Indian Army ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್
ಮಹಿಳಾ ಅಧಿಕಾರಿಗಳ ವಿರುದ್ಧ ತಾರತಮ್ಯ; ಅರ್ಜಿಯ ವಿಚಾರಣೆ
Team Udayavani, Sep 22, 2023, 7:00 PM IST
ಹೊಸದಿಲ್ಲಿ: ಕಾನೂನಿನ ವಿಷಯದಲ್ಲಿ ಮಧ್ಯಪ್ರವೇಶಿಸಬಹುದು ಆದರೆ ಭಾರತೀಯ ಸೇನೆಯ ವ್ಯವಹಾರಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ‘ಸೇನಾ ತುಕಡಿಗಳಿಗೆ ಕಮಾಂಡ್ ನೀಡುವಾಗ ಮಹಿಳಾ ಅಧಿಕಾರಿಗಳ ವಿರುದ್ಧ ತಾರತಮ್ಯ ಎಸಗಲಾಗುತ್ತಿದೆ’ ಎಂದು ಆರೋಪಿಸಿರುವ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಪ್ರಕರಣದ ವಿಚಾರಣೆಯನ್ನು ನಿರಾಕರಿಸಿದಾಗ, “ನಾವು ಸೇನೆಯ ವ್ಯವಹಾರಗಳನ್ನು ನಡೆಸಲು ಸಾಧ್ಯವಿಲ್ಲ ಮತ್ತು ಕಂಪನಿಗಳಿಗೆ ಹೇಗೆ ಆದೇಶ ನೀಡುತ್ತೇವೆ. ನಾವು ಕಾನೂನಿನ ತತ್ವಗಳಲ್ಲಿ ಮಧ್ಯಪ್ರವೇಶಿಸಬಹುದು, ಆದರೆ ನಾವು ಸೇನೆಯ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಖಂಡಿತವಾಗಿಯೂ ಸಾಧ್ಯವಿಲ್ಲ”ಎಂದು ಹೇಳಿದೆ.
ವಿಚಾರಣೆಯ ಆರಂಭದಲ್ಲಿ, ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಪೀಠಕ್ಕೆ, ‘ಈ ಪ್ರಕರಣವು ಸಶಸ್ತ್ರ ಪಡೆಗಳ ನ್ಯಾಯಮಂಡಳಿಗೆ ಹೋಗಬೇಕು’ ಎಂದು ಹೇಳಿದರು.
ಕೆಲವು ಮಹಿಳಾ ಅಧಿಕಾರಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ವಿ.ಮೋಹನ್ , 2020ರ ನಂತರ ಒಬ್ಬ ಮಹಿಳೆಗೂ ಬಡ್ತಿ ನೀಡಿಲ್ಲ, ಎಲ್ಲರೂ ಸೇವೆಯಲ್ಲಿದ್ದಾರೆ’’ ಎಂದು ಪೀಠಕ್ಕೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ