ಸುಂದರ ಮುಖ ನೋಡಿ ಯಾರೂ ಮತ ಚಲಾಯಿಸಲ್ಲ!; ಸಚಿವ ನಾರಾಯಣ ಝಾ
Team Udayavani, Jan 25, 2019, 7:55 AM IST
ಪಾಟ್ನಾ: ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿರುವ ಪ್ರಿಯಾಂಕಾ ಗಾಂಧಿ ತುಂಬಾ ಚೆಲುವೆ, ಆದರೆ ರಾಜಕೀಯವಾಗಿ ಆಕೆಯ ಸಾಧನೆ ಶೂನ್ಯ ಎಂದು ಹೇಳಿರುವ ಬಿಜೆಪಿ ಮುಖಂಡ, ಬಿಹಾರ ಸಚಿವ ವಿನೋದ್ ನಾರಾಯಣ್ ಝಾ, ಮತದಾರರು ಸುಂದರವಾದ ಮುಖದ ಆಧಾರದ ಮೇಲೆ ಮತ ಹಾಕುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಆಗಮನದಿಂದಾಗಿ ಉತ್ತರಪ್ರದೇಶ ಕ್ಷೇತ್ರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಆಕೆ ರಾಬರ್ಟ್ ವಾದ್ರಾನ ಪತ್ನಿ. ವಾದ್ರಾ ಭೂಹಗರಣ ಸೇರಿದಂತೆ ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಶಾಮೀಲಾಗಿರುವುದಾಗಿ ಝಾ ಆರೋಪಿಸಿದರು.
ಸುಂದರವಾದ ಮುಖ ನೋಡಿ ಯಾರೂ ಮತ ಚಲಾಯಿಸುವುದಿಲ್ಲ. ರಾಜಕೀಯವಾಗಿಯೂ ಪ್ರಿಯಾಂಕಾ ಸಾಧನೆ ಏನೇನೂ ಇಲ್ಲ. ಹೀಗಾಗಿ ಆಕೆಯ ಆಗಮನದಿಂದ ರಾಜಕೀಯವಾಗಿ ಏನೂ ಪರಿಣಾಮ ಬೀರಲ್ಲ ಎಂದು ಝಾ ಎಎನ್ ಐ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ