“ಪರಿಣತ’ ಪ್ರೊಫೆಸರ್‌ಗಳು!”ಪ್ರೊಫೆಸರ್ಸ್‌ ಆಫ್ ಪ್ರಾಕ್ಟೀಸ್‌’ ನೇಮಕಕ್ಕೆ ಯುಜಿಸಿ ಒಪ್ಪಿಗೆ

ವಿವಿಗಳಲ್ಲಿನ್ನು ಶೇ.10ರಷ್ಟು ಬೋಧಕ ಸಿಬ್ಬಂದಿಯಾಗಿ ಪರಿಣತರ ನೇಮಕಕ್ಕೆ ಅವಕಾಶ

Team Udayavani, Aug 23, 2022, 7:25 AM IST

“ಪರಿಣತ’ ಪ್ರೊಫೆಸರ್‌ಗಳು!”ಪ್ರೊಫೆಸರ್ಸ್‌ ಆಫ್ ಪ್ರಾಕ್ಟೀಸ್‌’ ನೇಮಕಕ್ಕೆ ಯುಜಿಸಿ ಒಪ್ಪಿಗೆ

ನವದೆಹಲಿ: ಇನ್ನು ಮುಂದೆ ವಿಶ್ವವಿದ್ಯಾನಿಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿವಿಧ ಕ್ಷೇತ್ರಗಳ ಪರಿಣಿತರನ್ನೇ ಪ್ರಾಧ್ಯಾಪಕರನ್ನಾಗಿ ನೇಮಕ ಮಾಡಲು ಸಾಧ್ಯವಾಗಲಿದೆ.

ಅಷ್ಟೇ ಅಲ್ಲ, ಹೊಸ ವಿಭಾಗದಡಿ ಆಯ್ಕೆಯಾಗುವ ಬೋಧಕ ಸಿಬ್ಬಂದಿಗೆ ಔಪಚಾರಿಕ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಸಂಶೋಧನಾ ಲೇಖನಗಳು ಪ್ರಕಟಗೊಂಡಿರಬೇಕು ಎಂಬ ಅಗತ್ಯತೆಗಳು ಕಡ್ಡಾಯವಾಗಿರುವುದಿಲ್ಲ.

ಕಳೆದ ವಾರ ನಡೆದ ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ(ಯುಜಿಸಿ)ದ 560ನೇ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ವಾರವೇ ಈ ಕುರಿತ ಅಧಿಸೂಚನೆ ಹೊರಬೀಳುವ ಸಾಧ್ಯತೆಯಿದೆ. ಈ ನಿಯಮವು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

“ಪ್ರೊಫೆಸರ್ಸ್‌ ಆಫ್ ಪ್ರಾಕ್ಟೀಸ್‌’ನ ಕರಡು ಮಾರ್ಗಸೂಚಿಯಲ್ಲಿ ಪ್ರಸ್ತಾಪಿಸಿರುವ ಪ್ರಕಾರ, ವಿಶ್ವವಿದ್ಯಾನಿಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಮಂಜೂರಾದ ಹುದ್ದೆಗಳ ಪೈಕಿ ಶೇ.10ರಷ್ಟು ಬೋಧಕ ಸಿಬ್ಬಂದಿಯನ್ನಾಗಿ ಎಂಜಿನಿಯರಿಂಗ್‌, ವಿಜ್ಞಾನ, ಮಾಧ್ಯಮ, ಸಾಹಿತ್ಯ, ಉದ್ಯಮಶೀಲತೆ, ಸಮಾಜ ವಿಜ್ಞಾನ, ಕಲೆ, ನಾಗರಿಕ ಸೇವೆಗಳು ಮತ್ತು ಸಶಸ್ತ್ರ ಪಡೆಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಪರಿಣತರನ್ನು ನೇಮಕ ಮಾಡಿಕೊಳ್ಳಬಹುದು. ಆಯಾ ಕ್ಷೇತ್ರದಲ್ಲಿ ಕನಿಷ್ಠ 15 ವರ್ಷಗಳ ಅನುಭವ ಹೊಂದಿರುವವರು “ಪ್ರೊಫೆಸರ್ಸ್‌ ಆಫ್ ಪ್ರಾಕ್ಟೀಸ್‌’ ಆಗಲು ಅರ್ಹರಾಗಿರುತ್ತಾರೆ. ಅವರ ವೃತ್ತಿಪರ ಅನುಭವವು ಉತ್ತಮವಾಗಿದ್ದರೆ ಅವರ ಔಪಚಾರಿಕ ಶೈಕ್ಷಣಿಕ ವಿದ್ಯಾರ್ಹತೆಯನ್ನೂ ಪರಿಗಣಿಸಬೇಕಾಗಿಲ್ಲ. ತಮ್ಮ ಕರ್ತವ್ಯಗಳು ಹಾಗೂ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸುವಂಥ ಕೌಶಲ್ಯ ಹೊಂದಿದ್ದರೆ ಸಾಕು ಎಂದೂ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಕರ್ತವ್ಯಗಳೇನು?:
ಕೋರ್ಸ್‌ಗಳು ಮತ್ತು ಪಠ್ಯಕ್ರಮಗಳ ರಚನೆ, ವಿನ್ಯಾಸದಲ್ಲಿ ಭಾಗಿಯಾಗುವುದು, ಸಾಂಸ್ಥಿಕ ನೀತಿಗಳಿಗೆ ಅನುಗುಣವಾಗಿ ಹೊಸ ಕೋರ್ಸ್‌ಗಳನ್ನು ಪರಿಚಯಿಸುವುದು ಮತ್ತು ಉಪನ್ಯಾಸ ನೀಡುವುದು, ನಾವೀನ್ಯತೆ ಮತ್ತು ಉದ್ಯಮಶೀಲತಾ ಯೋಜನೆಗಳನ್ನು ಕೈಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವುದು, ಇಂಥ ಚಟುವಟಿಕೆಗಳಿಗೆ ಅಗತ್ಯ ಮಾರ್ಗದರ್ಶನಗಳನ್ನು ನೀಡುವುದು, ಕೈಗಾರಿಕೆ-ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಹೆಚ್ಚಿಸುವಂತೆ ಮಾಡುವುದು, ಕಾರ್ಯಾಗಾರ ಹಾಗೂ ವಿಚಾರ ಸಂಕಿರಣಗಳನ್ನು ಆಯೋಜಿಸುವುದು, ವಿಶೇಷ ಉಪನ್ಯಾಸ ಮತ್ತು ತರಬೇತಿ ಕಾರ್ಯಕ್ರಮಗಳನ್ನು ಏರ್ಪಡಿಸುವುದು, ಜಂಟಿ ಸಂಶೋಧನಾ ಪ್ರಾಜೆಕ್ಟ್ಗಳನ್ನು ನಡೆಸುವುದು ಮುಂತಾದ ಚಟುವಟಿಕೆಗಳನ್ನು ಈ ಪ್ರೊಫೆಸರ್‌ಗಳು ಕೈಗೊಳ್ಳಬೇಕು.

ಆಯ್ಕೆ ಹೇಗೆ?
ಆಯಾ ವಿವಿಗಳ ಕುಲಪತಿಗಳು ಮತ್ತು ನಿರ್ದೇಶಕರು “ಪ್ರೊಫೆಸರ್‌ ಆಫ್ ಪ್ರಾಕ್ಟೀಸ್‌’ ಹುದ್ದೆಗೆ ಸಮಾಜದ ಪರಿಣತ ವ್ಯಕ್ತಿಗಳಿಂದ ನಾಮನಿರ್ದೇಶನವನ್ನು ಆಹ್ವಾನಿಸಬಹುದು ಅಥವಾ ಸೇವೆ ಮಾಡಲು ಬಯಸುವ ಪರಿಣತರು ತಮ್ಮ ನಾಮನಿರ್ದೇಶನವನ್ನು ಕುಲಪತಿಗಳಿಗೆ ಕಳುಹಿಸಬಹುದು. ಅದರಲ್ಲಿ ತಮ್ಮ ಕುರಿತಾದ ವಿಸ್ತೃತ ಬಯೋಡೇಟಾ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ತಾವು ನೀಡಬಹುದಾದ ಸಂಭಾವ್ಯ ಕೊಡುಗೆಗಳ ಬಗ್ಗೆ ಸಂಕ್ಷಿಪ್ತ ವಿವರವನ್ನು ನೀಡಬೇಕು. ಶಿಕ್ಷಣ ಸಂಸ್ಥೆಯ ಇಬ್ಬರು ಹಿರಿಯ ಪ್ರೊಫೆಸರ್‌ಗಳು ಮತ್ತು ಹೊರಗಿನ ಒಬ್ಬ ಗಣ್ಯ ವ್ಯಕ್ತಿಯನ್ನು ಒಳಗೊಂಡ ಆಯ್ಕೆ ಸಮಿತಿಯು ಈ ನಾಮನಿರ್ದೇಶನಗಳನ್ನು ಪರಿಶೀಲಿಸುತ್ತದೆ. ಈ ಸಮಿತಿಯ ಶಿಫಾರಸಿನ ಆಧಾರದಲ್ಲಿ ಸಂಸ್ಥೆಯ ಶೈಕ್ಷಣಿಕ ಮಂಡಳಿ ಮತ್ತು ಕಾರ್ಯಕಾರಿ ಮಂಡಳಿಯು ಯಾರನ್ನು ನೇಮಕ ಮಾಡಬೇಕು ಎಂಬ ನಿರ್ಧಾರವನ್ನು ಕೈಗೊಳ್ಳುತ್ತದೆ.

ಷರತ್ತುಗಳೇನು?
– ಈ ವಿಭಾಗದಡಿ ಆಯ್ಕೆಯಾಗುವವರ ಪ್ರಮಾಣವು ವಿವಿಗಳಿಗೆ ಮಂಜೂರಾದ ಹುದ್ದೆಗಳ ಶೇ.10 ಅನ್ನು ಮೀರಬಾರದು.
– ವಿವಿಗಳಿಗೆ ಮಂಜೂರಾದ ಹುದ್ದೆಗಳ ಸಂಖ್ಯೆ ಮತ್ತು ಸಾಮಾನ್ಯ ಬೋಧಕ ಸಿಬ್ಬಂದಿಯ ನೇಮಕದ ಮೇಲೆ ಇದು ಯಾವ ಪರಿಣಾಮವನ್ನೂ ಬೀರುವಂತಿಲ್ಲ.
– ಇದರಲ್ಲಿ ಆಯ್ಕೆಯಾದ ಪ್ರೊಫೆಸರ್‌ಗಳು ನಿಗದಿತ ಅವಧಿಗಷ್ಟೇ ಕರ್ತವ್ಯದಲ್ಲಿರುತ್ತಾರೆ.
– ಶಿಕ್ಷಕ ವೃತ್ತಿಯಲ್ಲಿರುವವರು ಅಥವಾ ಶಿಕ್ಷಕರಾಗಿ ನಿವೃತ್ತಿ ಹೊಂದಿದವರನ್ನು ಈ ವಿಭಾಗದಡಿ ಆಯ್ಕೆ ಮಾಡುವಂತಿಲ್ಲ
– ಶಿಕ್ಷಣ ಸಂಸ್ಥೆ ಮತ್ತು ಪರಿಣತ ವ್ಯಕ್ತಿಯ ನಡುವೆ ನಡೆದ ಒಪ್ಪಂದದಂತೆ ಸಂಭಾವನೆ ನಿಗದಿಯಾಗಬೇಕು
– ಆರಂಭಿಕ ಸೇವಾವಧಿಯು 1 ವರ್ಷವಾಗಿರುತ್ತದೆ. ಈ ಸೇವಾವಧಿಯನ್ನು ವಿಸ್ತರಿಸಬೇಕೇ, ಬೇಡವೇ ಎಂಬುದನ್ನು ಆಯಾ ಉನ್ನತ ಶಿಕ್ಷಣ ಸಂಸ್ಥೆಗಳು ನಿರ್ಧರಿಸುತ್ತವೆ
– ಪ್ರೊಫೆಸರ್‌ ಆಫ್ ಪ್ರಾಕ್ಟೀಸ್‌ನ ಗರಿಷ್ಠ ಸೇವಾವಧಿ 3 ವರ್ಷವಾಗಿರುತ್ತದೆ. ವಿಶೇಷ ಪ್ರಕರಣಗಳಲ್ಲಿ ಮಾತ್ರ ಇದನ್ನು ಮತ್ತೂಂದು ವರ್ಷ ವಿಸ್ತರಿಸಬಹುದು. ಆದರೆ, ಒಟ್ಟಾರೆ ಸೇವಾವಧಿ 4 ವರ್ಷ ಮೀರುವಂತಿಲ್ಲ.

 

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.