ಸಾಂತ್ವನ ಹೇಳಲು ಬಂದ ಪ್ರಿಯಾಂಕಾ ಬಂಧನ

ಘೆರೋವಾಲ್ ಹಳ್ಳಿಗೆ ತೆರಳಲು ನಿರ್ಬಂಧ

Team Udayavani, Jul 20, 2019, 5:00 AM IST

p-40

ಲಕ್ನೋ: ಇತ್ತೀಚೆಗೆ, ಭೂ ವಿವಾದದ ಹಿನ್ನೆಲೆಯಲ್ಲಿ ಹಳ್ಳಿಯ ಸರಪಂಚನೇ ಅದೇ ಹಳ್ಳಿಯ 10 ನಿವಾಸಿಗಳನ್ನು ಗುಂಡಿಕ್ಕಿ ಕೊಂದು ಹಾಕಿದ ಘಟನೆ ನಡೆದಿದ್ದ ಉತ್ತರ ಪ್ರದೇಶದ ಘೆರೋವಾಲ್ ಹಳ್ಳಿಗೆ ಭೇಟಿ ನೀಡಲು ಶುಕ್ರವಾರ ತೆರಳುತ್ತಿದ್ದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರನ್ನು ಮಾರ್ಗಮಧ್ಯೆಯೇ ತಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಹಿಂದಿರುಗುವಂತೆ ಮಾಡಲಾದ ಮನವಿಗಳಿಗೆ ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

ಜು. 17ರಂದು, ತುಂಡು ಭೂಮಿಯೊಂದನ್ನು ಅತಿಕ್ರಮಿಸಲು ಯತ್ನಿಸುತ್ತಿದ್ದ ಸರಪಂಚನ ನಡೆ ವಿರೋಧಿಸಿದ ಹಳ್ಳಿಗರ ಮೇಲೆ ಆತನ ಬೆಂಬಲಿಗರು ಗುಂಡಿನ ಮಳೆಗರೆದ ಘಟನೆ ನಡೆದಿತ್ತು. ಘಟನೆಯಲ್ಲಿ 10 ಜನರು ಸಾವಿಗೀಡಾಗಿ, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ನೊಂದ ಕುಟುಂಬಗಳಿಗೆ ಸಾಂತ್ವನ ಹೇಳಲು ಪ್ರಿಯಾಂಕಾ ಆಗಮಿಸಿದ್ದರು. ಮೊದಲಿಗೆ, ಭೋಪಾಲ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳನ್ನು ಮಾತನಾಡಿಸಿದ ಅವರು, ಆನಂತರ ತಮ್ಮ ಬೆಂಬಲಿಗರೊಂದಿಗೆ ಘೆರೋವಾಲ್ ಹಳ್ಳಿಯಿರುವ ಸೋನ್‌ಭದ್ರಾ ಜಿಲ್ಲೆ ಕಡೆಗೆ ರಸ್ತೆ ಮಾರ್ಗವಾಗಿ ತೆರಳಿದರು. ಆದರೆ, ಮಿರ್ಜಾಪುರ ಜಿಲ್ಲೆಯ ನಾರಾಯಣಪುರದಲ್ಲಿ ಅವರನ್ನು ತಡೆದ ಪೊಲೀಸರ ಮುಂದೆ ಪ್ರಿಯಾಂಕಾ ಧರಣಿ ಕುಳಿತರು. ಹಾಗಾಗಿ, ಅವರನ್ನು ಹಾಗೂ ಬೆಂಬಲಿಗರನ್ನು ವಶಕ್ಕೆ ಪಡೆದು ಅತಿಥಿ ಗೃಹಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ವರಿಷ್ಠಾಧಿಕಾರಿಯವರು ಪ್ರಿಯಾಂಕಾರ ಮನವೊಲಿಸಲು ಯತ್ನಿಸಿದರು. ಅದಕ್ಕೆ ಒಪ್ಪದ ಅವರನ್ನು ಬಂಧಿಸಲಾಗಿದೆ.

ಈ ನಡುವೆ, ಘೆರೋವಾಲ್ ಘಟನೆ ಬಗ್ಗೆ ಪ್ರತ್ರಿಕ್ರಿಯಿಸಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಸರ್ಕಾರ ಭೂ ಮಾಫಿಯಾಗಳನ್ನು ಬೆಂಬಲಿಸಿದ್ದೇ ಘೆರೋವಾಲ್ ಘಟನೆಗೆ ಕಾರಣ ಎಂದಿದ್ದಾರೆ. ಅತ್ತ, ಪ್ರಿಯಾಂಕಾ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್‌, ದೇಶವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ. ಶುಕ್ರವಾರ ಹಲವೆಡೆ ಪ್ರತಿಭಟನೆ ನಡೆದಿದೆ. ಇದೇ ವೇಳೆ, ಅಧಿಕಾರದ ನಿರಂಕುಶ ಅನ್ವಯತೆಯು ಬಿಜೆಪಿಯ ಅಭದ್ರತೆಯನ್ನು ತೋರಿಸಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ನನ್ನ ಮಗನ ವಯಸ್ಸಿನ ಹುಡುಗನೊಬ್ಬ ಘಟನೆಯಲ್ಲಿ ಗಾಯಗೊಂಡಿ ದ್ದಾನೆ. ಘಟನೆಯಿಂದ ನೊಂದಿ ರುವವರಿಗೆ ಸಾಂತ್ವನ ಹೇಳಲು ತೆರಳುತ್ತಿರುವ ನನ್ನನ್ನು ಅಡ್ಡಿಪಡಿಸಲಾಗಿದೆ.
ಪ್ರಿಯಾಂಕಾ ವಾದ್ರಾ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.