ಕೊನೆಗೂ ಹತ್ರಾಸ್ ಸಂತ್ರಸ್ತೆ ಕುಟುಂಬಸ್ಥರ ಭೇಟಿಗೆ ರಾಹುಲ್ ಸೇರಿ ಐದು ಮಂದಿಗೆ ಅವಕಾಶ
ಬ್ಯಾರಿಕೇಡ್ ಅಳವಡಿಸಿ, ಗೌತಮ್ ಬುದ್ಧ ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಹೇಳಿದೆ.
Team Udayavani, Oct 3, 2020, 4:45 PM IST
ನವದೆಹಲಿ/ಲಕ್ನೋ:ಉತ್ತರಪ್ರದೇಶದ ಹತ್ರಾಸ್ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬದ ಸದಸ್ಯರನ್ನು ಭೇಟಿಯಾಗಲು ಕೊನೆಗೂ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿದಂತೆ ಐವರಿಗೆ ಉತ್ತರಪ್ರದೇಶ ಸರ್ಕಾರ ಅವಕಾಶ ನೀಡಿರುವುದಾಗಿ ವರದಿ ತಿಳಿಸಿದೆ.
ಎರಡು ದಿನಗಳ ಹಿಂದಷ್ಟೇ ಹತ್ರಾಸ್ ಸಂತ್ರಸ್ತೆ ಯುವತಿಯ ಕುಟುಂಬ ಸದಸ್ಯರನ್ನು ಭೇಟಿಯಾಗಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ತೆರಳಿದ್ದ ವೇಳೆ ನೋಯ್ಡಾದ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಭಾರೀ ಹೈಡ್ರಾಮಾ ನಡೆದಿತ್ತು. ಈ ವೇಳೆ ಪೊಲೀಸರು ರಾಹುಲ್ ಗಾಂಧಿಯನ್ನು ತಡೆದಾಗ ನಡೆದ ತಳ್ಳಾಟದಲ್ಲಿ ಕೆಳಕ್ಕೆ ಬಿದ್ದ ಘಟನೆಯೂ ನಡೆದಿತ್ತು.
ಇದರಿಂದಾಗಿ ಉತ್ತರಪ್ರದೇಶ ಪೊಲೀಸರ ಕ್ರಮದ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದೀಗ ಎರಡು ದಿನಗಳ ನಂತರ ಮತ್ತೆ ಹತ್ರಾಸ್ ಸಂತ್ರಸ್ತೆ ಕುಟುಂಬದ ಸದಸ್ಯರನ್ನು ಭೇಟಿಯಾಗಲು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದರು.
ಇದನ್ನೂ ಓದಿ: ರಾಯಲ್ ಕದನದಲ್ಲಿ ಟಾಸ್ ಗೆದ್ದ ಸ್ಮಿತ್ ಪಡೆ ಬ್ಯಾಟಿಂಗ್ ಆಯ್ಕೆ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜತೆ ಇಂದು 30ಕ್ಕಿಂತಲೂ ಅಧಿಕ ಸಂಸದರು ಹತ್ರಾಸ್ ಗೆ ತೆರಳಲು ಸಾಥ್ ನೀಡಿದ್ದರು. ಪ್ರಿಯಾಂಕಾ ಗಾಂಧಿ ಕಾರನ್ನು ಚಲಾಯಿಸಿದ್ದು, ಪಕ್ಕದ ಸೀಟ್ ನಲ್ಲಿ ರಾಹುಲ್ ಗಾಂಧಿ ಕುಳಿತಿರುವ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಏತನ್ಮಧ್ಯೆ ಉತ್ತರಪ್ರದೇಶ-ದಿಲ್ಲಿ ಗಡಿಯಲ್ಲಿ ಗಾಂಧಿ ವಾಹನವನ್ನು ಮತ್ತೆ ತಡೆದು ನಿಲ್ಲಿಸಲಾಗಿತ್ತು. ನಂತರ ಪೊಲೀಸರು ರಾಹುಲ್, ಪ್ರಿಯಾಂಕಾ ಸೇರಿದಂತೆ ಕೇವಲ ಐದು ಮಂದಿಗೆ ಮಾತ್ರ ತೆರಳಲು ಅವಕಾಶ ಮಾಡಿಕೊಟ್ಟಿರುವುದಾಗಿ ವರದಿ ವಿವರಿಸಿದೆ.
ರಾಹುಲ್ ಭೇಟಿಯ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದ ಪೊಲೀಸರನ್ನು ನಿಯೋಜಿಸಲಾಗಿತ್ತು. ಅಲ್ಲದೇ ದಿಲ್ಲಿ ನೋಯ್ಡಾ ಫ್ಲೈ ಓವರ್ ನಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿರುವುದಾಗಿ ವರದಿ ತಿಳಿಸಿದೆ. ಬ್ಯಾರಿಕೇಡ್ ಅಳವಡಿಸಿ, ಗೌತಮ್ ಬುದ್ಧ ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?