ಪ್ರಾಜೆಕ್ಟ್ ಚೀತಾ… ಹುಲಿ ಮುಖದ ವಿಮಾನದ ಅಸಲಿ ಹಿನ್ನೆಲೆಯೇನು?

ಚೀತಾ ಬದಲು ಹುಲಿಮುಖದ ಚಿತ್ರ ಬಿಡಿಸಿದ್ದೇಕೆ…

Team Udayavani, Sep 20, 2022, 4:45 PM IST

7-cheeta

ಚೀತಾ ಭಾರತದಲ್ಲಿ ಸಂಪೂರ್ಣವಾಗಿ ನಾಶಗೊಂಡಿರುವ ಏಕೈಕ ದೊಡ್ಡ ಮಾಂಸಹಾರಿ ಪ್ರಾಣಿ. ಮಾನವ – ವನ್ಯ ಜೀವಿಗಳ ಸಂಘರ್ಷ, ಬೇಟೆ, ಆವಾಸಸ್ಥಾನದ ನಾಶದಿಂದಾಗಿ ಈ ಸಂತತಿ ದೇಶದಿಂದ ಮರೆಯಾಗಿತ್ತು. ಭಾರತ ಸರ್ಕಾರವು ದೇಶದಲ್ಲಿ ಚೀತಾ ಸಂತತಿ ಸಂಪೂರ್ಣವಾಗಿ ನಾಶವಾಗಿದೆ ಎಂದು 1952ರಲ್ಲಿ ಅಧಿಕೃತವಾಗಿ ಘೋಷಣೆ ಮಾಡಿತ್ತು.

ಭಾರತದ ನೆಲದಿಂದ ಕಣ್ಮರೆಯಾಗಿದ್ದ ಚೀತಾಗಳು ಸುಮಾರು 70 ವರ್ಷಗಳ ಬಳಿಕ ಭಾರತದಲ್ಲಿ ಚೀತಾಗಳು ಹೆಜ್ಜೆಯಿಟ್ಟಿವೆ. ಮಧ್ಯ ಪ್ರದೇಶದ ಕುನೋ ಅರಣ್ಯ ಪ್ರದೇಶದಲ್ಲಿ ಈ ಚೀತಾಗಳ ಸಾಮ್ರಾಜ್ಯ ಆರಂಭವಾಗಿದೆ. ಸೆ. 17 ನೈಜೀರಿಯಾದಿಂದ ಎಂಟು ಚೀತಾಗಳನ್ನು ವಿಶೇಷ ವಿಮಾನ ಮೂಲಕ ತಂದು, ಕುನೋ ಅರಣ್ಯದಲ್ಲಿ ಬಿಡಲಾಗಿದೆ.

ಈ ಬಗ್ಗೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಈ ಕಾರ್ಯವನ್ನು ಶ್ಲಾಘಿಸಿದ್ದಾರೆ. ವಿಶೇಷವಾಗಿ ಸ್ಥಳಾಂತರ ಮಾಡಿದ ವಿಧಾನವನ್ನು ಕೊಂಡಾಡಿದ್ದಾರೆ. ಹಲವು ಮಾಧ್ಯಮಗಳು ಈ ಯೋಜನೆಗಾಗಿ ಬಳಸಿದ ವಿಶೇಷ ವಿಮಾನವೆಂದು ಹುಲಿಯ ಮುಖದ ಚಿತ್ರ ಬಿಡಿಸಿರುವ ವಿಮಾನದ ಫೋಟೋವೊಂದನ್ನು ಶೇರ್‌ ಮಾಡಿದ್ದಾರೆ. ಈ ಯೋಜನೆಗಾಗಿ ಭಾರತೀಯ ವಿಮಾನಕ್ಕೆ ಚಿರತೆಯ ಚಿತ್ರವನ್ನು ಬಿಡಿಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಚಿರತೆಗಳನ್ನು ಭಾರತಕ್ಕೆ ಸ್ಥಳಾಂತರಿಸಲು ಬಳಸಲಾಗುತ್ತಿರುವ ವಿಮಾನದ ಮೂಗಿನ ಮೇಲಿನ ಚಿತ್ರದಲ್ಲಿ ಕಾಣುವುದು ಹುಲಿ ಹೊರತು ಚಿರತೆಯಲ್ಲ. ವಿಮಾನವು ಭಾರತೀಯ ಒಡೆತನ ಹೊಂದಿಲ್ಲ ಮತ್ತು ಈ ಸಂದರ್ಭಕ್ಕಾಗಿ ವಿಶೇಷವಾಗಿ ಬಣ್ಣ ಬಳಿಯಲಾಗಿಲ್ಲ ಎಂದು newschecker.in ಸತ್ಯ ಪರಿಶೋಧನೆ ವೇಳೆ ಕಂಡು ಬಂದಿದೆ.

ಚಿರತೆ ತರಲು ಹುಲಿಯ ಚಿತ್ರವನ್ನು ಏಕೆ ಚಿತ್ರಿಸಿದ್ದಾರೆ ಎಂಬ ಅನುಮಾನವು ಈ ಚಿತ್ರದ ಹಿಂದಿರುವ ಸತ್ಯಾಂಶವನ್ನು ಬಹಿರಂಗಪಡಿಸಿದೆ. ಅಲ್ಲದೇ ಈ ವಿಮಾನದ ಚಿತ್ರವು 2015 ರಲ್ಲೇ ಸೈಬೀರಿಯನ್ ಟೈಮ್ಸ್ , ದಿ ಡೈಲಿ ಮೇಲ್ ಮೊದಲಾದ ಮಾಧ್ಯಮಗಳು 2015 ರಲ್ಲಿ ಮಾಡಿರುವ ವರದಿಯಲ್ಲಿ ಈಗ ವೈರಲ್ ಆಗುತ್ತಿರುವ ( ಹುಲಿ ಮೂತಿಯ ) ವಿಮಾನದ ಚಿತ್ರವು ಕಂಡುಬಂದಿದೆ.

ರಷ್ಯಾದ ವಾಹಕ ಟ್ರಾನ್ಸರೋ ಜೂನ್ 2015 ರಲ್ಲಿ ತನ್ನ ದೀರ್ಘ ಪ್ರಯಾಣದ ಬೋಯಿಂಗ್ 747-400 ವಿಮಾನಗಳಲ್ಲಿ ಹುಲಿ ಮುಖವನ್ನು ಒಳಗೊಂಡ ವಿಶಿಷ್ಟ ವಿನ್ಯಾಸವನ್ನು ಅನಾವರಣಗೊಳಿಸಿದೆ ಎಂದು ವರದಿ ಹೇಳಿದೆ. ಅಮುರ್ ಟೈಗರ್ ಕೇಂದ್ರದ ಸಂರಕ್ಷಣಾ ಕಾರ್ಯವನ್ನು ಉತ್ತೇಜಿಸಲು ಇದನ್ನು ವಿನ್ಯಾಸಗೊಳಿಸಲಾಗಿದ್ದು, ಕೇರಿಂಗ್ ದಿ ಟೈಗರ್ಸ್ ಟುಗೆದರ್‌ಗಾಗಿ ಜೂನ್ 2015 ರಲ್ಲಿ ವಿಮಾನವನ್ನು ವಿಶೇಷ ಬಣ್ಣಗಳಿಂದ ಚಿತ್ರಿಸಲಾಗಿದೆ ಎಂದು ಟೆರಾ ಏವಿಯಾ ವೆಬ್‌ಸೈಟ್ ಸ್ಪಷ್ಟವಾಗಿ ಉಲ್ಲೇಖಿಸಿದೆ. ಹಾಗಾಗಿ , ಈ ವಿಮಾನವನ್ನು ಚೀತಾಗಳನ್ನು ಕರೆತರಲು ಭಾರತ ಸರ್ಕಾರ ತಯಾರಿಸಿಲ್ಲವೆಂದು ಸಾಬೀತಾಗಿದೆ ಎಂದು newschecker.in ನಡೆಸಿದ ಸತ್ಯ ಪರಿಶೋಧನೆಯಲ್ಲಿ ತಿಳಿದುಬಂದಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.