ಪ.ಬಂಗಾಲದಲ್ಲಿ ನಿಷೇಧಾಜ್ಞೆ ಜಾರಿ
Team Udayavani, May 21, 2019, 6:15 AM IST
ಲೋಕಸಭೆ ಚುನಾವಣೆ ವೇಳೆ ಸತತ 7 ಹಂತಗಳಲ್ಲಿಯೂ ಹಿಂಸಾಚಾರಕ್ಕೆ ಸಾಕ್ಷಿಯಾದ ಪಶ್ಚಿಮ ಬಂಗಾಲದ ಕೆಲವೆಡೆ ಚುನಾವಣ ಆಯೋಗ ಸೋಮವಾರ ನಿಷೇಧಾಜ್ಞೆ ಜಾರಿಗೊಳಿಸಿದೆ. ಚುನಾವಣೋತ್ತರ ಹಿಂಸಾಚಾರವನ್ನು ನಿಯಂತ್ರಿಸುವ ಸಲುವಾಗಿ ಭತ್ಪಾರಾ ಸೇರಿದಂತೆ ಕೆಲವೆಡೆ ಸೆಕ್ಷನ್ 144 ಅನ್ನು ಅನಿರ್ದಿಷ್ಟಾವಧಿಗೆ ಜಾರಿಗೊಳಿಸಿರುವುದಾಗಿ ಆಯೋಗ ಮಾಹಿತಿ ನೀಡಿದೆ. ಮತ ಎಣಿಕೆಗೆ ಸಹಕರಿಸಲು ಮತ್ತು ಚುನಾವಣೋತ್ತರ ಹಿಂಸೆಯನ್ನು ನಿಗ್ರಹಿಸಲು ಕೇಂದ್ರೀಯ ಪv ೆಗಳ ಸುಮಾರು 200 ಕಂಪೆನಿಗಳನ್ನು ನಿಯೋಜಿಸಲಾಗಿದೆ. ರಾಜ್ಯಾದ್ಯಂತ ಹೆಚ್ಚುವರಿ ಭದ್ರತಾ ಸಿಬಂದಿ ನಿಯೋಜಿಸಲಾಗಿದೆ ಎಂದು ವಿಶೇಷ ಪೊಲೀಸ್ ವೀಕ್ಷಕ ವಿವೇಕ್ ದುಬೆ ಹೇಳಿದ್ದಾರೆ.
ಇವಿಎಂಗೆ ದೀದಿ ಜನರ ಕಾವಲು ಪಶ್ಚಿಮ ಬಂಗಾಲದಲ್ಲಿ ಮತ ಎಣಿಕೆ ನಡೆಯಲಿರುವ ಅರಂಗಡ ಗರ್ಲ್ಸ್ ಸ್ಕೂಲ್, ಹೂಗ್ಲಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಸೆರಾಂಪುರ ಕಾಲೇಜಿನ ಸುತ್ತಲೂ ಭದ್ರತಾ ಸಿಬಂದಿಯ ಹೊರತಾಗಿ ಕೆಲವರು ಕಾವಲು ಕಾಯುತ್ತಿದ್ದಾರೆ. ಅದು ತೃಣಮೂಲ ಕಾಂಗ್ರೆಸ್ನ ಕಾರ್ಯಕರ್ತರು. ರವಿವಾರ ರಾತ್ರಿಯೇ 12 ಕಾರ್ಯಕರ್ತರು ಈ ಪ್ರದೇಶಗಳಿಗೆ ತೆರಳಿದ್ದು, ಸ್ಟ್ರಾಂಗ್ ರೂಂಗಳ ಹೊರಗೆ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾವಲು ಕಾಯುತ್ತಿದ್ದಾರೆ. ಯಾವುದಾದರೂ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತವೆಯೇ ಎಂಬುದನ್ನು ನೋಡಲು ಸಿಎಂ ಆದೇಶದ ಮೇರೆಗೆ ಬಂದಿರುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ