ಮಲ್ಯ ಆಸ್ತಿ ಜಪ್ತಿಗೆ ಅವಕಾಶ ನೀಡಿ
Team Udayavani, Jun 23, 2018, 6:00 AM IST
ಮುಂಬೈ/ನವದೆಹಲಿ: ಸಾಲ ಮಾಡಿ ದೇಶಬಿಟ್ಟು ಓಡಿ ಹೋಗಿರುವ ಕಿಂಗ್ಫಿಶರ್ ಉದ್ಯಮಿ ವಿಜಯ್ ಮಲ್ಯ ಅವರನ್ನು ದೇಶಭ್ರಷ್ಟ ಅಪರಾಧಿ ಎಂದು ಘೋಷಿಸುವಂತೆ ಮನವಿ ಮಾಡಿರುವ ಜಾರಿ ನಿರ್ದೇಶನಾಲಯ ಶುಕ್ರವಾರ ಮುಂಬೈನ ವಿಶೇಷ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಇತ್ತೀಚೆಗಷ್ಟೇ ಹೊರಡಿಸಲಾಗಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ಸುಗ್ರೀ ವಾಜ್ಞೆಯ ಬಲವನ್ನು ಬಳಸಿ ಕೊಂಡಿರುವ ಜಾರಿ ನಿರ್ದೇಶಾನಲಯ ಇದೇ ಮೊದಲ ಬಾರಿಗೆ ವಿಜಯ್ ಮಲ್ಯ ವಿರುದ್ಧ ಇಂಥ ದ್ದೊಂದು ಕಠಿಣ ಕ್ರಮಕ್ಕೆ ಮುಂದಾಗಿದೆ. ಅಲ್ಲದೆ, ಮಲ್ಯ ಅವರ 12,500 ಕೋಟಿ ರೂ. ಮೌಲ್ಯದ ಸ್ಥಿರ ಮತ್ತು ಚರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ನೀಡುವಂತೆಯೂ ಕೋರ್ಟ್ಗೆ ಮನವಿ ಮಾಡಲಾಗಿದೆ. ವಿಜಯ್ ಮಲ್ಯ ಮಾಲೀಕತ್ವದಲ್ಲಿರುವ ಆಸ್ತಿ ಪಾಸ್ತಿ ಬಗ್ಗೆ ಈಗಾಗಲೇ ಲೆಕ್ಕ ಹಾಕಲಾಗಿದ್ದು, ಒಟ್ಟಾರೆಯಾಗಿ 12,500 ಕೋಟಿ ರೂ. ಮೌಲ್ಯವಿದೆ ಎಂದು ಗೊತ್ತಾಗಿದೆ. ಮಲ್ಯ 9 ಸಾವಿರ ಕೋಟಿ ರೂ. ಸಾಲ ಮಾಡಿ ಓಡಿ ಹೋಗಿದ್ದಾರೆ. ಹೀಗಾಗಿ ಸಾಲ ಚುಕ್ತಾ ಮಾಡಿಕೊಳ್ಳುವ ಸಲುವಾಗಿ ಆಸ್ತಿಯನ್ನು ಜಪ್ತಿ ಮಾಡಿಕೊಳ್ಳಬೇಕಾಗಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಿದೆ. ಇದಕ್ಕೆ ಪೂರಕವಾಗಿ ಜಾರಿ ನಿರ್ದೇಶ ನಾಲಯವು ಎರಡು ಚಾರ್ಜ್ಶೀಟ್ಗಳನ್ನೂ ಸಲ್ಲಿಸಿದೆ.
ನೀರವ್ ವಿರುದ್ಧ ರೆಡ್ಕಾರ್ನರ್ ನೋಟಿಸ್?: ಇನ್ನೊಂದೆಡೆ, ಬ್ಯಾಂಕುಗಳಿಗೆ ವಂಚನೆ ಮಾಡಿ ಪರಾರಿಯಾಗಿರುವ ಮತ್ತೂಬ್ಬ ಉದ್ಯಮಿ ನೀರವ್ ಮೋದಿ ವಿರುದ್ಧ ಇಂಟರ್ಪೋಲ್ ಸದ್ಯದಲ್ಲೇ ರೆಡ್ಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆಯಿದೆ. ಈಗಾಗಲೇ ನೋಟಿಸ್ ಜಾರಿಗೆ ಕೋರಿ ಸಿಬಿಐ ಅನೇಕ ದಾಖಲೆಗಳನ್ನು ಕಳುಹಿಸಿಕೊಟ್ಟಿದ್ದು, ಅವುಗಳ ಪರಿಶೀಲನೆ ಪೂರ್ಣಗೊಂಡಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ