ಪ್ರಿಯಾಂಕಾ ಪ್ರವೇಶ ಬಿಜೆಪಿಗೆ ಅಡ್ಡಿಯಲ್ಲ
Team Udayavani, Mar 17, 2019, 12:30 AM IST
“ಸಕ್ರಿಯ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ ಪ್ರವೇಶ ಮಾಡಿರುವುದು ಉತ್ತರ ಪ್ರದೇಶದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವುದಕ್ಕೆ ತೊಂದರೆಯಾಗಲಾರದು’. ಹೀಗೆಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. “ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರಿಯಾಂಕಾ ಪ್ರವೇಶವು ಕಾಂಗ್ರೆಸ್ನ ಆಂತರಿಕ ವಿಚಾರ ಎಂದಿದ್ದಾರೆ. ಎಸ್ಪಿ ಮತ್ತು ಬಿಎಸ್ಪಿ ಮೈತ್ರಿಕೂಟದಿಂದಲೂ ಸಮಸ್ಯೆ ಇಲ್ಲ ಎಂದು ಹೇಳಿರುವ ಅವರು, ಆ ಮೈತ್ರಿಕೂಟ ಈಗ ತೊಂದರೆ ಅನುಭವಿಸುತ್ತಿದೆ ಎಂದು ಹೇಳಿದ್ದಾರೆ.
ದೇಶವನ್ನು ಸುರಕ್ಷಿತವಾಗಿ ಇರಿಸು ವಲ್ಲಿ ಯಶಸ್ವಿಯಾಗಿರುವ ವ್ಯಕ್ತಿ ಮತ್ತು ಪಕ್ಷಕ್ಕೆ ಜನರು ಮತಹಾಕಲಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪರೋಕ್ಷವಾಗಿ ಜನರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಮೇಲೆ ನಂಬಿಕೆ ಇರಿಸಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ. ಎಸ್ಪಿ-ಬಿಎಸ್ಪಿ ಮೈತ್ರಿಯೇ ತೊಂದರೆಯಲ್ಲಿ ಸಿಲುಕಿದೆ. ವಿನಾ ಕಾರಣವಾಗಿ ಅದರ ಬಗ್ಗೆ ದೊಡ್ಡ ವಿಚಾರ ಮಾಡಲಾಗುತ್ತದೆ. ಪ್ರಿಯಾಂಕಾ ವಾದ್ರಾ ಈ ಹಿಂದೆಯೂ ಹಲವು ಬಾರಿ ಉತ್ತರಪ್ರದೇಶದಲ್ಲಿ ಚುನಾವಣಾ ಪ್ರಚಾರಗಳಲ್ಲಿ ಭಾಗಿಯಾಗಿದ್ದರು. ಈ ಬಾರಿ ಅವರನ್ನು ಉತ್ತರ ಪ್ರದೇಶ ಪೂರ್ವ ಭಾಗದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ ಅಷ್ಟೆ. ಅದು ಕಾಂಗ್ರೆಸ್ನ ಆಂತರಿಕ ವಿಚಾರ. ಅವರ ರಾಜಕೀಯ ಪ್ರವೇಶದಿಂದ ಬಿಜೆಪಿ ಆತಂಕಗೊಳ್ಳುವಂಥದ್ದೇನಿಲ್ಲ ಎಂದಿದ್ದಾರೆ.
ಪುಲ್ವಾಮಾ ದಾಳಿಯ ನಂತರ ಕೈಗೊಂಡ ದಾಳಿಯನ್ನು ಸಮರ್ಥಿಸಿ ಕೊಂಡ ಯೋಗಿ, ಪ್ರಧಾನಿ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ. ಅದು ಪ್ರಾಮಾಣಿಕ ಮತ್ತು ಸ್ಪರ್ಧಾತ್ಮಕ ನಾಯಕತ್ವವನ್ನು ಎತ್ತಿತೋರಿಸುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?