಿಚಾರಣೆ ವೇಳೆ ಸಾವನ್ನಪ್ಪಿದ್ದಾರೆ. ಆತನ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ಆತನ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ನನ್ನನ್ನು ಮಾರ್ಗ ಮಧ್ಯೆಯೇ ತಡೆಯಲಾಗಿದೆ. ಇದು ಏಕೆ? ಉತ್ತರ ಪ್ರದೇಶ ಸರ್ಕಾರ ನನಗೆ ಹೆದರುತ್ತದೆಯೇ?” ಎಂದು ಕೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್